ನನ್ನ ಹೆಲ್ಮೆಟ್ ಹುಡುಕಿಕೊಡಿ ಎಂದು ಬೈಕ್ ಸವಾರ ಪೊಲೀಸ್ ಠಾಣೆಯಲ್ಲಿ ದೂರು
ಬೆಂಗಳೂರು, ಆಗಸ್ಟ್ 17: ನನ್ನ ಹೆಲ್ಮೆಟ್ ಕಳ್ಳತನವಾಗಿದೆ ಹುಡುಕಿಕೊಡಿ ಎಂದು ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಗೆ ಸಬರಿ ಸೂರ್ಯ ಎಂಬವರು ದೂರು ನೀಡಿದ ಘಟನೆ ನಡೆದಿದೆ.
ದ್ವಾರಕನಗರದ ಜಯದುರ್ಗ ಬೇಕರಿಯಲ್ಲಿ ಜ್ಯೂಸ್ ಕುಡಿಯಲು ತೆರಳಿದ್ದ ವೇಳೆ ಅಲ್ಲಿಯೇ ಹೆಲ್ಮೆಟ್ ಮರೆತು ಬಂದಿದ್ದಾನೆ. ಬಳಿಕ ಹೋಗಿ ನೋಡುವಷ್ಟರಲ್ಲಿ ದುಷ್ಕರ್ಮಿಗಳು ಹೆಲ್ಮೆಟ್ ಕದ್ದು ಪರಾರಿಯಾಗಿದ್ದಾರೆ. ಈ ಕುರಿತು ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಇನ್ನೂ ದೂರಿನಲ್ಲಿ ನನ್ನ ಹೆಲ್ಮೆಟ್ 10 ಸಾವಿರ ರೂಪಾಯಿ ಮೌಲ್ಯದ್ದು ಎಂದು ದೂರುದಾರ ಹೇಳಿದ್ದಾರೆ. ದೂರಿನನ್ವಯ ಎಫ್ಐಆರ್ ದಾಖಲಿಸಿ ಹೆಲ್ಮೆಟ್ ಹುಡುಕಾಟಕ್ಕೆ ಪೊಲೀಸರು ಮುಂದಾಗಿದ್ದಾರೆ. ದೂರುದಾರ ಸಬರಿ ಸೂರ್ಯ ಪಿಇಎಸ್ ಕಾಲೇಜಿನ ಎಲ್ಎಲ್ಬಿ ವಿದ್ಯಾರ್ಥಿಯಾಗಿದ್ದಾರೆ. ಇನ್ನೂ ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬೇಕರಿ ಮತ್ತು ಅಕ್ಕಪಕ್ಕದ ಅಂಗಡಿಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಪ್ರಕರಣದ ಕುರಿತು ದೂರುದಾರ ಸೂರ್ಯ ಮಾತನಾಡಿ, ನಾನು ಹೊಸಕೆರಳ್ಳಿ ದ್ವಾರಕಾ ನಗರದಲ್ಲಿರುವ ಪಿಇಎಸ್ ಕಾಲೇಜ್ನಲ್ಲಿ 4ನೇ ವರ್ಷದ ಬಿಬಿಎ ಎಲ್ಎಲ್ಬಿ ವ್ಯಾಸಂಗ ಮಾಡುತ್ತಿದ್ದೇನೆ. ಮಧ್ಯಾಹ್ನ ಸುಮಾರು 2.20ಕ್ಕೆ ನಮ್ಮ ಕಾಲೇಜ್ ಪಕ್ಕದ ದ್ವಾರಕಾ ನಗರ ರಸ್ತೆಯಲ್ಲಿನ ಜಯದುರ್ಗ ಬೇಕರಿ ಎದುರಿನ ಪೆಟ್ಟಿ ಅಂಗಡಿಯ ಒಂದು ಟೇಬಲ್ ಮೇಲೆ ಹೆಲ್ಮೆಟ್ ಇಟ್ಟು ಜ್ಯೂಸ್ ಕುಡಿಯಲು ಹೋಗಿರುತ್ತೇನೆ.ಬಳಿಕ 2.40ಕ್ಕೆ ಸಮಯಕ್ಕೆ ಹೋಗಿ ನೋಡಿದಾಗ ಅಲ್ಲಿ ನನ್ನ ಹೆಲ್ಮೆಟ್ ಇರಲಿಲ್ಲ. ಸುಮಾರು 10 ಸಾವಿರ ರೂಪಾಯಿ ಬೆಲೆ ಬಾಳುತ್ತದೆ ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಹೇಳಿದ್ದಾರೆ.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications