ಕೊಡಗಿನ ಸುಂಟಿಕೊಪ್ಪದಲ್ಲಿ ಸುರಿದ ಮೊದಲ ಬೇಸಿಗೆ ಮಳೆ
ಮಡಿಕೇರಿ, ಮೇ 04 : ಕೊಡಗಿನ ಕೆಲವೆಡೆ ಮಂಗಳವಾರ ಸಂಜೆ ಭಾರೀ ಮಳೆ ಸುರಿದಿದೆ. ಬಿಸಿಲ ಬೇಗೆಯಿಂದ ಬಸವಳಿದಿದ್ದವರನ್ನು ತಂಪು ಮಾಡಿದೆ. ಆದರೆ, ಮಡಿಕೇರಿ ಸಮೀಪದ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಮಳೆಗಾಳಿಗೆ ಮರಗಳು ಧರೆಗುರುಳಿ ವಿದ್ಯುತ್ ಕಂಬಗಳು ನೆಲಸಮವಾಗಿದ್ದರಿಂದ ಜನ ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ.

ಕೆಲವೆಡೆ ಮರಗಳು ಹಾಗೂ ವಿದ್ಯುತ್ ತಂತಿಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಇದರಿಂದ ಚೆಸ್ಕಾಂಗೆ ಲಕ್ಷಾಂತರ ರೂ.ಗಳು ನಷ್ಟವಾಗಿದೆ. ಮಿಂಚು, ಗುಡುಗು, ಸಿಡಿಲಿನೊಂದಿಗೆ ಆರ್ಭಟಿಸಿದ ಮಳೆ ರಭಸವಾಗಿ ಸುರಿದಿದ್ದು, ನೀರು ಚರಂಡಿಗಳಲ್ಲಿ ಉಕ್ಕಿ ಹರಿಯಿತು. ಮಳೆಯಿಲ್ಲದೆ ಗಿಡಮರಗಳು ಒಣಗುವ ಸ್ಥಿತಿಗೆ ತಲುಪಿತ್ತು. ಮಳೆ ಬಿದ್ದಿದ್ದರಿಂದ ಗಿಡಮರಗಳಿಗೆ ಜೀವ ಬಂದಂತಾಗಿದೆ. [ಬೆಂದು ಬಸವಳಿದ ಕರ್ನಾಟಕಕ್ಕೆ ಅಲ್ಲಲ್ಲಿ ಮಳೆ ಸಿಂಚನ]

ಸಾಮಾನ್ಯವಾಗಿ ಈ ರೀತಿಯ ಮಳೆ ಮಾರ್ಚ್ನಲ್ಲೇ ಸುರಿಯುತ್ತಿತ್ತಾದರೂ ಈ ಬಾರಿ ಮೇ ತನಕ ಕಾಯುವಂತಾಗಿದೆ. ಮಳೆಗೆ ಬೇರು ಕ್ಷೀಣಗೊಂಡಿದ್ದ ಹಲವು ಮರಗಳು ನೆಲಕ್ಕೆ ಬಿದ್ದಿವೆ. ಸುಂಟಿಕೊಪ್ಪ ಸಮೀಪದ ಕೆಚ್ಚೆಟ್ಟಿ ತೋಟದ ಬಳಿಯಲ್ಲಿ ರಸ್ತೆಗೆ ಅಡ್ಡಲಾಗಿ ಮರಗಳು ಬಿದ್ದಿದ್ದರಿಂದ 5 ವಿದ್ಯುತ್ ಕಂಬ ಹಾಗೂ ತಂತಿಗಳು ತುಂಡಾಗಿವೆ. ಆದರೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.

ಸುಂಟಿಕೊಪ್ಪ-ಮಾದಾಪುರ ಸಂಪರ್ಕ ರಸ್ತೆಯಲ್ಲಿ ಮರಬಿದ್ದಿದ್ದರಿಂದ ಅದನ್ನು ತೆರವುಗೊಳಿಸಲು ಹರಸಾಹಸ ಪಡಬೇಕಾಯಿತು. ಇದರಿಂದ ಎರಡು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಚೆಸ್ಕಾಂ ಇಲಾಖೆಯ ಕಿರಿಯ ಅಭಿಯಂತರ ಬಸವರಾಜ್ ಹಾಗೂ ಸಿಬ್ಬಂದಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳ ಘಟನಾ ಸ್ಥಳಕ್ಕೆ ತೆರಳಿ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. [ಮಳೆರಾಯನ ಓಲೈಕೆಗೆ ಎಚ್ಡಿ ಕೋಟೆಯಲ್ಲಿ ಕಪ್ಪೆ ಮೆರವಣಿಗೆ]

ಮೊದಲ ಮಳೆ ಅಬ್ಬರಿಸಿದ್ದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ಕಂಬ ಹಾಗೂ ತಂತಿಗಳು ನಾಶವಾಗಿದ್ದು ಲಕ್ಷಾಂತರ ರೂಪಾಯಿ ನಷ್ಟವಾಗಿರುವುದಾಗಿ ಈ ವಿಭಾಗದ ಚೆಸ್ಕಾಂ ಕಿರಿಯ ಅಭಿಯಂತರ ಬಸವರಾಜ್ ಒನ್ಇಂಡಿಯಾ ಕನ್ನಡಕ್ಕೆ ಹೇಳಿದ್ದಾರೆ.
More From
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications