ಭಕ್ತರನ್ನು ಕಾಯಬೇಕಾದ ಗಣೇಶನಿಗೆ ಫುಲ್ ಸೆಕ್ಯೂರಿಟಿ
ಗಣೇಶ ಮೂರ್ತಿಗಳ ವಿಸರ್ಜನೆ ಈಗ ಒಂದರ್ಥದಲ್ಲಿ Z ಸೆಕ್ಯೂರಿಟಿಯಲ್ಲಿ ನಡೆಯುತ್ತಿದೆ. ಮಂಡ್ಯದ ನಾಗಮಂಗಲ ಗಲಭೆಯ ನಂತರ ಇದೀಗ ಕರ್ನಾಟಕದಾದ್ಯಂತ ಗಣೇಶ ಮೂರ್ತಿಗಳ ವಿಸರ್ಜನೆಯಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಕ್ರಮ ತೆಗೆದುಕೊಂಡಿದೆ. ಮಂಡ್ಯದಲ್ಲಿ ನಡೆದ ದುಂರತದ ಕಾರ್ಮೋಡ ಇನ್ನೂ ಸರಿದಿಲ್ಲ. ಈ ರೀತಿಯ ದುರಂತ ಸಂಭವಿಸಲಿದೆ ಎಂದು ಯಾರೂ ಅಂದಾಜಿಸಿರಲಿಲ್ಲ. ಆದರೆ, ಈ ರೀತಿಯ ಯಾವುದೇ ಘಟನೆ ಮರುಕಳಿಸಬಾರದು ಎನ್ನುವ ವಿಚಾರದಲ್ಲಿ ಪೊಲೀಸ್ ಇಲಾಖೆ ಅತ್ಯಂತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದೆ.
ಗಣೇಶ ಚತುರ್ಥಿ ಮುಗಿದಿದೆಯಾದರೂ, ಗಣೇಶ ಮೂರ್ತಿಗಳ ವಿಸರ್ಜನೆ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಭಾಗದಲ್ಲಿ ಮುಂದುವರಿದಿದೆ. ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಯಾವುದೇ ರೀತಿಯ ಅವಘಡಗಳು ಸಂಭವಿಸಬಾರದು ಎನ್ನುವ ವಿಚಾರದಲ್ಲಿ ಪೊಲೀಸ್ ಇಲಾಖೆ ಅತ್ಯಂತ ಸೂಕ್ಷ್ಮವಾಗಿ ಕ್ರಮ ತೆಗೆದುಕೊಳ್ಳುತ್ತಿದೆ. ಗಣೇಶ ಮೂರ್ತಿಯನ್ನು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಪೊಲೀಸ್ ವ್ಯಾನ್ಗಳು ಹಿಂಬಾಲಿಸುತ್ತಿವೆ. ಗಣೇಶ ಮೂರ್ತಿ ಮೆರವಣಿಗೆಯ ಮುಂದೆ ಹಾಗೂ ಹಿಂದೆ ಪೊಲೀಸ್ ವಾಹನ, ಪೊಲೀಸರು ಭದ್ರತೆ ಕಲ್ಪಿಸುತ್ತಿದ್ದಾರೆ. ಇದರೊಂದಿಗೆ ಬೈಕ್ನಲ್ಲಿಯೂ ಪೊಲೀಸರು ಗಣೇಶ ಮೂರ್ತಿಯೊಂದಿಗೆ ಸಾಗುತ್ತಿದ್ದಾರೆ. ಈ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭಾರೀ ಎಚ್ಚರಿಕೆ ವಹಿಸಲಾಗಿದೆ.

ಸಣ್ಣ ಗಣೇಶ ಮೂರ್ತಿಗಳ ವಿಸರ್ಜನೆಗೂ ಭದ್ರತೆ
ಇನ್ನು ಬೆಂಗಳೂರು ಮಹಾನಗರ ಹಾಗೂ ಕರ್ನಾಟಕದಾದ್ಯಂತ ಭಾರೀ ಎಚ್ಚರಿಕೆ ವಹಿಸಲಾಗಿದೆ. ಇದೀಗ ಸಣ್ಣ ಗಣೇಶ ಮೂರ್ತಿಗಳ (ಬೀದಿಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ಮೂರ್ತಿ) ವಿಸರ್ಜನೆ ಸಂದರ್ಭದಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಗಣೇಶ ಮೂರ್ತಿಗಳ ವಿಸರ್ಜನೆಗೆ ಸಾರ್ವಜನಿಕರು ಸಹ ಸಹಕಾರ ನೀಡುತ್ತಿದ್ದು. ಕಿಡಿಗೇಡಿಗಳು ಸಾರ್ವಜನಿಕರ ಗುಂಪಿನಲ್ಲಿ ಸೇರದಂತೆ ಸಾರ್ವಜನಿಕರೇ ಅಲರ್ಟ್ ಆಗಿದ್ದಾರೆ.
ಪೊಲೀಸ್ ಇಲಾಖೆಯಿಂದ ಹೈ ಅಲರ್ಟ್
ಇನ್ನು ಈ ವಿಚಾರದಲ್ಲಿ ಪೊಲೀಸ್ ಇಲಾಖೆಯು ಸಹ ಅಲರ್ಟ್ ಆಗಿದೆ. ಮಂಡ್ಯದ ನಾಗಮಂಗಲ ಗಲಭೆ ಪ್ರಕರಣದಲ್ಲಿ ಪೊಲೀಸರಿಂದಲೂ ಕೆಲವು ಲೋಪಗಳಾಗಿರುವ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾತನಾಡಿದ್ದರು. ಅದರಲ್ಲಿ ಗಣೇಶ ಮೂರ್ತಿ ವಿಸರ್ಜನೆ ಯಾವ ಮಾರ್ಗವಾಗಿ ಸಾಗಬೇಕು ಎನ್ನುವುದು ಸಹ ಪ್ರಮುಖವಾಗಿತ್ತು. ಇನ್ನು ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ್ ಕುಮಾರ್ನನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದರು. ಅಲ್ಲದೇ ಎಲ್ಲ ಪೊಲೀಸ್ ಅಧಿಕಾರಿಗಳಿಗೂ ಎಚ್ಚರಿಕೆಯನ್ನು ನೀಡಿದ್ದರು. ಹೀಗಾಗಿ, ಅಧಿಕಾರಿಗಳು ಸಹ ಅಲರ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಪೊಲೀಸರಿಗೂ ಮಾಹಿತಿ ನೀಡಲಾಗುತ್ತಿದ್ದು, ಜನರೂ ಸಹ ಜವಾಬ್ದಾರಿ ತೋರಿಸುತ್ತಿದ್ದಾರೆ.
ನಾಗಮಂಗಲ ದೇಶಾದ್ಯಂತ ಸುದ್ದಿ: ಅಪಖ್ಯಾತಿ
ಮಂಡ್ಯದ ಗಲಭೆ ಪ್ರಕರಣವು ದೇಶದಾದ್ಯಂತ ಸುದ್ದಿಯಾಗಿದೆ. ಸಹಜವಾಗಿಯೇ ಕರ್ನಾಟಕದ ಬಗ್ಗೆ ಚರ್ಚೆ ನಡೆದಿದೆ. ಇಂಗ್ಲಿಷ್ ಸುದ್ದಿ ಮಾಧ್ಯಮಗಳು ಸಹ ಇದನ್ನು ವರದಿ ಮಾಡಿವೆ. ಆದರೆ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶ್ರಮಿಸಿದ್ದು, ಇದೀಗ ಪರಿಸ್ಥಿತಿ ಬಹುತೇಕ ತಿಳಿಯಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications