ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನವೆಂಬರ್ 17ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ

|
Google Oneindia Kannada News

ಬೆಂಗಳೂರು, ನವೆಂಬರ್ 13: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 17ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದನ್ನು ಹೊರತುಪಡಿಸಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಲಿದೆ.

ಬೆಂಗಳೂರು ನಗರ ಸತತ ಎರಡನೇ ದಿನ ಜಿಟಿಜಿಟಿ ಮಳೆ, ಚಳಿ, ದಟ್ಟಮೋಡ ಕವಿದ ಮತ್ತು ಮಂಜು ತುಂಬಿದ ವಾತಾವರಣ ಅನುಭವಿಸಿತು. ಬುಧವಾರ ರಾತ್ರಿ ಆರಂಭಗೊಂಡಿರುವ ತುಂತುರು ಮಳೆ ಗುರುವಾರ ದಿನವಿಡೀ ಸುರಿದು ಶುಕ್ರವಾರವೂ ಮುಂದುವರಿದಿದೆ. ಆದರೆ ಗುರುವಾರಕ್ಕೆ ಹೋಲಿಸಿದರೆ ಶುಕ್ರವಾರ ಮಳೆ ಮತ್ತು ಚಳಿ ತುಸು ಕಡಿಮೆಯಿತ್ತು.

ಬೆಳಗ್ಗೆಯಿಂದಲೇ ಮಳೆ ಇದ್ದುದ್ದರಿಂದ ಜನ ವಾಯುವಿಹಾರಕ್ಕೆ ತೆರಳಲು ಹಿಂದೇಟು ಹಾಕಿದರು. ಇದರಿಂದ ಬೆಳಗ್ಗೆ ಗಿಜಿಗುಡುತ್ತಿದ್ದ ಪಾರ್ಕ್‌ಗಳು ಶುಕ್ರವಾರ ಬಿಕೋ ಎನ್ನುತ್ತಿದ್ದವು. ಅನಿವಾರ್ಯ ಕಾರಣಗಳಿದ್ದರೆ ಮಾತ್ರ ಜನರು ರೈನ್‌ಕೋಟ್‌, ಕೊಡೆ, ಸ್ವೇಟರ್‌, ದಪ್ಪನೆಯ ಉಡುಗೆ ತೊಟ್ಟು ಮನೆಯಿಂದ ಹೊರಬಂದರು. ಒಟ್ಟಾರೆ ನಗರದ ಜನಸಂಚಾರ ಕಡಿಮೆಯಿತ್ತು.

ತಮಿಳುನಾಡಿನಲ್ಲಿನ ವಾಯುಭಾರ ಕುಸಿತದ ಪ್ರದೇಶವು ಬೆಂಗಳೂರಿಗೆ ಸಮೀಪದಲ್ಲಿದೆ. ಹಾಗಾಗಿ, ನವೆಂಬರ್‌ 15ರವರೆಗೆ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಗುಂಗ್ಲುಪೇಟೆ, ಚಾಮರಾಜನಗರ, ಕೊಳ್ಳೇಗಾಲ, ನಂಜನಗೂಡು, ಮಧುಗಿರಿ, ಮಲವಳ್ಳಿ, ಚನ್ನಪಟ್ಟಣ, ಸಿರಾ, ಆನೇಕಲ್, ಮಂಡ್ಯ, ತುಮಕೂರು, ಪಾವಗಡ, ಮೈಸೂರು, ಸಾಲಿಗ್ರಾಮ, ಬೇಗೂರು, ರಾಮನಗರ, ಕನಕಪುರ, ಕೃಷ್ಣರಾಜಪೇಟೆ, ಉಪ್ಪಿನಂಗಡಿ, ಶ್ರೀರಾಮಪುರ, ಗುಬ್ಬಿ, ಹೆಬ್ಬೂರು, ನಾಗನಹಳ್ಳಿ, ಪೆರಿಯಾಪಟ್ಟಣ, ಚಳ್ಳಕೆರೆ, ಜಿಕೆವಿಕೆ, ಪರಶುರಾಂಪುರ, ಕೃಷ್ಣರಾಜಸಾಗರ, ಶ್ರವಣಬೆಳಗೊಳ, ಅರಸೀಕೆರೆ, ಹಿಡಿಯೂರು, ಶಿಡ್ಲಘಟ್ಟ, ವಿರಾಜಪೇಟೆ, ಸಕಲೇಶಪುರದಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಜಿಟಿ ಜಿಟಿ ಮಳೆಯಾಗುತ್ತಿದೆ. 23 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್‌ಎಎಲ್‌ನಲ್ಲಿ 19.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 19.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 20.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
 ಎಲ್ಲೆಲ್ಲಿ ಮಳೆಯಾಗಲಿದೆ?

ಎಲ್ಲೆಲ್ಲಿ ಮಳೆಯಾಗಲಿದೆ?

ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದನ್ನು ಹೊರತುಪಡಿಸಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಲಿದೆ.

 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ಮುಂದಿನ 24 ಗಂಟೆ ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಕಡೆ, ಕರಾವಳಿ ಪ್ರದೇಶಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ.

ರಾಜ್ಯದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಮಳೆ ಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂ ಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಈ ಹಿನ್ನೆಲೆ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಕೆಆರ್ ಎಸ್ ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯ ಸೂಚನೆ ನೀಡಿತ್ತು.

Recommended Video

ರೇಡಿಯೋದಿಂದ ರಾಜಕೀಯದ ವರೆಗೂ ಲಾವಣ್ಯ ನಡೆದು ಬಂದ ಹಾದಿ | Oneindia Kannada

English summary
Meteorological Department Predicted That, Heavy Rainfall Will Occur In South Interior Karnataka Till November 17.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X