ಪಂಚ ರಾಜ್ಯಗಳ ಚುನಾವಣೆಗೆ ಕರ್ನಾಟಕದಲ್ಲಿ ಹಣ ಸಂಗ್ರಹ ಎಂದ ಬಿಜೆಪಿ: ಸಿದ್ದರಾಮಯ್ಯ ಕೆಂಡಾಮಂಡಲ

ಮೈಸೂರು, ಅಕ್ಟೋಬರ್ 16 : ಕಾಂಗ್ರೆಸ್ ಪಂಚ ರಾಜ್ಯಗಳ ಚುನಾವಣೆಗೆ ಕರ್ನಾಟಕದಲ್ಲಿ ಹಣ ಸಂಗ್ರಹಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ನಮಗೆ ಈವರೆಗೂ ಹೈಕಮಾಂಡ್ ನಯಾ ಪೈಸೆ ಹಣವನ್ನು ಕೇಳಿಲ್ಲ.ಬಿಜೆಪಿ ನಾಯಕರು ಮಾಡುತ್ತಿರುವ ಎಲ್ಲಾ ಆರೋಪಗಳು ಸುಳ್ಳು. ಅವೆಲ್ಲವೂ ನಿರಾಧಾರ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸೋಮವಾರ ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತವಾಗಿದ್ದು,ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

bjps-allegation-is-false-says-cm-siddaramaiah

ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡಿದೆ. ಯಾರದೋ ಮನೆಯಲ್ಲಿ ಹಣ ಪತ್ತೆಯಾಗಿದ್ದು, ಇದಕ್ಕೆ ರಾಜಕೀಯ ನಂಟು ಹಾಕುವುದು ಸರಿಯಲ್ಲ. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ. ಲೋಕಸಭೆ ಚುನಾವಣೆ ಹಾಗೂ ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಯಾವುದೇ ತನಿಖೆಯ ಅವಶ್ಯಕತೆಯಿಲ್ಲ. ಪಂಚರಾಜ್ಯಗಳ ಚುನಾವಣೆಯ ಇರುವುದರಿಂದ ಕಾಂಗ್ರೆಸ್‍ನ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ನಾಯಕರಿಗೆ ದುಡ್ಡು ಸಂಗ್ರಹಿಸುವ ಗುರಿ ನೀಡಿರುವುದಾಗಿ ಬಿಜೆಪಿಯ ಸಿ.ಟಿ.ರವಿಯವರು ಮಾಡಿರುವ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸಿ.ಟಿ.ರವಿಯವರ ಹೇಳಿಕೆಗಳು ಸದಾ ಸುಳ್ಳಿನಿಂದ ಕೂಡಿರುತ್ತದೆ. ಅವರ ಸುಳ್ಳು ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ. ಈ ರೀತಿಯ ಎಲ್ಲ ಆರೋಪಗಳು ಸುಳ್ಳು ಮತ್ತು ಆಧಾರರಹಿತವಾಗಿದೆ ಎಂದರು.

ಗ್ರಾಮೀಣ ಭಾಗಕ್ಕೆ ವಿದ್ಯುತ್ ಸಮರ್ಪಕವಾಗಿ ಸರಬರಾಜಾಗುತ್ತಿಲ್ಲವೆಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ಹೊರತುಪಡಿಸಿದರೆ, ನಂತರದ ಬಿಜೆಪಿ ಅಥವಾ ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಒಂದು ಮೆ.ವ್ಯಾಟ್ ವಿದ್ಯುತ್ತನ್ನೂ ಉತ್ಪಾದನೆ ಮಾಡಿಲ್ಲ. ಮಳೆ ಅಭಾವದಿಂದಾಗಿ ಪಂಪಸೆಟ್ ಗಳಿಗೆ ವಿದ್ಯುತ್ ವ್ಯತ್ಯಯವಾಗಿದೆ.

bjps-allegation-is-false-says-cm-siddaramaiah

ಸಾಧಾರಣವಾಗಿ, ಅಕ್ಟೋಬರ್ ಮಾಹೆಯವರೆಗೆ 10,000 ಮೆ.ವ್ಯಾ ವಿದ್ಯುತ್ ಖರ್ಚಾಗುತ್ತಿತ್ತು. ಆದರೆ ಈ ಬಾರಿ 16,000 ಮೆ.ವ್ಯಾಟ್ ಖರ್ಚಾಗುತ್ತಿದೆ. ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಆದ್ದರಿಂದ ವಿದ್ಯುತ್ ಸಮಸ್ಯೆ ತಲೆದೋರಿರುವುದು ನಿಜ.

ಈ ಬಗ್ಗೆ ಸಭೆ ನಡೆಸಿ, ರೈತರಿಗೆ ಮೂರು ಫೇಸ್ ಗಳಲ್ಲಿ 5 ಗಂಟೆಗಳ ಕಾಲ ಸತತ ವಿದ್ಯುತ್ ನೀಡಬೇಕು. ಹೊರಗಿನಿಂದ ವಿದ್ಯುತ್ ಖರೀದಿಸಲು ಸೂಚನೆ ನೀಡಲಾಗಿದೆ. ಕಬ್ಬು ಅರೆಯುವಿಕೆಯಿಂದ ವಿದ್ಯುತ್ ಕೋ ಜನರೇಷನ್ ನತ್ತಲೂ ಗಮನ ಹರಿಸಲು ಸೂಚಿಸಲಾಗಿದೆ. ಲೋಡ್ ಶೆಡ್ಡಿಂಗ್ ನಿಂದ ರೈತರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಜಾನುವಾರುಗಳಿಗೆ ಮೇವಿನ ಕೊರತೆ ಆಗುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಪ್ರಸ್ತುತ ಮೇವಿನ ಕೊರತೆಯಿಲ್ಲ. ಆದರೂ ಮೇವು ಬೆಳೆಸಲು ಹಾಗೂ ಶೇಖರಣೆಗೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. 236 ತಾಲ್ಲೂಕುಗಳಲಿ 216 ತಾಲ್ಲೂಕುಗಳು ಬರಪೀಡಿತವಾಗಿದೆ.

ವಾಸ್ತವವಾಗಿ 42 ಸಾವಿರ ಹೆಕ್ಟೇರ್‍ನಲ್ಲಿ ಬೆಳೆಹಾನಿಯಾಗಿದ್ದು, 30 ಸಾವಿರ ಕೋಟಿಯಷ್ಟು ನಷ್ಟವಾಗಿದೆ, ಕೇಂದ್ರದ ಮಾರ್ಗಸೂಚಿಯಂತೆ 4860 ಕೋಟಿ ರೂ. ಪರಿಹಾರ ಮೊತ್ತ ಕೋರಲಾಗಿದೆ.

ಕುಡಿಯುವ ನೀರಿಗೆ ಸಂಬಂಧಿಸಿದಂತೆ, ಖಾಸಗಿ ಕೊಳವೆಬಾವಿಗಳನ್ನು ಬಳಸಬೇಕು. ಅಗತ್ಯವಿದ್ದಲ್ಲಿ ಹೊಸ ಕೊಳವೆಬಾವಿಗಳನ್ನು ಕೊರೆಯಲು ಸಹ ತಿಳಿಸಲಾಗಿದೆ. ಒಟ್ಟಾರೆ ಜನರ ಕೈಗೆ ಕೆಲಸ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸುವುದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+