ಪತ್ರಕರ್ತರಿಗಾಗಿ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಸ್ಥಾಪನೆ
ಬೆಂಗಳೂರು, ಆ.4 : ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘ ಹರ್ಮನ್ ಮೊಗ್ಲಿಂಗ್ ಜೀವಮಾನ ಸಾಧನೆಯ ಪ್ರಶಸ್ತಿಯನ್ನು ಸ್ಥಾಪನೆ ಮಾಡಿದೆ. ಕರ್ನಾಟಕ ಮೂಲದ ಒಬ್ಬ ಪತ್ರಕರ್ತರಿಗೆ ಪ್ರತಿ ವರ್ಷ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಪರಿಣಿತರು ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಿದ್ದಾರೆ. ಈ ಪ್ರಶಸ್ತಿಯು ಒಂದು ಪ್ರಶಸ್ತಿ ಪತ್ರ, ಮೊಗ್ಲಿಂಗ್ ಅವರ ಉಬ್ಬುಚಿತ್ರವಿರುವ ಸ್ಮರಣಿಕೆ ಮತ್ತು ಒಂದು ಲಕ್ಷ ರೂಪಾಯಿಗಳ ನಗದು ಬಹುಮಾನವನ್ನು ಒಳಗೊಂಡಿರುತ್ತದೆ.

ಮಾಜಿ ಸಂಸದ ಎಚ್.ಟಿ.ಸಾಂಗ್ಲಿಯಾನ, ಹಿರಿಯ ಪತ್ರಕರ್ತರಾದ ಹುಣಸವಾಡಿ ರಾಜನ್, ಓರ್ವ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ವಿಜೇತರನ್ನು ಆಯ್ಕೆ ಮಾಡಲಿದೆ. ಪ್ರತಿ ವರ್ಷ ಕೇವಲ ಒಬ್ಬರು ಪತ್ರಕರ್ತರಿಗೆ ಮಾತ್ರ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬೈರಸಂದ್ರ ಗಂಗರಾಜು ಅವರು ಈ ಕುರಿತು ಮಾಹಿತಿ ನೀಡಿದ್ದು, 'ಪ್ರಶಸ್ತಿಯು ಕರ್ನಾಟಕದಲ್ಲಿನ ಆಂಗ್ಲ ಮತ್ತು ಪ್ರಾದೇಶಿಕ ಮುಖ್ಯವಾಹಿನಿಯ ಎಲ್ಲಾ ಪತ್ರಕರ್ತರಿಗೆ ಮುಕ್ತವಾಗಿರುತ್ತದೆ. ಕರ್ನಾಟಕದಲ್ಲಿ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಿದ 20 ಪತ್ರಕರ್ತರ ಪಟ್ಟಿಯನ್ನು ಮಾಡಿ ಅದರಲ್ಲಿ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ' ಎಂದರು.
2017ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ 12, 2017 ರಂದು ಏಟ್ರಿಯಾ ಹೋಟೆಲ್ ನಲ್ಲಿ ನಡೆಯಲಿದೆ. ಹೆರ್ಬಲೈಫ್, ಕೃಪಾನಿಧಿ ಶಿಕ್ಷಣ ಸಂಸ್ಥೆಗಳ ಸಮೂಹ ಮತ್ತು ಪ್ರೆಸ್ಟೀಜ್ ಸಮೂಹಗಳು ಇದಕ್ಕೆ ಬೆಂಬಲ ನೀಡುತ್ತಿವೆ.
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಹಲವು ರಾಜಕಾರಣಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಯಾರು ಹರ್ಮನ್ ಮೊಗ್ಲಿಂಗ್? : ಜರ್ಮನ್ ಪ್ರಜೆಯಾದ ಹರ್ಮನ್ ಮೊಗ್ಲಿಂಗ್ 1836ರಲ್ಲಿ ತಮ್ಮ ಕಿಸೆಯಲ್ಲಿ ಕೇವಲ ಒಂದು ಬೈಬಲ್ ಇರಿಸಿಕೊಂಡು ಮಂಗಳೂರಿಗೆ ಬಂದಿದ್ದರು. ಕನ್ನಡ ಭಾಷೆಯ ಮೇಲಿನ ಪ್ರೀತಿಯಿಂದಾಗಿ ಅದನ್ನು ಕಲಿತು ಭಾಷೆಯ ಮೇಲೆ ಪ್ರಭುತ್ವ ಸಾಧಿಸಿದ ನಂತರ ಕನ್ನಡದಲ್ಲಿ ಮೊಟ್ಟ ಮೊದಲ ಪ್ರಾದೇಶಿಕ ಭಾಷೆಯ ವಾರ್ತಾ ಪತ್ರಿಕೆ ಮಂಗಳೂರು ಸಮಾಚಾರವನ್ನು ಆರಂಭಿಸಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka: ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳು ಪ್ರಕಟ: ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications