ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರಾವಳಿಯಲ್ಲಿ ಇನ್ನೂ ಎರಡು ದಿನ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

By Manjunatha
|
Google Oneindia Kannada News

ಬೆಂಗಳೂರು, ಆಗಸ್ಟ್ 16: ಕರಾವಳಿ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರಿ ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರೆಯಲಿದೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕಳೆದ ಕೆಲ ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಕಡೆ ಭೂ ಕುಸಿತ, ಗುಡ್ಡ ಕುಸಿತಗಳಾಗಿವೆ, ಮಳೆಗೆ ಕೆಲ ಜೀವಗಳೂ ಬಲಿಯಾಗಿವೆ, ಕೆಲವರು ಮನೆ ಕಳೆದುಕೊಂಡಿದ್ದಾರೆ.

ಕೊಡಗು ಪ್ರವಾಹ: ವೈಮಾನಿಕ ಕಾರ್ಯಾಚರಣೆಗೆ ಸಿಎಂ ಸೂಚನೆಕೊಡಗು ಪ್ರವಾಹ: ವೈಮಾನಿಕ ಕಾರ್ಯಾಚರಣೆಗೆ ಸಿಎಂ ಸೂಚನೆ

ಇದೇ ಭೀಕರ ಮಳೆ ಇನ್ನೂ ಎರಡು ಮುಂದುವರೆಯಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕರಾವಳಿ ಜಿಲ್ಲೆ ಮಾತ್ರವಲ್ಲದೆ ಇಂದಿನಿಂದ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿಯೂ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

heavy rain will continue two more days in coastal districts

ಬೆಂಗಳೂರಿನಲ್ಲೂ ಇನ್ನೂ ಕೆಲವು ದಿನ ಮೋಡ ಮುಸುಕಿದ ವಾತಾವರಣ ಇರಲಿದ್ದು, ಆಗಾಗ ಮಳೆಯಾಗುವ ಸಾಧ್ಯತೆ ಇದೆ.

ಮುಳ್ಳಯ್ಯನ ಗಿರಿ, ಬಾಬಾ ಬುಡನ್ ಗಿರಿಗೆ ಪ್ರವಾಸಿಗರು ಹೋಗದಿರುವುದೇ ಸೇಫ್ಮುಳ್ಳಯ್ಯನ ಗಿರಿ, ಬಾಬಾ ಬುಡನ್ ಗಿರಿಗೆ ಪ್ರವಾಸಿಗರು ಹೋಗದಿರುವುದೇ ಸೇಫ್

ಮಳೆ ಪೀಡಿತ ಪ್ರದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ರಕ್ಷಿಸಲು ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು, ಅಗತ್ಯ ಇದ್ದಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲು ಸೂಚಿಸಿದ್ದಾರೆ.

English summary
The metrological department warns that heavy rain in coastal district will continue for two more days. Public would be aware and be ready to face rain. Bengaluru will also get some rain in todays.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X