ರಾಯಚೂರಿನಲ್ಲಿ ಬಿರುಗಾಳಿ ಸಹಿತ ಮಳೆ, ಜನಜೀವನ ಅಸ್ತವ್ಯಸ್ತ
ರಾಯಚೂರು, ಜೂನ್ 06 : ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ರಾಯಚೂರು ತಾಲೂಕಿನ ಮರ್ಚಡ್ ಗ್ರಾಮದಲ್ಲಿ 10 ಮನೆಗಳು ಜಖಂಗೊಂಡಿದ್ದು ಟಿನ್ ಶಡ್ ಗಳು ಹಾರಿಹೋಗಿವೆ. ನಾಲ್ಕು ಮರಗಳು ಧರೆಗುರಳಿದ್ದು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ವಿದ್ಯುತ್ ಕಂಬದ ಮೇಲೆ ಮರ ಬಿದ್ದಿದ್ದರಿಂದ ರಾತ್ರಿಯಿಂದ ವಿದ್ಯುತ್ ಸಂಪರ್ಕ ಕಡಿತವಾಗಿದೆ.

ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಅಪಾರ ಪ್ರಮಾಣದ ಹಾನಿಯಾಗಿದ್ದರೂ ಈವರೆಗೆ ಯಾವ ಅಧಿಕಾರಿಗಳೂ ಗ್ರಾಮಕ್ಕೆ ಭೇಟಿ ನೀಡದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.












Click it and Unblock the Notifications