ಏಪ್ರಿಲ್ 30ರ ಬಳಿಕ ಕರ್ನಾಟಕದಲ್ಲಿ ಭಾರಿ ಮಳೆ ಸಂಭವ
ಬೆಂಗಳೂರು, ಏ.26: ಮುಂದಿನ ವಾರ ತಮಿಳುನಾಡು, ಕೇರಳ, ಪುದುಚೇರಿ ಕರ್ನಾಟಕದ ಕೆಲವು ಭಾಗಗಳಿಗೆ ಪ್ರಯಾಣಿಸಲು ನಿರ್ಧಾರ ಮಾಡಿದ್ದರೆ ಮತ್ತೊಮ್ಮೆ ಯೋಚಿಸಿ.
ಭಾರತೀಯ ಹವಾಮಾನ ಇಲಾಖೆ ವರದಿ ಪ್ರಕಾರ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗುವ ಸಾಧ್ಯತೆ ಇದ್ದು, ತಮಿಳುನಾಡು, ಚಿಕ್ಕಮಗಳೂರು, ಮಂಗಳೂರು, ಕೇರಳದಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.
ಶುಕ್ರವಾರ ಹಾಗೂ ಶನಿವಾರ ಕರ್ನಾಟಕದ ಕೆಲ ಭಾಗಗಳಲ್ಲಿ ಸಾಧಾರಣೆ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರದ ಬಳಿಕ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಬೆಂಗಳೂರು, ಮೈಸೂರು, ಕರ್ನಾಟಕದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಲಿದೆ.
ಕಳೆದ ಎರಡು ತಿಂಗಳಿನಿಂದ ಬಿಸಿಲಿನಿಂದ ಹೈರಾಣಾಗಿದ್ದ ಜನರು ಮಳೆ ಎಂದು ಬರುವುದೋ ಎಂದು ಕಾತುರದಿಂದ ಕಾಯುತ್ತಿದ್ದಾರೆ. ತಮಿಳುನಾಡಿನಲ್ಲಿ ಮುಂದಿನ 24 ಗಂಟೆಯ ಒಳಗೆ ಫೆನಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದು ಭಾರಿ ಮಳೆ ನಿರೀಕ್ಷಿಸಲಾಗಿದೆ.












Click it and Unblock the Notifications