ಭೂ ಮಾಪಕರಿಗೆ ಹೆಚ್ಚುವರಿ ಸಂಭಾವನೆ ನೀಡಿ: ಹೈಕೋರ್ಟ್
ಬೆಂಗಳೂರು, ಜೂನ್ 06: ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಪರವಾನಗಿ ಹೊಂದಿರುವ 1000ಕ್ಕೂ ಅಧಿಕ ಭೂ ಮಾಪಕರಿಗೆ ಹೆಚ್ಚುವರಿ ಸಂಭಾವನೆ ಸಿಗಲಿದೆ. ಅವರು 15 ವರ್ಷದ ಹಿಂದೆ ಮಾಡಿದ್ದ ಹೆಚ್ಚುವರಿ ಕೆಲಸಕ್ಕೆ ಇದೀಗ ಲಾಭ ದೊರಕಲಿದೆ. ಅದೂ ಎರಡು ಸುತ್ತಿನ ಕಾನೂನು ಹೋರಾಟದ ನಂತರ.
2008ರಿಂದ 2013ರ ಅವಧಿಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ತತ್ಕಾಲ್ ಸೇವೆಗಳ ಅಡಿಯಲ್ಲಿ ಹೆಚ್ಚವರಿ ಸೇವೆ ಸಲ್ಲಿಸಿರುವ ರಾಜ್ಯ ಭೂ ಮಾಪನ ಮತ್ತು ಭೂ ದಾಖಲೆಗಳ ಇಲಾಖೆಯಿಂದ ಅನುಮತಿ ಪಡೆದ ಭೂ ಮಾಪಕರಿಗೆ ಮುಂದಿನ ಮೂರು ತಿಂಗಳಲ್ಲಿ ಸಂಭಾವನೆ ಪಾವತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಅಲ್ಲದೆ, ಸಂಭಾವನೆ ಪಾವತಿ ಮಾಡುವ ಪ್ರಕ್ರಿಯೆ ವಿಳಂಬ ವಾದಲ್ಲಿ ಶೇ.1 ರಷ್ಟು ಬಡ್ಡಿಯೊಂದಿಗೆ ಪಾವತಿ ಮಾಡಬೇಕು. ಈ ಮೊತ್ತವನ್ನು ತಪ್ಪಿತಸ್ಥ ಅಧಿಕಾರಿಗಳಿಂದ ವಸೂಲಿ ಮಾಡಬೇಕು ಎಂದು ನ್ಯಾಯಪೀಠ ಸೂಚನೆ ನೀಡಿದೆ.
ಕೆ. ಬಿ. ಲೋಕೇಶ್ ಸೇರಿ 1,130 ಮಂದಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ರಾಮಚಂದ್ರ ಹುದ್ದಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಹೈಕೋರ್ಟ್ ಆದೇಶವೇನು?: ಸರ್ಕಾರ ಆದೇಶದ ಅವಧಿಯಲ್ಲಿ ಅರ್ಜಿ ಸಲ್ಲಿಸಿರುವ ಭೂ ಮಾಪಕರು ಸೇವೆ ಸಲ್ಲಿಸಿರುವ ಸಂಬಂಧ ಖಚಿತಪಡಿಸಿಕೊಂಡ ಬಳಿಕ ಸಂಭಾವನೆ ಪಾವತಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಸೂಚಿಸಿದೆ.
ತತ್ಕಾಲ್ನಲ್ಲಿ ಸೇವೆ ಪಡೆದು ಕೊಂಡ ಫಲಾನುಭವಿಗಳಿಂದ ಸಂಗ್ರಹಿಸಿರುವ ಮೊತ್ತವನ್ನು ಪರವಾನಿಗೆ ಪಡೆದ ಭೂ ಮಾಪಕರಿಗೆ ಪಾವತಿ ಮಾಡಿಲ್ಲ. ಆದರೆ, ಈ ಮೊತ್ತವನ್ನು ಸರ್ಕಾರದ ಖಜಾನೆಗೂ ಪಾವತಿಸಿಲ್ಲ. ಆದರೆ, ಪ್ರತ್ಯೇಕ ಖಾತೆಯಲ್ಲಿಡಲಾಗಿದೆ. ಸೇವೆ ಸಲ್ಲಿಸಿದ ಭೂ ಮಾಪಕರಿಗೆ ಸಂಭಾವನೆ ಪಾವತಿಸದಿರುವುದು ಸರ್ಕಾರದ ಅನ್ಯಾಯದ ನಡೆಯಾಗಿದೆ ಎಂದು ಪೀಠ ಹೇಳಿದೆ.
ಅಲ್ಲದೆ, ಹೆಚ್ಚುವರಿ ಕೆಲಸವನ್ನು ಮಾಡಿಸಿಕೊಂಡಿರುವ ಸರ್ಕಾರ ಅದಕ್ಕೆ ಸಂಭಾವನೆ ನೀಡದಿರುವುದು ಸರಿಯಾದ ಕ್ರಮವಲ್ಲಿ. ಸೇವಕರ ರಕ್ತ ಮತ್ತು ಬೆರವಿಗೆ ಬೆಲೆ ನೀಡಬೇಕಾಗಿದೆ ಎಂದು ತಿಳಿಸಿದ ನ್ಯಾಯಪೀಠ, ಸಂಭಾವನೆ ಪಾವತಿಗೆ ಸೂಚನೆ ನೀಡಿ ಆದೇಶಿಸಿದೆ.
ವಿಚಾರಣೆ ವೇಳೆ ಮೇಲ್ಮನವಿದಾರರ ಪರ ವಕೀಲರು, ಮೇಲ್ಮನವಿ ಸಲ್ಲಿಸಿರುವವರು 2008ರ ಆದೇಶದ ಪ್ರಯೋಜನವನ್ನು 2013ರಲ್ಲಿ ನಿಯಮಗಳ ತಿದ್ದುಪಡಿ ಮಾಡುವವರೆಗೂ ಹೆಚ್ಚುವರು ಶುಲ್ಕವನ್ನು ಪಡೆಯಲಯ ಅರ್ಹರಾಗಿರತ್ತಾರೆ. 2008ರ ಆದೇಶದ ಪ್ರಕಾರ ರಾಜ್ಯ ಸರ್ಕಾರವು ಈ ಮೇಲ್ಮನವಿದಾರರಿಗೆ ಮಾಡಬೇಕಾದ ಕೆಲಸವನ್ನು ಮಾಡಿಸಿಕೊಳ್ಳಲಾಗಿದೆ. ಆದರೆ ಸಂಭಾವನೆ ಪಾವತಿ ಮಾಡಿಲ್ಲ ಎಂದು ತಿಳಿಸಿದರು.
ಪ್ರಕರಣದ ಹಿನ್ನೆಲೆ: ರಾಜ್ಯ ಸರ್ಕಾರ ರೈತರಿಗೆ ತುರ್ತು ನೆರವಿಗಾಗಿ ತತ್ಕಾಲ್ ಪೋಡಿ ಕಾಮಗಾರಿಗೆ ಶುಲ್ಕವನ್ನು 500 ರೂ.ಗಳು ಮತ್ತು ಪೂರ್ವಭಾವಿ ಸ್ಕೆಚ್ಗೆ ಈ ಹಿಂದೆ ಇದ್ದಂತಹ 430 ರೂ.ಗಳನ್ನು 600 ರೂ.ಗಳಿಗೆ ಹೆಚ್ಚಳ ಮಾಡಿ ಆದೇಶಿಸಿತ್ತು. ಈ ಆದೇಶದಂತೆ 2008ರಿಂದ 2013ರ ವರೆಗೂ ಜಾರಿಯಲ್ಲಿತ್ತು. ಈ ಅವಧಿಯಲ್ಲಿ ಸೇವೆ ಸಲ್ಲಿಸಿದ್ದ ಭೂ ಮಾಪಕರಿಗೆ ಹೆಚ್ಚುವರಿ ಶುಲ್ಕವನ್ನು ಪಾವತಿ ಮಾಡಬೇಕಾಗಿತ್ತು.
ಆದರೆ, ಸರ್ಕಾರ ಪಾವತಿ ಮಾಡಿರಲಿಲ್ಲ. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಏಕ ಸದಸ್ಯಪೀಠ, ಅರ್ಜಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications