ಕೊಡಗಿನ ಸುಂಟಿಕೊಪ್ಪದಲ್ಲಿ ಸುರಿದ ಮೊದಲ ಬೇಸಿಗೆ ಮಳೆ
ಮಡಿಕೇರಿ, ಮೇ 04 : ಕೊಡಗಿನ ಕೆಲವೆಡೆ ಮಂಗಳವಾರ ಸಂಜೆ ಭಾರೀ ಮಳೆ ಸುರಿದಿದೆ. ಬಿಸಿಲ ಬೇಗೆಯಿಂದ ಬಸವಳಿದಿದ್ದವರನ್ನು ತಂಪು ಮಾಡಿದೆ. ಆದರೆ, ಮಡಿಕೇರಿ ಸಮೀಪದ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಮಳೆಗಾಳಿಗೆ ಮರಗಳು ಧರೆಗುರುಳಿ ವಿದ್ಯುತ್ ಕಂಬಗಳು ನೆಲಸಮವಾಗಿದ್ದರಿಂದ ಜನ ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ.

ಕೆಲವೆಡೆ ಮರಗಳು ಹಾಗೂ ವಿದ್ಯುತ್ ತಂತಿಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಇದರಿಂದ ಚೆಸ್ಕಾಂಗೆ ಲಕ್ಷಾಂತರ ರೂ.ಗಳು ನಷ್ಟವಾಗಿದೆ. ಮಿಂಚು, ಗುಡುಗು, ಸಿಡಿಲಿನೊಂದಿಗೆ ಆರ್ಭಟಿಸಿದ ಮಳೆ ರಭಸವಾಗಿ ಸುರಿದಿದ್ದು, ನೀರು ಚರಂಡಿಗಳಲ್ಲಿ ಉಕ್ಕಿ ಹರಿಯಿತು. ಮಳೆಯಿಲ್ಲದೆ ಗಿಡಮರಗಳು ಒಣಗುವ ಸ್ಥಿತಿಗೆ ತಲುಪಿತ್ತು. ಮಳೆ ಬಿದ್ದಿದ್ದರಿಂದ ಗಿಡಮರಗಳಿಗೆ ಜೀವ ಬಂದಂತಾಗಿದೆ. [ಬೆಂದು ಬಸವಳಿದ ಕರ್ನಾಟಕಕ್ಕೆ ಅಲ್ಲಲ್ಲಿ ಮಳೆ ಸಿಂಚನ]

ಸಾಮಾನ್ಯವಾಗಿ ಈ ರೀತಿಯ ಮಳೆ ಮಾರ್ಚ್ನಲ್ಲೇ ಸುರಿಯುತ್ತಿತ್ತಾದರೂ ಈ ಬಾರಿ ಮೇ ತನಕ ಕಾಯುವಂತಾಗಿದೆ. ಮಳೆಗೆ ಬೇರು ಕ್ಷೀಣಗೊಂಡಿದ್ದ ಹಲವು ಮರಗಳು ನೆಲಕ್ಕೆ ಬಿದ್ದಿವೆ. ಸುಂಟಿಕೊಪ್ಪ ಸಮೀಪದ ಕೆಚ್ಚೆಟ್ಟಿ ತೋಟದ ಬಳಿಯಲ್ಲಿ ರಸ್ತೆಗೆ ಅಡ್ಡಲಾಗಿ ಮರಗಳು ಬಿದ್ದಿದ್ದರಿಂದ 5 ವಿದ್ಯುತ್ ಕಂಬ ಹಾಗೂ ತಂತಿಗಳು ತುಂಡಾಗಿವೆ. ಆದರೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.

ಸುಂಟಿಕೊಪ್ಪ-ಮಾದಾಪುರ ಸಂಪರ್ಕ ರಸ್ತೆಯಲ್ಲಿ ಮರಬಿದ್ದಿದ್ದರಿಂದ ಅದನ್ನು ತೆರವುಗೊಳಿಸಲು ಹರಸಾಹಸ ಪಡಬೇಕಾಯಿತು. ಇದರಿಂದ ಎರಡು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಚೆಸ್ಕಾಂ ಇಲಾಖೆಯ ಕಿರಿಯ ಅಭಿಯಂತರ ಬಸವರಾಜ್ ಹಾಗೂ ಸಿಬ್ಬಂದಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳ ಘಟನಾ ಸ್ಥಳಕ್ಕೆ ತೆರಳಿ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. [ಮಳೆರಾಯನ ಓಲೈಕೆಗೆ ಎಚ್ಡಿ ಕೋಟೆಯಲ್ಲಿ ಕಪ್ಪೆ ಮೆರವಣಿಗೆ]

ಮೊದಲ ಮಳೆ ಅಬ್ಬರಿಸಿದ್ದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ಕಂಬ ಹಾಗೂ ತಂತಿಗಳು ನಾಶವಾಗಿದ್ದು ಲಕ್ಷಾಂತರ ರೂಪಾಯಿ ನಷ್ಟವಾಗಿರುವುದಾಗಿ ಈ ವಿಭಾಗದ ಚೆಸ್ಕಾಂ ಕಿರಿಯ ಅಭಿಯಂತರ ಬಸವರಾಜ್ ಒನ್ಇಂಡಿಯಾ ಕನ್ನಡಕ್ಕೆ ಹೇಳಿದ್ದಾರೆ.
More From
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು












Click it and Unblock the Notifications