ಅಮರನಾಥ ಮೇಘಸ್ಫೋಟ: ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ
ಬೆಂಗಳೂರು, ಜು.8: ಜಮ್ಮು ಮತ್ತು ಕಾಶ್ಮೀರದ ಅಮರನಾಥ ಗುಹೆಯ ಬಳಿ ಶುಕ್ರವಾರ ಮೇಘಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಭಾರೀ ಮಳೆಯಿಂದಾಗಿ ಸಂಜೆ 5.30 ರ ಸುಮಾರಿಗೆ ಅಮರನಾಥ ದೇವಸ್ಥಾನದ ಬಳಿ ಮೇಘಸ್ಫೋಟವು ಗುಹೆ ಪ್ರದೇಶದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕರ್ನಾಟಕದಿಂದಲೂ ಯಾತ್ರಗೆ ತೆರಳಿರುವ ಕೆಲವು ಭಕ್ತಾದಿಗಳು ಸಿಲುಕಿರುವ ಅಪಾಯವಿದೆ.
ಇಂದು ಸುಮಾರು 5:30 ರ ಸಮಯಕ್ಕೆ ಅಮರನಾಥ ಗುಹೆಯ ಬಳಿ ಮೋಡದ ಸ್ಫೋಟದಿಂದಾಗಿ ಯಾತ್ರಿಕರ ವಾಸಸ್ಥಳಗಳಿಗೆ ಹಾನಿಯಾಗಿದೆ. NDRF, ITBP, ಭಾರತೀಯ ಸೇನೆ, CRPF, BSF, SDRF ಮತ್ತು ಜಮ್ಮು ಮತ್ತು ಕಾಶ್ಮೀರ್ ಪೋಲಿಸ್ ಜಂಟಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಸಂಕಷ್ಟದಲ್ಲಿ ಸಿಲುಕಿದವರಿಗೆ ಜಮ್ಮು ಕಾಶ್ಮೀರ ಸರ್ಕಾರವು ಸಹಾಯಹಸ್ತ ಚಾಚಿದೆ.
ಅಮರನಾಥ ಮೇಘಸ್ಫೋಟ: ಮುಂದುವರೆದ ರಕ್ಷಣಾ ಕಾರ್ಯಾಚರಣೆ, ಅಮರನಾಥ ಯಾತ್ರೆ ಸ್ಥಗಿತ
ಅಮರನಾಥ ಗುಹೆಯ ಬಳಿ ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ದಯವಿಟ್ಟು ಕೆಳಗಿನ ಸಂಖ್ಯೆಗೆ ಕರೆ ಮಾಡಿ ಸಂಪರ್ಕ ಮಾಡಿ. 080-1070, 22340676, ಇಮೇಲ್: [email protected]
ಮುಖ್ಯಮಂತ್ರಿ ಸಾಂತ್ವನ:
ಪವಿತ್ರ ಅಮರನಾಥ ಯಾತ್ರೆ ಸಂದರ್ಭದಲ್ಲಿ ಮೇಘಸ್ಪೋಟದಿಂದಾಗಿ 12 ಜನ ಯಾತ್ರಾರ್ಥಿಗಳು ಸಾವನ್ನಪ್ಪಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡದಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು ಮೇಘ ಸ್ಫೋಟದಿಂದಾಗಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಈ ಮೇಘ ಸ್ಫೋಟದಲ್ಲಿ ಜೀವ ಕಳೆದುಕೊಂಡ ಜನರ ಆತ್ಮಗಳಿಗೆ ಶಾಂತಿ ಸಿಗಲಿ. ಇವರ ಅಗಲಿಕೆಯ ನೋವನ್ನು ಬರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ರಾಷ್ಟ್ರೀಯ ಸಹಾಯವಾಣಿ ಸಂಖ್ಯೆಗಳು:
NDRF: 011-23438252, 011-23438253
Kashmir Divisional Helpline: 0194-2496240
Shrine Board Helpline: 0194-2313149
Joint Police Control Room Pahalgam
9596779039
9797796217
01936243233
01936243018
Police control room Anantnag
01932225870
01932222870
Shri Amarnath Shrine Board
NDRF: 011-23438252, 011-23438253
Kashmir Divisional Helpline: 0194-2496240