Karnataka Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 5-6 ದಿನ ಮಳೆ ಆರ್ಭಟ
ಬೆಂಗಳೂರು ಸೆಪ್ಟೆಂಬರ್ 19: ರಾಜ್ಯದಲ್ಲಿ ಮಳೆ ನಿರೀಕ್ಷೆಯಲ್ಲಿರುವ ಜನರಿಗೆ ಸಿಹಿ ಸುದ್ದಿಯೊಂದನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರೆದಿದ್ದು, ಮುಂದಿನ 5-6 ದಿನವೂ ಹಲವೆಡೆ ಮಳೆ ಬೀಳುವ ಮುನ್ಸೂಚನೆಯನ್ನು ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಮುಸುಕಿದ ವಾತಾವರಣವಿರಲಿದ್ದು, ಗುಡುಗು, ಗಾಳಿ ಸಹಿತ ಮಳೆ ಬೀಳುವ ಸಾಧ್ಯತೆ ಇದೆ.
ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಅಲ್ಲದೆ ಮಂಡ್ಯ, ಮೈಸೂರು, ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ರಾಮನಗರ, ಕೋಲಾರ, ಹಾಸನ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ಬೆಂಗಳೂರು ನಗರ, ರಾಯಚೂರು, ಗದಗ, ಕೊಪ್ಪಳ, ಧಾರವಾಡ, ಬೀದರ್, ಚಾಮರಾಜನಗರದಲ್ಲಿ ಒಣಹವೆ ಮುಂದುವರೆಯಲಿದೆ.

ಉದ್ಯಾನ ನಗರಿ ಬೆಂಗಳೂರಿನಲ್ಲಿಂದು ಸಾಧಾರಣ ಮಳೆಯಾಗಲಿದ್ದು ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಇಂದು ಸಾಧಾರಣ ಮಳೆಯಾಗಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಮಳೆ ಅರ್ಭಟ ಮುಂದುವರೆಯಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ವಿವಿಧ ರಾಜ್ಯಗಳಲ್ಲಿ ಮಳೆ ವರದಿ
ಉತ್ತರ ಪ್ರದೇಶ, ರಾಜಸ್ಥಾನಕ್ಕೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದ್ದು ದೆಹಲಿ, ಉತ್ತರಾಖಂಡ ಮತ್ತು ಇತರ ರಾಜ್ಯಗಳಿಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಹರಿಯಾಣ ಮತ್ತು ರಾಜಸ್ಥಾನಗಳಲ್ಲಿ ಗುರುವಾರ (ಸೆಪ್ಟೆಂಬರ್ 19) ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಅಲ್ಲದೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸೆಪ್ಟೆಂಬರ್ 20 ರವರೆಗೆ ಮತ್ತು ಅಸ್ಸಾಂ ಹಾಗೂ ಮೇಘಾಲಯದಲ್ಲಿ ಸೆಪ್ಟೆಂಬರ್ 19 ರಂದು ಪ್ರತ್ಯೇಕವಾದ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲೂ ಸಹ ಸೆಪ್ಟೆಂಬರ್ 19 ರಂದು ಇದೇ ರೀತಿಯ ವಾತಾವರಣ ಇರಲಿದೆ ಎಂದು ನಿರೀಕ್ಷಿಸಲಾಗಿದೆ.
ಇನ್ನೂ ಕೊಂಕಣ ಮತ್ತು ಗೋವಾದಲ್ಲಿ ತಕ್ಕಮಟ್ಟಿಗೆ ಮಧ್ಯಮ ಮಳೆಯಾಗುವ ಮುನ್ಸೂಚನೆ ಇದೆ. ಉಳಿದ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಈಶಾನ್ಯ ಛತ್ತೀಸ್ಗಢ ಮತ್ತು ಪಕ್ಕದ ಜಾರ್ಖಂಡ್ನ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದೆಹಲಿ ಮಳೆ ಮುನ್ಸೂಚನೆ
ಹವಾಮಾನ ಅಧಿಕಾರಿಗಳು ದೆಹಲಿ ಮತ್ತು ಎನ್ಸಿಆರ್ನ ಹಲವಾರು ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ಲಘುವಾಗಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದ್ದಾರೆ. ನವದೆಹಲಿಯ ಪ್ರಾದೇಶಿಕ ಹವಾಮಾನ ಇಲಾಖೆಯು ಇಂದು ರಾಷ್ಟ್ರ ರಾಜಧಾನಿಗೆ ಹಳದಿ ಎಚ್ಚರಿಕೆಯನ್ನು ನೀಡಿದೆ. IMD ಪ್ರಕಾರ, ತಾಪಮಾನವು ಗರಿಷ್ಠ 32 ° C ಮತ್ತು ಕನಿಷ್ಠ 23 ° C ನಡುವೆ ಇರುತ್ತದೆ.
ಹಿಮಾಚಲದಲ್ಲಿ ಯೆಲ್ಲೋ ಅಲರ್ಟ್
ಗುರುವಾರ ರಾಜ್ಯದ ಆರು ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಸ್ಥಳೀಯ ಹವಾಮಾನ ಕೇಂದ್ರವು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಸೆಪ್ಟೆಂಬರ್ 17 ರ ಹೊತ್ತಿಗೆರಾಜ್ಯದಲ್ಲಿ 19% ಮಳೆಯ ಕೊರತೆ ಕಂಡುಬಂದಿದೆ, ಸರಾಸರಿ 695 ಮಿಮೀ ಮಳೆಗೆ ಹೋಲಿಸಿದರೆ 565.9 ಮಿಮೀ ಮಳೆಯಾಗಿದೆ.
ಯುಪಿಯಲ್ಲಿ ಭಾರೀ ಮಳೆ
IMD ಮುಂದಿನ ಐದು ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ ಪ್ರತ್ಯೇಕವಾದ ಲಘು ಮಳೆಯ ಮುನ್ಸೂಚನೆ ನೀಡಿದೆ. ವಾರವಿಡೀ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಗಂಗಾ ನದಿಯು ಕಛ್ಲಾ ಸೇತುವೆ (ಬುಡೌನ್), ಗಾಜಿಪುರ, ಬಲ್ಲಿಯಾ ಮತ್ತು ಫತೇಘರ್ನಲ್ಲಿ ಅಪಾಯದ ಮಟ್ಟಕ್ಕಿಂತ ಹೆಚ್ಚು ಹರಿಯುತ್ತಿದೆ. ಘಾಘ್ರಾ ನದಿಯು ಎಲ್ಜಿನ್ ಸೇತುವೆ (ಬಾರಾಬಂಕಿ), ತುರ್ತಿಪರ್ (ಬಲ್ಲಿಯಾ) ಮತ್ತು ಅಯೋಧ್ಯೆ ಹೆಚ್ಚಿನ ಪ್ರಮಾಣದ ನೀರಿನೊಂದಿಗೆ ಹರಿಯುತ್ತಿದೆ.












Click it and Unblock the Notifications