ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿರಾಜಪೇಟೆ, ಬಂಡೀಪುರದಲ್ಲಿ ಮಳೆ, ರೈತರಲ್ಲಿ ಸಂತಸ

|
Google Oneindia Kannada News

ಮಡಿಕೇರಿ, ಮಾರ್ಚ್ 20 : ವಿರಾಜಪೇಟೆ ಮತ್ತು ಬಂಡೀಪುರದಲ್ಲಿ ಬುಧವಾರ ಭಾರಿ ಮಳೆಯಾಗಿದೆ. ಮಳೆಯಿಂದಾಗಿ ರೈತರು ಸಂತಸಗೊಂಡಿದ್ದಾರೆ. ಬಂಡೀಪುರದಲ್ಲಿ ಮಳೆಯಾಗಿದ್ದರಿಂದ ಕಾಳ್ಗಿಚ್ಚಿನ ಆತಂಕ ದೂರವಾಗಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಮಳೆಯಾಗಿದೆ. ಪಾಲಿಬೆಟ್ಟ, ನೆಲ್ಯಹುದಿಕೇರಿ, ಅಮ್ಮತ್ತಿ, ಸುಂಟಿಕೊಟ್ಟ, ನಾಪೋಕ್ಲು, ಚೇರಂಬಾಣೆ ಮುಂತಾದ ಪ್ರದೇಶದಲ್ಲಿ ಮಳೆಯಾಗಿದೆ.

ಹವಾಮಾನ ವೈಪರೀತ್ಯ: 2018ರಲ್ಲಿ 1,425ಕ್ಕೂ ಹೆಚ್ಚು ಬಲಿಹವಾಮಾನ ವೈಪರೀತ್ಯ: 2018ರಲ್ಲಿ 1,425ಕ್ಕೂ ಹೆಚ್ಚು ಬಲಿ

ಹಲವು ದಿನಗಳಿಂದ ಮಳೆ ಇಲ್ಲದೇ ಬಿಸಿಲಿನ ತಾಪಕ್ಕೆ ಕಾಫಿ ಗಿಡ, ಕರಿಮೆಣಸಿನ ಬಳ್ಳಿ ಒಣಗಿ ಹೋಗಿದ್ದವು. ಬೆಳೆಗಾರರು ಕಾಫಿ ತೋಟಕ್ಕೆ ಕೆರೆಯಿಂದ ನೀರು ಹಾಯಿಸುತ್ತಿದ್ದರು. ಮಳೆ ಬಂದಿರುವುದರಿಂದ ರೈತರು ಸಂತಸಗೊಂಡಿದ್ದಾರೆ.

ವರ್ಷದ ಮೊದಲ ಮಳೆಯ ಅಬ್ಬರಕ್ಕೆ ಪುಳಕಗೊಂಡ ಮೈಸೂರು ಜನತೆವರ್ಷದ ಮೊದಲ ಮಳೆಯ ಅಬ್ಬರಕ್ಕೆ ಪುಳಕಗೊಂಡ ಮೈಸೂರು ಜನತೆ

Heavy rain in Virajapet and Bandipur

ವಿರಾಜಪೇಟೆಯಲ್ಲಿ 27 ಮಿ.ಮೀ, ಸೋಮವಾರಪೇಟೆಯಲ್ಲಿ 26 ಮಿ.ಮೀ.ಮಳೆಯಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆ ಸುರಿದಿದ್ದರಿಂದ ಸಂತಸಗೊಂಡಿದ್ದಾರೆ. ಈ ವಾರದಲ್ಲಿ ಮತ್ತೆ ಮಳೆಯಾಗುವ ನಿರೀಕ್ಷೆ ಇದೆ.

ಬಂಡೀಪುರಕ್ಕೆ ಕೃಪೆ ತೋರಿದ ವರುಣ: ನಿಟ್ಟುಸಿರುಬಿಟ್ಟ ಜೀವಸಂಕುಲಬಂಡೀಪುರಕ್ಕೆ ಕೃಪೆ ತೋರಿದ ವರುಣ: ನಿಟ್ಟುಸಿರುಬಿಟ್ಟ ಜೀವಸಂಕುಲ

ಬಂಡೀಪುರದಲ್ಲಿಯೂ ಮಳೆ : ಬಂಡೀಪುರದ ಎ.ಎಂ.ಗುಡಿ ವಲಯದಲ್ಲಿ ಮಳೆಯಾಗಿದ್ದು ಒಣಗಿ ನಿಂತಿದ್ದ ಕಾಡಿನಲ್ಲಿ ಕಾಳ್ಗಿಚ್ಚು ಉಂಟಾಗುವ ಆತಂಕ ದೂರವಾಗಿದೆ. ಸಣ್ಣಪುಟ್ಟ ಹಳ್ಳಗಳಲ್ಲಿ ನೀರು ತುಂಬಿಕೊಂಡಿದ್ದು ಕಾಡುಪ್ರಾಣಿಗಳಿಗೆ ಕುಡಿಯುವ ನೀರಿಗೆ ಆಸರೆಯಾಗಿದೆ.

ಎಚ್.ಡಿ.ಕೋಟೆ ತಾಲೂಕಿನ ಅಣ್ಣೂರು, ಚೊಕ್ಕನಹಳ್ಳಿಯಲ್ಲಿ 20.5 ಮೀ.ಮೀ, ಹುಣಸೂರಿನ ಹನಗೋಡಿನಲ್ಲಿ 7 ಮೀ.ಮೀ ಮಳೆಯಾಗಿದೆ. ಪಿರಿಯಾಪಟ್ಟಣದಲ್ಲಿ ತುಂತುರು ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

English summary
Heavy rains lashed Virajpet and Bandipur on March 20, 2019. Coffee farmers happy after rain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X