ಮಳೆ: ಕರಾವಳಿಯಲ್ಲಿ ಆರೆಂಜ್ ಅಲರ್ಟ್, ಹಲವು ಕಡೆ ಶಾಲೆಗಳಿಗೆ ರಜೆ
ಬೆಂಗಳೂರು, ಆಗಸ್ಟ್ 05: ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕ ಕೆಲವು ಭಾಗಗಳಲ್ಲಿ ಭಾರಿ ಪ್ರಮಾಣದ ಮಳೆ ಆಗುತ್ತಿದ್ದು, ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆಗಿದೆ.
ಬೆಳಗಾವಿ, ಬಾಗಲಕೋಟೆಗಳಲ್ಲಿ ಭಾರಿ ಮಳೆಯ ಪರಿಣಾಮ ಆಗಸ್ಟ್ 6 ರಿಂದ 8ರವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿಯ ರಾಮದುರ್ಗಾ ತಾಲ್ಲೂಕು ಹೊರತುಪಡಿಸಿ ಇನ್ನುಳಿದ ತಾಲ್ಲೂಕುಗಳಲ್ಲಿ ಎರಡು ದಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗಿನಲ್ಲಿ ಬಿರುಸಾಗಿದೆ ಮಳೆ; ಅಲ್ಲಲ್ಲಿ ಅನಾಹುತ
ಬಾಗಲಕೋಟೆಯಲ್ಲಿ ಸಹ ಮಳೆ ಜೋರಾಗಿದ್ದು ಆಗಸ್ಟ್ 6 ಮತ್ತು 7 ರಂದು ಎರಡು ತಾಲ್ಲೂಕುಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಕಾರಣ ರಜೆ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ಸೊರಬ ತಾಲ್ಲೂಕುಗಳಲ್ಲಿ ಮಳೆಯ ಕಾರಣದಿಂದ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬಾಗಲಕೋಟೆ : ಕೃಷ್ಣಾ ನದಿ ಪ್ರವಾಹ, ಸಂತ್ರಸ್ತರ ರಕ್ಷಣೆ
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಕೆಲವು ಕರಾವಳಿ ಭಾಗಗಳಲ್ಲಿ ಹವಾಮಾನ ಇಲಾಖೆಯು ನಾಳೆಯಿಂದ ಎರಡು ಮೂರು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಿದ್ದು, ಆಗಸ್ಟ್ 9 ರ ನಂತರ ರೆಡ್ ಅಲರ್ಟ್ ಘೋಷಿಸಿದೆ.