Rain Alert: ಚಂಡಮಾರುತ ತೀವ್ರತೆ: ಕರ್ನಾಟಕದ 9 ಜಿಲ್ಲೆಗಳಿಗೆ 'ರೆಡ್ ಅಲರ್ಟ್' 5 ದಿನದ ಹವಾಮಾನ ವರದಿ ಇಲ್ಲಿದೆ

ಬೆಂಗಳೂರು, ಜೂನ್ 10: ರಾಜ್ಯದ ಹತ್ತಾರು ಜಿಲ್ಲೆಗಳಲ್ಲಿ ಮಳೆ ಆರ್ಭಟ ಶುರುವಾಗಿದೆ. ಈ ಮುಂಗಾರು ಮಳೆ ಮತ್ತಷ್ಟು ರೌದ್ರಾವತಾರ ತಾಳು ಎಲ್ಲ ಲಕ್ಷಣಗಳು ಇವೆ. ಕಾರಣ ಬಂಗಾಳಕೊಲ್ಲಿ ಸಮುದ್ರ ಭಾಗದಲ್ಲಿ ಚಂಡಮಾರುತ ಪರಿಚಲನೆ ಮುಂದುವರಿದಿದೆ. ಪರಿಣಾಮ ಕರ್ನಾಟಕದಾದ್ಯಂತ ಮುಂದಿನ 05 ದಿನ ಸಾಧಾರಣದಿಂದ ಭಾರೀ ಮತ್ತು ಅತೀ ಭಾರೀ ಮಳೆ ಆಗುವ ನಿರೀಕ್ಷೆಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ಕರ್ನಾಟಕದ ವಿಜ್ಞಾನಿ ಹಾಗೂ ಹವಾಮಾನ ತಜ್ಞ ಡಾ.ಸಿ.ಎಸ್. ಪಾಟೀಲ್ ಅವರು ಮುನ್ಸೂಚನೆ ನೀಡಿದ್ದಾರೆ.

ಸಮುದ್ರ ಭಾಗದಲ್ಲಿ ವೈಪರೀತ್ಯ ಗಾಳಿಯ ಎತ್ತರ 3.5 ರಿಂದ 4.5 ಕಿಲೋ ಮೀಟರ್ ಎತ್ತರದಲ್ಲಿದೆ. ಇದರ ಪ್ರಭಾವದಿಂದಾಗಿ ರಾಜ್ಯದ ಮಲೆನಾಡು, ಒಳನಾಡು ಭಾಗಗಳಲ್ಲಿ ಜೋರು ಮಳೆ ಆಗಲಿದೆ. ಆರಂಭದಲ್ಲಿ ಸುರಿದಿದ್ದ ಮುಂಗಾರು ಮಳೆ ಕೊಂಚ ಬಿಡುವ ನೀಡಿತ್ತು. ಇದೀಗ ಮೂರು ದಿನಗಳಿಂದ ರಾಜ್ಯಾದ್ಯಂತ ಎರಡನೇ ಬಾರಿ ಮುಂಗಾರು ಸಕ್ರಿಯವಾಗಿದೆ. ಕರಾವಳಿಯ ಮೂರು ಜಿಲ್ಲೆಗಳು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಆರ್ಭಟ ಕಂಡು ಬರಲಿದೆ. ಈ ವೇಳೆ ಗಾಳಿಯ ವೇಗ ಪ್ರತಿ ಗಂಟೆಗೆ 40-50 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ.

Heavy Rain Likely in These Karnataka Districts for Next 5 Days Due to Cycloninc Circulation

ಜೂನ್ 16ರವರೆಗೆ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಇಂದು ಮಂಗಳವಾರ ವಿಜಯಪುರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಆಗಿದೆ. ಮೋಡ ಕವಿದ ವಾತಾವರಣ ಜೊತೆಗೆ ಧಾರಾಕಾರ ಮಳೆ ಆಗಿದೆ. ಮುನ್ಸೂಚನೆ ನೋಡುವುದಾದರೆ, ಜೂನ್ 12-16ರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಮೇತ ಮಳೆ ಆಗಲಿದೆ. ಮಳೆ ಜೊತೆಗೆ ಗಾಳಿಯ ವೇಗ ಹೆಚ್ಚಾಗಿರಲಿದೆ ಎಂದರು.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜೂನ್ 13, 14, 15 & 16ರವರೆಗೆ ಅತ್ಯಧಿಕ ಭಾರಿ ಅಂದರೆ 200 ಮಿಲಿ ಮೀಟರ್‌ಗೂ ಹೆಚ್ಚು ಮಳೆ ಆಗಲಿದೆ. ಹೀಗಾಗಿ ''ರೆಡ್ ಅಲರ್ಟ್ ನೀಡಲಾಗಿದೆ. ಇದರೊಂದಿಗೆ ಬೆಳಗಾವಿ, ಹಾವೇರಿ, ಧಾರವಾಡಕ್ಕೆ ನಾಳೆ 01 ದಿನ ಹಾಗೂ ಕೊಡಗು ಜಿಲ್ಲೆಗೆ 02 ದಿನ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಒಟ್ಟು 03 ದಿನ 'ರೆಡ್ ಅಲರ್ಟ್' ಘೋಷಿಸಲಾಗಿದೆ ಎಂದು ವರದಿ ತಿಳಿಸಿದೆ.

ಈ ಜಿಲ್ಲೆಗಳಿಗೆ ಭಾರೀ ಮಳೆ: ಆರೆಂಜ್ ಅಲರ್ಟ್

ರೆಡ್ ಅಲರ್ಟ್ ಜಿಲ್ಲೆಗಳು ಮತ್ತು ಆ ದಿನಗಳನ್ನು ಹೊರತುಪಡಿಸಿದರೆ ಉಳಿದ ದಿನ (ಜೂನ್ 16ರವರೆಗೆ) ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ದಾವಣಗೆರೆ, ಚಿಕ್ಕಮಗಳೂರು, ಕೊಡಗು, ಮೈಸೂರು, ವಿಜಯಪುರ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಎರಡು ದಿನ 'ಆರೆಂಜ್ ಅಲರ್ಟ್' ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಬಿಟ್ಟು ಬಿಡದೇ ಗರಿಷ್ಠ 200 ಮಿಲಿ ಮೀಟರ್‌ವರೆಗೆ ಧಾರಾಕಾರ ಮಳೆ ಆಗಲಿದೆ.

Heavy Rain Likely in These Karnataka Districts for Next 5 Days Due to Cycloninc Circulation

ಯೆಲ್ಲೋ ಅಲರ್ಟ್ ಜಿಲ್ಲೆಗಳಿವು

ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ಕೋಲಾರ, ಹಾಸನ, ಚಿತ್ರದುರ್ಗ, ಬೆಂಗಳೂರು, ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗರಿಷ್ಠ 110 ಮಿಲಿ ಮೀಟರ್ ವರೆಗೆ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಈಗಾಗಲೇ ಜೋರು ಮಳೆ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಅಗಲಿದೆ. ಸಾಮಾನ್ಯವಾಗಿ ಮಬ್ಬು ವಾತಾವರಣ ಕವಿಯಲಿದೆ. ಗಾಳಿ ಪ್ರಮಾಣ 40-50 ಕಿಲೋ ಮೀಟರ್‌ವರೆಗೆ ಆಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+