ಜುಲೈ ಅಂತ್ಯದಲ್ಲಿ ಎರಡು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಬೆಂಗಳೂರು, ಜುಲೈ 27: ಜುಲೈ ಅಂತ್ಯದಲ್ಲಿ ಎರಡು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Recommended Video
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜುಲೈ 27ರಂದು ಹೆಚ್ಚು ಮಳೆ ಸುರಿಯಲಿದೆ. ಜುಲೈ 30-31 ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಕೊಲ್ಲೂರು, ಕುಮಟಾ, ಹೊನ್ನಾವರ, ಕೊಟ್ಟಿಗೆಹಾರ, ಕುಂದಾಪುರ, ಮೂಡಬಿದಿರೆ, ಕಾರ್ಕಳ, ಹಳಿಯಾಳ, ಬೆಳ್ತಂಗಡಿ, ಜಗಲ್ಪೇಟೆ, ಯಲ್ಲಾಪುರ, ಕದ್ರಾ, ಚಾಮರಾಜನಗರ, ಚಿಂತಾಮಣಿ, ಬಂಗಾರಪೇಟೆಯಲ್ಲಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಕರ್ನಾಟಕ ಒಳನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಹಲವೆಡೆ ಧಾರಾಕಾರ ಮಳೆ ಆಗ್ತಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಹಳ್ಳದಲ್ಲಿ ಕೊಚ್ಚಿಹೋಗ್ತಿದ್ದ ವಾಹನವನ್ನು ಸ್ಥಳೀಯರು ಹಗ್ಗ ಕಟ್ಟಿ ಎಳೆದಿದ್ದಾರೆ.
ವಾಹನದಲ್ಲಿದ್ದ ಐವರನ್ನು ರಕ್ಷಣೆ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯಲ್ಲೂ ಮಳೆ ಆರ್ಭಟ ಜೋರಾಗಿದೆ. ಜಗಳೂರು ತಾಲೂಕಿನ ಸಾಲಹಳ್ಳಿ-ಹಾಲಹಳ್ಳಿ ಮಧ್ಯೆ ಇರೋ ಚೆಕ್ಡ್ಯಾಂ ಕೊಚ್ಚಿಕೊಂಡು ಹೋಗಿದೆ. ದಾವಣಗೆರೆ ಬಾಡಾದಲ್ಲಿ ಮನೆಗಳಿಗೆ ನೀರು ನುಗ್ಗಿದೆ.












Click it and Unblock the Notifications