ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ: ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು, ಜನವರಿ 8: ರಾಜ್ಯದಲ್ಲಿ ಇನ್ನೂ ಎರಡು ದಿನ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಕುಳಿರ್ಗಾಳಿ ಮತ್ತಷ್ಟು ತೀವ್ರಗೊಂಡಿದೆ. ಇದರ ಪರಿಣಾಮ ಜ. 8 ಮತ್ತು 9ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆ ಸುರಿಯಲಿದೆ. ಒಟ್ಟು ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದೆ. 64.5 ಮಿ.ಮೀ ಇಂದ 115.5 ಮಿ.ಮೀವರೆಗೂ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಅಲ್ಲಲ್ಲಿ ಮುಂದಿನ 48ಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಜನವರಿ 12ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯನ್ನು ನಿರೀಕ್ಷಿಸಲಾಗಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅದು ಮಾಹಿತಿ ನೀಡಿದೆ. ಮುಂದೆ ಓದಿ.

ರೈತರಿಗೆ ತೀವ್ರ ಸಂಕಷ್ಟ
ಈ ಅಕಾಲಿಕ ಮಳೆ ಕರಾವಳಿ ಹಾಗೂ ಮಲೆನಾಡಿನ ಜನತೆಯನ್ನು ತೀವ್ರ ಸಂಕಷ್ಟಕ್ಕೆ ನೂಕಿದೆ. ಮುಖ್ಯವಾಗಿ ರೈತರ ಪರಿಸ್ಥಿತಿ ಶೋಚನೀಯವಾಗಿದೆ. ಭತ್ತ, ಕಾಫಿ ಹಾಗೂ ಅಡಿಕೆ ಕೊಯ್ಲಿನ ಅವಧಿ ಇದಾಗಿದ್ದು, ಅಪಾರ ಪ್ರಮಾಣದ ಬೆಳೆ ಮಳೆಯಿಂದ ನಾಶವಾಗಿದೆ. ಕೊಯ್ಲು ಮಾಡಿದ ಭತ್ತ ಕೂಡ ಮೊಳಕೆ ಬಂದಿದೆ. ಜತೆಗೆ ಗೇರು, ಮಾವು ಮುಂತಾದ ಬೆಳೆಗಳು ಹೂವು ಬಿಡುವ ಅವಧಿ ಆರಂಭವಾಗುತ್ತಿದ್ದು, ಮೋಡ ಕವಿದ ವಾತಾವರಣ ಅದರ ಮೇಲೆ ಪರಿಣಾಮ ಬೀರಲಿದೆ.

ಜನವರಿ ತಿಂಗಳ ಅಧಿಕ ಮಳೆ
ತಮಿಳುನಾಡಿನ ಮೀನಾಂಬಕ್ಕಮ್ ಹವಾಮಾನ ಇಲಾಖೆಯು ಜನವರಿ ತಿಂಗಳಿನಲ್ಲಿಯೇ ಅತ್ಯಧಿಕ ಮಳೆಯನ್ನು ದಾಖಲಿಸಿಕೊಂಡಿದೆ. ಗುರುವಾರ ಬೆಳಗಿನ ವೇಳೆಗೆ ಇಲ್ಲಿ 224.3 ಮಿಮೀ ಮಳೆಯಾಗಿದೆ. 1986ರಲ್ಲಿ ಜನವರಿಯಲ್ಲಿ 170 ಮಿಮೀ ಮಳೆಯಾಗಿದ್ದೇ ಅಧಿಕ ದಾಖಲೆಯಾಗಿತ್ತು.

ಜ. 13ರವರೆಗೂ ಮಳೆ
ಚೆನ್ನೈನಲ್ಲಿ ಮಳೆಯ ಅಬ್ಬರ ಜನವರಿ 13ರವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಯಮತ್ತೂರು, ತಿರುವರೂರ್ ಮತ್ತು ಮಧುರೈ ಸೇರಿದಂತೆ 14 ಜಿಲ್ಲೆಗಳ ಅನೇಕ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ. ಜನವರಿ 10ರಂದು ಕೆಲವು ಪ್ರದೇಶಗಳಲ್ಲಿ ಮಳೆಯ ಆರ್ಭಟ ಮತ್ತಷ್ಟು ಜೋರಾಗಲಿದೆ. ಕುಡ್ಡಲೂರ್ ಜಿಲ್ಲೆಯ ಮಾಥುರ್ ಮತ್ತು ದಿಂಡಿಗಲ್ ಜಿಲ್ಲೆಯ ನಥಾಮ್ನಲ್ಲಿ ಗುರುವಾರ 21 ಸೆಂಮೀ ಮಳೆಯಾಗಿದೆ.

ಲಾ ನಿನಾ ಸನ್ನಿವೇಶ ವಾತಾವರಣ
ಈಶಾನ್ಯ ಮಾರುತಗಳು ಜನವರಿ 18ರ ಆಚೆಗೂ ವಿಸ್ತರಿಸಿಕೊಂಡ ನಿದರ್ಶನಗಳು ಈ ಹಿಂದೆಯೂ ಇದೆ. ಆದರೆ ಈ ಬಾರಿ ಜನವರಿಯಲ್ಲಿ ಅಧಿಕ ಮತ್ತು ವ್ಯಾಪಕ ಮಳೆ ಸುರಿಸುತ್ತಿದೆ. ಪೆಸಿಫಿಕ್ ಸಾಗರದ ಮೇಲ್ಭಾಗದಲ್ಲಿನ ಕುಳಿರ್ಗಾಳಿಯಿಂದ ಉಂಟಾಗುವ ಲಾ ನಿನಾ ಸನ್ನಿವೇಶವು ಈ ಭಾಗದ ಈಶಾನ್ಯ ಮಾರುತಗಳ ಮೇಲೆ ಪರಿಣಾಮ ಬೀರಿದೆ. ಸಾಮಾನ್ಯವಾಗಿ ಈ ಮಾರುತಗಳು ಡಿಸೆಂಬರ್ ವೇಳೆಗೆ ಪ್ರಭಾವ ಕಳೆದುಕೊಳ್ಳುತ್ತಿದ್ದವು ಎಂದು ಹವಾಮಾನ ಇಲಾಖೆ ತಿಳಿಸಿದೆ.
-
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್












Click it and Unblock the Notifications