Hemavathi Dam: ಇಂದು 10,000 ಕ್ಯೂಸೆಕ್ ದಾಟಿದ ಜಲಾಶಯದ ಒಳಹರಿವು, ನೀರಿನ ಸಂಗ್ರಹ ಮಟ್ಟ?
ಬೆಂಗಳೂರು, ಜುಲೈ 02: ಹಾಸನ ಜಿಲ್ಲೆ ಸೇರಿದಂತೆ ವಿವಿಧೆಡೆ ಅತ್ಯುತ್ತಮ ಮಳೆ ಸುರಿಯುತ್ತಿರುವ ಪರಿಣಾಮ ಹೇಮಾವತಿ ನದಿಯಲ್ಲಿ ನೀರಿನ ಸಂಗ್ರಹ ಅಧಿಕವಾಗಿದೆ. ಮೂಡಿಗೆರೆ, ಸಕಲೇಶಪುರ ಸೇರಿದಂತೆ ಇನ್ನಿತರ ಕಡೆಗಳಲ್ಲಿ ವ್ಯಾಪಕ ಮಳೆ ಮುಂದುವರಿದ ಪರಿಣಾಮ ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಮೊದಲ ಭಾರಿಗೆ ಹೇಮಾವತಿ ಜಲಾಶಯದ ಒಳಹರಿವು 10,000 ಕ್ಯೂಸೆಕ್ ದಾಟಿದೆ.
ಈ ಕುರಿತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮಾಹಿತಿ ನೀಡಿದೆ. ಕಳೆದ ಎರಡು ಮೂರು ವಾರಗಳಿಂದ ಸಕಲೇಶಪುರ, ಹಾಸನ, ಮೂಡಿಗೆರೆ ಹಾಗೂ ಅರಣ್ಯ ಪ್ರದೇಶಗಳನ್ನು ಒಳಗೊಂಡಂತೆ ಹೆಮಾವತಿ ನದಿ ಸುತ್ತಮುತ್ತ, ಜಲಾಶಯದ ಜಲಾನಯನ ಪ್ರದೇಶಗಳ ವ್ಯಾಪ್ತಿಯಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ.

ಈ ಕಾರಣದಿಂದ ಹಾಸನ ಜಿಲ್ಲೆಯ ಗೋರೂರು ಬಳಿ ನಿರ್ಮಿಸಲಾಗಿರುವ ಹೇಮಾವತಿ ಆಣೆಕಟ್ಟಿನಲ್ಲಿ ಈ ವರ್ಷ ಮೊದಲ ಬಾರಿಗೆ ಒಳಹರಿವು ಜುಲೈ 02 ರಂದು 10,137 ಕ್ಯೂಸೆಕ್ ನಷ್ಟು ಹೆಚ್ಚಾಗಿದೆ. ಒಟ್ಟು 37.10 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹೇಮಾವತಿ ಆಣೆಕಟ್ಟಿನಲ್ಲಿ ಸದ್ಯ 10.270 ಟಿಎಂಸಿ ಯಷ್ಟು ನೀರು ಸಂಗ್ರಹವಾಗಿದೆ.
ಜಲಾಶಯದ ಹೊರ ಹರಿವಿನ ಮಾಹಿತಿ
ನದಿ ಸೇರಿದಂತೆ ಇನ್ನಿತರ ಮೂಲಗಳಿಗೆ ಒಟ್ಟು 250 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. ಡ್ಯಾಂನಲ್ಲಿ ಒಟ್ಟು ಈವರೆಗೆ ಶೇಕಡಾ 39.46ರಷ್ಟು ಹೆಚ್ಚಾಗಿದೆ. ಹೇಮಾವತಿ ನದಿ ಸುತ್ತಮುತ್ತಲಿನ ಸಾವಿರಾರು ಚದರ ಕಿಲೋ ಮೀಟರ್ ಜಲಾನಯನ ಪ್ರದೇಶಗಳಿಗೆ ನೀರಾವರಿ, ಕುಡಿಯಲು ಈ ನದಿ ನೀರು ಆಸರೆಯಾಗಿದೆ. ಮಳೆ ಸದ್ಯಕ್ಕೆ ಕಡಿಮೆ ಆಗುವ ಲಕ್ಷಣಗಳು ಇಲ್ಲ. ಮುಂದಿನ ದಿನಗಳಲ್ಲಿ ಜಲಾಶಯದ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಕಬಿನಿ ಆಣೆಕಟ್ಟಿನ ಇಂದಿನ ಮಟ್ಟ
ಕಬಿನಿ ಅಣೆಕಟ್ಟಿನ ಇಂದಿನ ಪ್ರಮಾಣ ನೋಡುವುದಾದರೆ, ಈ ಜಲಾಶಯದ 19.52 ಟಿಎಂಸಿ ಒಟ್ಟು ಸಾಮರ್ಥ್ಯದಲ್ಲಿ ಶೇಕಡಾ 82.94 ರಷ್ಟು ಸಂಗ್ರಹವಾಗಿದೆ. ಸದ್ಯ ಇಂದಿಗೆ ಒಳಹರಿವು 11,269 ಕ್ಯೂಸೆಕ್ ಇದ್ದು, ಹೊರ ಹರಿವು 1542 ಕ್ಯೂಸೆಕ್ ನಷ್ಟಿದೆ ಎಂದು ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ಕಪಿಲಾ ನದಿ, ಕಬಿನಿ ಆಣೆಕಟ್ಟು ಜಲಾನಯನ ಪ್ರದೇಶಗಳ ವ್ಯಾಪ್ತಿಯಲ್ಲಿ ನೆನ್ನೆ ಅಂದರೆ ಕಳೆದ 24 ಗಂಟೆಗಳಲ್ಲಿ 25ಮಿಲಿ ಮೀಟರ್ ಮಳೆ ಆಗಿದೆ. ಕೇರಳ ಹಾಗೂ ಕರ್ನಾಟಕದ ಗಡಿ ಭಾಗದಲ್ಲಿ ಅತ್ಯಧಿಕ ಮಳೆ ಆಗುತ್ತಿದೆ. ಕರ್ನಾಟಕ, ಕೇರಳದಲ್ಲಿ ವಿವಿಧಡೆ ಮುಂಗಾರು ಮಳೆ ಸಕ್ರಿಯವಾಗಿದೆ. ಇದರಿಂದಾಗಿ ವಿವಿಧ ಜಲಾಶಯಗಳು ತುಂಬಿವೆ.
ಮುಂದಿನ ಜುಲೈ 09ರವರೆಗೆ ರಾಜ್ಯದಲ್ಲಿ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ. ಸಾಧಾರಣದಿಂದ ಭಾರೀ, ಅತೀ ಭಾರಿ ಮಳೆ ಆಗಲಿದೆ. ಕೆಲವು ಪ್ರದೇಶಗಳಲ್ಲಿ ಹಗುರ ಮಳೆ ಆಗುವ ಸಾಧ್ಯತೆ ಇವೆ ಎಂದು ತಿಳಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications