ಆನ್ಲೈನ್ ಜೂಜು; ನಿರ್ಧಾರ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು, ಜೂನ್ 02: ರಾಜ್ಯದಲ್ಲಿ ಆನ್ಲೈನ್ ಜೂಜಾಟ ನಿಷೇಧದ ಸಂಬಂಧ ಸರ್ಕಾರ ತನ್ನ ನಿರ್ಧಾರವನ್ನು ಸ್ಪಷ್ಟಪಡಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಂಗಳವಾರ ನಿರ್ದೇಶನ ನೀಡಿದೆ.
ಮಂಗಳವಾರ ಆನ್ಲೈನ್ ಜೂಜಾಟ ನಿಷೇಧಿಸುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ನೇತೃತ್ವದ ವಿಭಾಗೀಯ ಪೀಠವು, "ಆನ್ಲೈನ್ ಜೂಜನ್ನು ರಾಜ್ಯದಲ್ಲಿ ನಿಷೇಧಿಸಬೇಕೆ? ಈ ಸಂಬಂಧ ಸ್ಪಷ್ಟ ನಿಲುವು ತೆಗೆದುಕೊಳ್ಳಿ. ಮಾರ್ಚ್ 31ರ ಆದೇಶವನ್ನು ನೀವು ಪಾಲಿಸಿಲ್ಲ. ಈ ಸಂಬಂಧ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ" ಎಂದು ಸರ್ಕಾರವನ್ನು ಪ್ರಶ್ನಿಸಿದೆ.

ಮೇ 27ರ ಒಳಗೆ ಆನ್ಲೈನ್ ಜೂಜಿನ ಕುರಿತು ರಾಜ್ಯಗಳು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವಂತೆ ಮಾರ್ಚ್ 31ರ ಆದೇಶದಲ್ಲಿ ತಿಳಿಸಲಾಗಿತ್ತು.
ಸೂಕ್ತ ನಿಯಮಾವಳಿ ರೂಪಿಸುವವರೆಗೂ ಎಲ್ಲಾ ರೀತಿಯ ಆನ್ ಲೈನ್ ಜೂಜಾಟ ನಿಷೇಧಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಕೊರೊನಾದಂಥ ಈ ಬಿಕ್ಕಟ್ಟಿನ ಸಮಯದಲ್ಲಿ ಆನ್ಲೈನ್ ಜೂಜಿನಿಂದ ಯುವಜನತೆ ತಪ್ಪು ದಾರಿ ಹಿಡಿಯುತ್ತಿದ್ದಾರೆ. ಈ ಸಂಬಂಧ ನಿಯಮಾವಳಿ ರೂಪಿಸುವಂತೆ ಮನವಿ ಮಾಡಿದ್ದರೂ ರಾಜ್ಯ ಸರ್ಕಾರ ಪರಿಗಣಿಸಿಲ್ಲ. ಹೀಗಾಗಿ ನಿಯಮಾವಳಿ ರೂಪಿಸುವವರೆಗೂ ಎಲ್ಲಾ ರೀತಿಯ ಆನ್ಲೈನ್ ಜೂಜಾಟವನ್ನು ನಿಷೇಧಿಸಿ ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ರಾಜ್ಯ ಸರ್ಕಾರ ಈ ವಿಷಯದಲ್ಲಿ ಸ್ಪಷ್ಟ ನಿಲುವು ದಾಖಲಿಸಬೇಕು ಎಂದು ಪೀಠ ತಿಳಿಸಿದ್ದು, ಜೂನ್ 22ರವರೆಗೂ ಗಡುವು ನೀಡಿದೆ. ರಮ್ಮಿ ಮತ್ತು ಪೋಕರ್ನಂತಹ ಆನ್ಲೈನ್ ಗೇಮ್ಗಳನ್ನು ಆಂಧ್ರಪ್ರದೇಶ ಸರ್ಕಾರ ಈಗಾಗಲೇ ನಿಷೇಧಿಸಿದೆ. ರಾಜ್ಯ ಸರ್ಕಾರ ಯಾವ ಕ್ರಮ ತೆಗೆದುಕೊಳ್ಳುತ್ತದೆ ಕಾದುನೋಡಬೇಕಿದೆ.
Recommended Video
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications