Heavy Rain Alert: ಆಗುಂಬೆ ಘಾಟ್ ಹೆದ್ದಾರಿ ಇಂದಿನಿಂದ ಸೆ.30ರವರೆಗೆ ಭಾರೀ ವಾಹನಗಳಿಗೆ ಬಂದ್
ಬೆಂಗಳೂರು, ಜೂನ್ 15: ರಾಜ್ಯಾದ್ಯಂತ ಮಳೆ ಅಬ್ಬರಿಸುತ್ತಿದೆ. ಮಳೆಗಾಲದಲ್ಲಿ ಪಶ್ಚಿಮ ಘಟ್ಟಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತದೆ. ಹೀಗಾಗಿ ಪ್ರಮುಖ ಘಾಟ್ ವಲಯಗಳಲ್ಲಿನ ಹೆದ್ದಾರಿ ರಸ್ತೆಯಲ್ಲಿ ಭೂಕೂಸಿತ, ಗುಡ್ಡ ಕುಸಿತಗಳು ಸಂಭವಿಸುತ್ತದೆ. ಸುರಕ್ಷತಾ ದೃಷ್ಟಿಯಿಂದ ಭಾರೀ ವಾಹನಗಳಿಗೆ ಸಂಚಾರ ನಿಷೇಧಿಸಲಾಗುತ್ತದೆ. ಇದೀಗ ಶಿವಮೊಗ್ಗ ಜಿಲ್ಲಾಧಿಕಾರಿ ಆಗುಂಬೆ ಘಾಟ್ ಅನ್ನು ಬಂದ್ ಮಾಡಿ ಕ್ರಮ ವಹಿಸಿದ್ದಾರೆ.
ನಾಡಿನಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದೆ. ಶಿವಮೊಗ್ಗ ವ್ಯಾಪ್ತಿಯಲ್ಲಿ ವಾರಗಳಿಂದಲೂ ಮಳೆ ಮುಂದುವರಿದಿದೆ. ಗುಡ್ಡ ಪ್ರದೇಶಗಳಿಂದ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಮುಂಜಾಗೃತ ಕ್ರಮವಾಗಿ ತೀರ್ಥಹಳ್ಳಿ-ಉಡುಪಿ ಸಂಪರ್ಕಿಸುವ ಆಗುಂಬೆ ಘಾಟ್ ಹೆದ್ದಾರಿ (169 A) ರಸ್ತೆಯನ್ನು ಭಾರೀ ವಾಹನಗಳಿಗೆ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಇಂದಿನಿಂದಲೇ ಭಾರೀ ವಾಹನಗಳಿಗೆ ನಿಷೇಧ
ಮುಂದಿನ ಇನ್ನಷ್ಟು ದಿನಗಳ ಕಾಲ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ಆಗಲಿದೆ. ಈಗಾಗಲೇ ಹವಾಮಾನ ಇಲಾಖೆ ಭಾರೀ ಮಳೆಗೆ 'ರೆಡ್ ಅಲರ್ಟ್' ನೀಡಿದೆ. ಮಳೆ ಮುಂದುವರಿದರೆ, ಗುಡ್ಡ ಕುಸಿತದಂತಹ ಘಟನೆಗಳು ಸಂಭವಿಸುವ ಸಾಧ್ಯತೆ ಇರುತ್ತದೆ. ಆದ್ದರಿಂದ ಲಘು ವಾಹನಗಳನ್ನು ಬಿಟ್ಟು ಭಾರೀ ವಾಹನಗಳ ಸಂಚಾರವನ್ನು ಆಗುಂಬೆ ಘಾಟ್ ಹೆದ್ದಾರಿಯಲ್ಲಿ ಸಂಚಾರ ನಿಷೇಧಿಸಲಾಗಿದೆ. ಈ ಆದೇಶವು ಇಂದು ಜೂನ್ 15 ರಿಂದ ಸೆಪ್ಟಂಬರ್ 30 ರವರೆಗೆ ಜಾರಿಯಲ್ಲಿರಲಿದೆ.
ಪರ್ಯಾಯ ಮಾರ್ಗ ತಿಳಿಯಿರಿ
ಭಾರೀ ವಾಹನಗಳು ತೀರ್ಥಹಳ್ಳಿಗೆ ಉಡುಪಿಯಿಂದ ಕುಂದಾಪುರ, ಸಿದ್ದಾಪುರ, ಮಾಸ್ತಿಕಟ್ಟೆ ಮಾರ್ಗವಾಗಿ ತೀರ್ಥಹಳ್ಳಿಗೆ ಬರುವಂತೆ ಜಿಲ್ಲಾಡಳಿತ ಪರ್ಯಾಯ ಮಾರ್ಗ ಸೂಚಿಸಿದೆ. ಮುಂದಿನ ಮೂರುವರೆ ತಿಂಗಳು ಇದೇ ಮಾರ್ಗ ಅನುಸರಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಮಲ್ಪೆ, ಉಡುಪಿಯಿಂದ ಆಗುಂಬೆ ತಿರುವುಗಳ ಮೂಲಕ ತೀರ್ಥಹಳ್ಳಿಗೆ ಸಂಪರ್ಕಿಸಲಾಗುತ್ತದೆ. ಇದೀಗ ಈ ಹೆದ್ದಾರಿ ಭಾರೀ ವಾಹನಗಳಿಗೆ ನಿಷೇಧಿಸಲಾಗಿದೆ.
ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್
ಮುಂದಿನ ಮೂರು ದಿನ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು, ಐಎಂಡಿ ರೆಡ್ ಅಲರ್ಟ್ ನೀಡಿದೆ. ಕಳೆದೊಂದು ವಾರದಿಂದ ಈ ಜಿಲ್ಲೆಗಳಲ್ಲಿ 200 ಮಿಲಿ ಮೀಟರ್ಗೂ ಹೆಚ್ಚಿನ ಮಳೆ ಆಗುತ್ತಿದೆ. ಆಯಾ ಜಿಲ್ಲಾಡಳಿತಗಳು ಅಗತ್ಯ ಮುಂಜಾಗ್ರತೆ ವಹಿಸಿವೆ. ಮಂಗಳೂರಿನಲ್ಲಿ ನೆನ್ನೆಯಿಂದ ಸುರಿದ ಮಳೆಗೆ ಅಲ್ಲಲ್ಲಿ ರಸ್ತೆಗಳು, ವಿವಿಧ ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications