Rain News: ಬೀದರ್ ಜಿಲ್ಲೆಯ ಹಲವು ಕಡೆಗಳಲ್ಲಿ ಭಾರಿ ಮಳೆ; ವಿಡಿಯೋ ನೋಡಿ
ಕರ್ನಾಟದಲ್ಲಿ ಅವಧಿಗೂ ಮುನ್ನವೇ ಮುಂಗಾರು ಆರಂಭವಾಗುವ ಮುನ್ಸೂಚನೆ ಇದೆಯಾ ಎನ್ನುವ ಅನುಮಾನ ಮೂಡುತ್ತಿದೆ. ಕಳೆದ ಬುಧವಾರದಿಂದ ರಾಜ್ಯದ ಒಂದಿಲ್ಲೊಂದು ಕಡೆ ಮಳೆಯಾಗಿರುವ ಬಗ್ಗೆ ವರದಿಯಾಗುತ್ತಿದೆ. ಶನಿವಾರ ಕಲಬುರಗಿ ನಗರದಲ್ಲಿ ಲಘು ಮಳೆಯಾಗಿದ್ದರೆ. ಭಾನುವಾರ ಬೀದರ್ ಜಿಲ್ಲೆಯ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.
ಬೀರ್ ಜಿಲ್ಲೆಯ ಔರಾದ, ಭಾಲ್ಕಿ, ಬೀದರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಭಾರಿ ತಾಪಮಾನವಿರುವ ಬೀದರ್ ನಲ್ಲಿ ಬೇಸಿಗೆಯಲ್ಲಿ ಮಳೆಯಾಗಿರುವುದು ಜನರಲ್ಲಿ ಸಂತಸ ಮೂಡಿಸಿದೆ.

ಮಲಚಾಪುರದಲ್ಲಿ 34 ಮಿಮೀ ಮಳೆಯಾಗಿರುವ ಬಗ್ಗೆ ವರದಿಯಾಗಿದ್ದು ಅತಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಬೀದರ್ ನಗರದಲ್ಲಿ 28 ಮಿಮೀ ಮಳೆಯಾಗಿದೆ. ಬೀದರ್ ದಕ್ಷಿಣ ಭಾಗದಲ್ಲಿ 25 ಮಿಮೀ ಮಳೆ ಸುರಿದಿದೆ.
ಜೋಳದಬ್ಕಾ 21 ಮಿ.ಮೀ, ಆಣದೂರು 20.5 ಮಿ.ಮೀ, ಧೂಪತಮಹಾಗಾಂವ್ 17.5ಮಿ.ಮೀ, ಕೋಲಾರ್ಕೆ 17.5 ಮಿ.ಮೀ, ಮರಖಾಲ್ 13ಮಿ.ಮೀ, ಕಪಲಾಪುರ 13 ಮಿ.ಮೀ, ಅಮಲಾಪುರ 12 ಮಿಮೀ, ಬೋಂತಿ 10.5 ಮಿ.ಮೀ, ಭಂಡಾರಕುಂಠ 10.5 ಮಿ.ಮೀ, ಕೌತಾ 10 ಮಿ.ಮೀ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ವರದಿಯಲ್ಲಿ ಮಾಹಿತಿ ನೀಡಿದೆ.
ಭಾನುವಾರ ರಾತ್ರಿ ಕೂಡ ಬೀದರ್ ಜಿಲ್ಲೆ ಮತ್ತು ಗಡಿಭಾಗಕ್ಕೆ ಹೊಂದಿಕೊಂಡಿರುವ ತೆಲಂಗಾಣದ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
Bidar rains this evening
— Karnataka Weather (@Bnglrweatherman) March 17, 2024
The sound of the rain 🌧️☔ & the joy of updating it can't be expressed in words ❤️🤌🫰#KarnatakaRains https://t.co/mG41sMjhjx pic.twitter.com/6QjrYtkKkc
ರಾಜ್ಯದಲ್ಲಿ ದಿನವೂ ಮಳೆ!
ಒಂದು ಕಡೆ ರಾಜ್ಯದಲ್ಲಿ ಬಿಸಿಲು ತೀವ್ರವಾಗಿದೆ, ಮತ್ತೊಂದು ಕಡೆ ಸುಡುವ ಬಿಸಿಲಿನ ನಡುವೆಯೂ ಕಾದ ಹೆಂಚಿನ ಮೇಲೆ ನೀರು ಚಿಮುಕಿಸಿದಂತೆ ಮಳೆಯಾಗುತ್ತಿದೆ. ಕಳೆದ ಬುಧವಾರದಿಂದ ಭಾನುವಾರದವರೆಗೆ ದಿನಕ್ಕೆ ಒಂದೊಂದು ಜಿಲ್ಲೆಯಲ್ಲಿ ಮಳೆಯಾಗುತ್ತಿದೆ.
ಬುಧವಾರ ಕೊಡಗು, ಗುರುವಾರ ಚಿಕ್ಕಮಗಳೂರು, ಶುಕ್ರವಾರ ಮೈಸೂರು, ಶನಿವಾರ ಕಲಬುರಗಿ ಜಿಲ್ಲೆಯಗಳಲ್ಲಿ ಮಳೆಯಾಗಿದ್ದರೆ. ಭಾನುವಾರ ಬೀದರ್ ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ.
ಮಾರ್ಚ್ 20ರ ಬಳಿಕ ರಾಜ್ಯದ ಹಲವು ಕಡೆಗಳಲ್ಲಿ ಮಳೆ ಬೀಳುವ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮೈಸೂರು ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಬಹುದು ಎಂದು ಹೇಳಲಾಗಿದೆ. ಯುಗಾದಿ ವೇಳೆಗೆ ರಾಜ್ಯದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮೇ - ಜೂನ್ ವೇಳೆಗೆ ರಾಜ್ಯದಲ್ಲಿ ಈ ಬಾರಿ ಅತ್ಯುತ್ತಮ ಮಳೆಯಾಗುವ ಮುನ್ಸೂಚನೆ ಇದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications