ಜೂನ್ 28 ರಿಂದ 2 ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ
ಬೆಂಗಳೂರು, ಜೂನ್ 25: ರಾಜ್ಯದಲ್ಲಿ ಜೂನ್ 28ರಿಂದ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 28 ರಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ರಾಜ್ಯದಲ್ಲಿ ಇಳಿಕೆಯಾಗಿದ್ದ ಮಳೆ ಇದೀಗ ಮತ್ತೆ ಅಬ್ಬರಿಸಲಿದೆ ಎನ್ನಲಾಗಿದೆ. ಮತ್ತೆ ಕರಾವಳಿಯಲ್ಲಿ ಮಳೆಯ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಜೂನ್ 28ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಲಿದ್ದು, ನಾಳೆಯಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಮಳೆ ಸಾಧ್ಯತೆ
ಬೆಂಗಳೂರಿನಲ್ಲಿ ಕೂಡ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ನಾಳೆ ಸಾಧಾರಣ ಮಳೆಯಾಗಲಿದೆ. ಜೂನ್ 27 ಮತ್ತು 28ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆ
ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಲಿದ್ದು, ನಾಳೆಯಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ವಲಯದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಕೂಡ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮತ್ತೊಂದು ಹಂತದ ಮಳೆ ಮತ್ತೆ ಶುರುವಾಗುವ ನಿರೀಕ್ಷೆಯಿದೆ.

ಸಾಧಾರಣ ಮಳೆ
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ನಾಳೆ ಸಾಧಾರಣ ಮಳೆಯಾಗಲಿದೆ. ಜೂನ್ 27 ಮತ್ತು 28ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನಿನ್ನೆ ಕೂಡ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಇಂದು ಕೂಡ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಬೆಳಗ್ಗೆಯಿಂದಲೇ ಮಳೆ ಸುರಿಯಲಿದೆ. ಬಳಿಕ ಸಂಜೆಯ ನಂತರ ಮತ್ತೆ ಮಳೆ ಆರಂಭವಾಗಲಿದೆ.

ವಿವಿಧ ರಾಜ್ಯಗಳಲ್ಲೂ ಮಳೆ
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಳೆಯ ಬಗ್ಗೆ ಹೊಸ ಪ್ರಕಟಣೆ ನೀಡಿದ್ದು, ಒಟ್ಟು 13 ರಾಜ್ಯಗಳಲ್ಲಿ ಜೂನ್ 28ನೇ ತಾರೀಖಿನ ತನಕ ಭಾರೀ ಮಳೆ ಸುರಿಯಲಿದೆ ಎಂಬ ಮುನ್ಸೂಚನೆ ನೀಡಿದೆ. ಆ ವರದಿಯ ಪ್ರಕಾರ ಉತ್ತರ ಪ್ರದೇಶ, ಮಧ್ಯಪ್ರದೇಶ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಹಾಗೂ ಗುಜರಾತ್ ರಾಜ್ಯಗಳಲ್ಲಿ ಜೂನ್ 28ರ ತನಕ ವಿಪರೀತ ಮಳೆ ಸುರಿಯುವ ಸಾಧ್ಯತೆ ದಟ್ಟವಾಗಿದೆ.











Click it and Unblock the Notifications