Karnataka rains: ಕರ್ನಾಟಕದಲ್ಲಿ ವಿವಿಧೆಡೆ ಭಾರೀ ಮಳೆ: ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಬೆಂಗಳೂರು ಜುಲೈ 6: ಗುರುವಾರ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಹಲವಾರು ಪ್ರದೇಶಗಳು ಪ್ರವಾಹ ಕಂಡು ಬಂದು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಜೀವಗಳು ಈಗಾಗಲೇ ಬಲಿಯಾಗಿವೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ದಕ್ಷಿಣ ರಾಜ್ಯದ ವಿವಿಧ ಭಾಗಗಳಿಗೆ ರೆಡ್, ಆರೆಂಜ್ ಮತ್ತು ಯಲ್ಲೋ ಅಲರ್ಟ್ಗಳನ್ನು ನೀಡಿತ್ತು, ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿತ್ತು.

ಗುರುವಾರದಂದು 225 ಮಿಮೀ ಮಳೆಯನ್ನು ದಾಖಲಿಸಿರುವ ಮಂಗಳೂರು ಭಾರತದ ಅತಿ ಹೆಚ್ಚು ಮಳೆ ಪಡೆದ ಸ್ಥಳಗಳಲ್ಲಿ ಒಂದಾಗಿದೆ. ಸ್ಕೈಮೆಟ್ ಹವಾಮಾನದ ಪ್ರಕಾರ, ಇತರ ಕರಾವಳಿ ನಗರಗಳಾದ ಕಾರವಾರ ಮತ್ತು ಹೊನ್ನಾವರ ಕೂಡ ಗುರುವಾರದಂದು 179 ಮತ್ತು 131 ಮಿಮೀ ಮಳೆಗೆ ಸಾಕ್ಷಿಯಾಗಿದ್ದು, ಭಾರತದ ಟಾಪ್ 10 ಅತ್ಯಂತ ಮಳೆ ಪಡೆದ ಸ್ಥಳಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿವೆ.
ನೈಋತ್ಯ ಮಾನ್ಸೂನ್ ರಾಜ್ಯದಾದ್ಯಂತ ಸಕ್ರಿಯವಾಗಿದೆ ಎಂದು ಐಎಂಡಿ ಹೇಳಿದೆ. ಕರಾವಳಿ ಕರ್ನಾಟಕ ಮತ್ತು ಇತರ ಆಂತರಿಕ ಭಾಗಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾಗುತ್ತದೆ. ಶನಿವಾರದವರೆಗೆ ರಾಜ್ಯದ ಬಹುತೇಕ ಕಡೆ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಗದಗ, ಧಾರವಾಡ, ಕಲಬುರಗಿ, ರಾಯಚೂರು, ದಾವಣಗೆರೆ, ವಿಜಯನಗರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ತಿಳಿಸಿದೆ.
ಇದು ಶನಿವಾರದವರೆಗೆ ಗುಡುಗು ಸಹಿತ ಎಚ್ಚರಿಕೆಯನ್ನು ನೀಡಿದೆ, ರಾಜ್ಯದ ಕೆಲವು ಪ್ರತ್ಯೇಕ ಸ್ಥಳಗಳಲ್ಲಿ ಮಿಂಚಿನ ಜೊತೆಗೆ ತುಂತುರು ಮಳೆಯಾಗಬಹುದು, 40 ರಿಂದ 50 ಕಿಲೋಮೀಟರ್ ವೇಗವನ್ನು ತಲುಪುವ ಗಾಳಿಯೊಂದಿಗೆ ಗಾಳಿ ಬೀಸಬಹುದು ಎಂದು ಹೇಳಿದೆ. ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ಅಲರ್ಟ್, ಧಾರವಾಡ, ಗದಗ, ರಾಯಚೂರು, ದಾವಣಗೆರೆ ಮತ್ತು ವಿಜಯನಗರ ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಾರದ ಅಂತ್ಯದವರೆಗೆ ಬೆಂಗಳೂರು ನಗರದಲ್ಲಿ ಒಂದು ಅಥವಾ ಎರಡು ಸ್ಪೆಲ್ಗಳಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಅದು ಮುಂದುವರೆಸಿದೆ ಮತ್ತು ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರಬಹುದು.












Click it and Unblock the Notifications