Karnataka Rain: ಬಿಸಿಲಿನಿಂದ ಬಳಲಿದ್ದ ಉತ್ತರ ಕರ್ನಾಟಕದಲ್ಲಿ ಮಳೆ
ತಾಪಮಾನ ಹೆಚ್ಚಳದಿಂದ ಕಂಗೆಟ್ಟಿರುವ ಕರ್ನಾಟಕದ ಹಲವು ಭಾಗಗಳಲ್ಲಿ ಬೇಸಿಗೆಯಲ್ಲೇ ಮಳೆಯಾಗುತ್ತಿದ್ದು ಸ್ವಲ್ಪ ತಂಪಾಗಿಸುತ್ತಿದೆ. ಅದರಲ್ಲೂ ಬಿರು ಬೇಸಿಗೆ, ಹೆಚ್ಚು ತಾಪಮಾನ ಇರುವ ಉತ್ತರ ಕರ್ನಾಟಕ ಭಾಗದಲ್ಲಿ ಕೂಡ ಮಳೆಯಾಗುತ್ತಿರುವುದು ಸಮಾಧಾನ ತರಿಸಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಮಡಿಕೇರಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾದ ಬಳಿಕ, ಬೀದರ್, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಕೂಡ ಮಳೆಯಾಗಿತ್ತು.

ಭಾನುವಾರ ಬಾಗಲಕೋಟೆ, ಬೀದರ್, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಿದ್ದು ಜನರಲ್ಲಿ ಆಶಾಭಾವನೆ ಮೂಡಿಸಿದೆ. ಇನ್ನು ಶನಿವಾರ ಧಾರವಾಡ ನಗರದಲ್ಲಿ ಮಳೆಯಾದರೆ, ಭಾನುವಾರ ಹುಬ್ಬಳ್ಳಿಯಲ್ಲಿ ಮಳೆಯ ದರ್ಶನವಾಗಿದೆ.
ಹಲವು ಜಿಲ್ಲೆಗಳಲ್ಲಿ ಮಳೆ
ಬೀದರ್ ಜಿಲ್ಲೆಯ ಬಸವಕಲ್ಯಾಣ ಸೇರಿದಂತೆ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು ಲಘು ಮಳೆಯಾಗಿದೆ. ಯಾದಗಿರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಯ ಹಲವು ಕಡೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ.
ಮಾರ್ಚ್ ಅಂತ್ಯದ ವೇಳೆಗೆ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಶನಿವಾರ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಈ ಬಾರಿ ರಾಜ್ಯದಲ್ಲಿ ವಾಡಿಕೆಯಂತೆ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಮಳೆ ಯಾವಾಗ?
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ದರ್ಶನವಾಗಿದೆ. ಆದರೆ ಕುಡಿಯುವ ನೀರಿಗೂ ಅಭಾವ ಎದುರಿಸುತ್ತಿರುವ ರಾಜಧಾನಿ ಬೆಂಗಳೂರಿಗೆ ಮಳೆ ಯಾವಾಗ ಎನ್ನುವ ಪ್ರಶ್ನೆ ಎದುರಾಗಿದೆ.
ಹವಾಮಾನ ತಜ್ಞರ ಪ್ರಕಾರ ಬೆಂಗಳೂರಿನಲ್ಲಿ ಕೂಡ ಶೀಘ್ರದಲ್ಲೇ ಮಳೆಯಾಗುವ ಲಕ್ಷಣಗಳಿದೆ. ಮಾರ್ಚ್ ತಿಂಗಳ ಕೊನೆಯ ದಿನಗಳಲ್ಲಿ ಅಥವಾ ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಕೂಡ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರು ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಏಪ್ರಿಲ್ ತಿಂಗಳ ಮೊದಲ ಎರಡು ವಾರಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ಮಾತ್ರವಲ್ಲದೆ ರಾಜ್ಯಾದ್ಯಂತ ಆದಷ್ಟು ಬೇಗ ಮಳೆ ಆರಂಭವಾದರೆ ಸಾಕು ಎನ್ನುವಂತಹ ಪರಿಸ್ಥಿತಿ ಇದೆ. ಆದಷ್ಟು ಬೇಗ ಮಳೆ ಬಂದು ವಾತಾವರಣ ಸ್ವಲ್ಪ ತಂಪಾದರೆ ಸಾಕು ಎಂದು ಜನ ಕಾಯುತ್ತಿದ್ದಾರೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿಗೂ ತೊಂದರೆಯಾಗಿದೆ. ಒಂದೆರಡು ಹದ ಮಳೆಯಾದರೆ ಸ್ವಲ್ಪ ದಿನ ನೆಮ್ಮದಿಯಾಗಿರಬಹುದು ಎನ್ನುತ್ತಿದ್ದಾರೆ ಜನ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications