ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್
ಬೆಂಗಳೂರು, ಜುಲೈ 15: ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆ ಮುಂದುವರೆಯಲಿದ್ದು, 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ನೈಋತ್ಯ ಮುಂಗಾರು ಚುರುಕು: ರಾಜ್ಯಾದ್ಯಂತ ಜುಲೈ 18ರವರೆಗೆ ಭಾರಿ ಮಳೆ
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಯೆ ಆರೆಂಜ್ ಅಲರ್ಟ್, ರಾಮನಗರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅತಿ ಹೆಚ್ಚು ಮಳೆಯಾಗಿರುವ ಪ್ರದೇಶಗಳು
ಆಗುಂಬೆಯಲ್ಲಿ 14 ಸೆಂ.ಮೀ ಮಳೆಯಾಗಿದೆ, ಕದ್ರದಲ್ಲಿ 13 ಸೆಂ.ಮೀ, ತಾಳಗುಪ್ಪದಲ್ಲಿ 11 ಸೆಂ.ಮೀ, ಸುಬ್ರಹ್ಮಣ್ಯ, ಭಾಗಮಂಡಲ, ಪುತ್ತೂರು, ಸುಳ್ಯ, ಉಪ್ಪಿನಂಗಡಿ, ಕಾರ್ಕಳ, ಸಿದ್ದಾಪುರ, ಬೆಳ್ತಂಗಡಿ, ಮಾಣಿ, ಮಂಗಳೂರು, ಬಂಟ್ವಾಳ, ಯಲ್ಲಾಪುರ, ತೀರ್ಥಹಳ್ಳಿ, ಲಿಂಗನಮಕ್ಕಿ, ಶೃಂಗೇರಿ, ಜಯಪುರದಲ್ಲಿ ಮಳೆಯಾಗಿದೆ.
ಎಲ್ಲೆಲ್ಲಿ ಸಾಧಾರಣ ಮಳೆಯಾಗಿದೆ?
ಮೂಡುಬಿದಿರೆ, ಚಿಂಚೋಳಿ, ವಿರಾಜಪೇಟೆ, ಕಳಸ, ಕಾರವಾರ, ಕೋಟ, ಭಟ್ಕಳ, ಮಂಚಿಕೆರೆ, ಮುಲ್ಕಿ, ಕೊಟ್ಟಿಗೆಹಾರ, ಸೋಮವಾರಪೇಟೆ, ಹೊನ್ನಾವರ, ಸೇಡಂ, ಶಿರಾಲಿ, ಗೋಕರ್ಣ, ಉಡುಪಿ, ಪಣಂಬೂರು, ಸೊರಬ, ಆನವಟ್ಟಿ, ಚಿತ್ರದುರ್ಗ, ಕಿರವತ್ತಿ, ಉಚ್ಚಂಗಿದುರ್ಗ, ವಿಜಯಪುರ, ಎಚ್ಡಿ ಕೋಟೆ, ಪೆರಿಯಪಟ್ಟಣ, ಚನ್ನಗಿರಿ, ಹೊನ್ನಾಳಿ, ಚಳ್ಳಕೆರೆ, ಸಂತೆಬೆನ್ನೂರು, ಶ್ರೀರಾಂಪುರ, ಗುಂಡ್ಲುಪೇಟೆ, ಕಡೂರು, ಕೂಡ್ಲಿಗಿ, ದಾವಣಗೆರೆ, ಹಾಸನ, ಕೃಷ್ಣರಾಜಪೇಟೆ, ಚಿಂತಾಮಣಿ, ಚಿಕ್ಕಮಗಳೂರು, ಹುಣಸೂರಿನಲ್ಲಿ ಮಳೆಯಾಗಿದೆ.
ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಮುನ್ಸೂಚನೆ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಯೆ ಆರೆಂಜ್ ಅಲರ್ಟ್, ರಾಮನಗರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Recommended Video
ಬೆಂಗಳೂರು ಹವಾಮಾನ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಲಿದೆ, 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್ಎಎಲ್ನಲ್ಲಿ 25.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.