Breaking: ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ನೀಡುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ; ಕರ್ನಾಟಕ HC
ಬೆಂಗಳೂರು, ಏಪ್ರಿಲ್ 1: ಸಿದ್ದಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಲಾಗಿದೆ. ಶ್ರೀಗಳಿಗೆ ಭಾರತ ರತ್ನ ನೀಡಲು ಪ್ರಧಾನಮಂತ್ರಿಗೆ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿ ವಜಾಗೊಂಡಿದೆ.
ರೆಹಾನ್ ಖಾನ್ ಎಂಬುವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ಭಾರತರತ್ನ ನೀಡುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ರಾಷ್ಟ್ರಪತಿಗಳು ಸರ್ಕಾರದೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತಾರೆ. ಪ್ರಶಸ್ತಿ ನೀಡುವಂತೆ ಕೋರ್ಟ್ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.
ಸಿದ್ದಗಂಗಾ
ಮಠದಲ್ಲಿ
ಗುರುವಂದನಾ
ಕಾರ್ಯಕ್ರಮ
ಡಾ.
ಶಿವಕುಮಾರ
ಸ್ವಾಮೀಜಿಗಳ
115ನೇ
ಜಯಂತೋತ್ಸವ
ಕಾರ್ಯಕ್ರಮ
ಸಿದ್ದಗಂಗಾ
ಮಠದ
ಆವರಣದಲ್ಲಿ
ಇಂದು
(ಏಪ್ರಿಲ್
1)
ಅದ್ಧೂರಿಯಾಗಿ
ನಡೆಯುತ್ತಿದೆ.
ಕಾರ್ಯಕ್ರಮದಲ್ಲಿ
ಕೇಂದ್ರ
ಗೃಹ
ಸಚಿವ
ಅಮಿತ್
ಶಾ
ಭಾಗಿಯಾಗಿದ್ದಾರೆ.
ಅಮಿತ್ ಶಾ ಬೆಳಗ್ಗೆ 10.30 ಕ್ಕೆ ತುಮಕೂರು ವಿವಿಯ ಹೆಲಿಪ್ಯಾಡ್ಗೆ ಆಗಮಿಸಿದ ಬಳಿಕ ರಸ್ತೆ ಮಾರ್ಗವಾಗಿ ಸಿದ್ದಗಂಗಾ ಮಠದತ್ತ ಪ್ರಯಾಣ ಮಾಡಿದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು.
Recommended Video
ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾದರು. ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಗಳು, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಭಗವಂತ್ ಖೂಬಾ, ಸಚಿವರು, ಸಂಸದರು ಸೇರಿದಂತೆ ಹಲವು ಗಣ್ಯರು ಭಾಗಿ ಆಗಲಿದ್ದಾರೆ. ವೇದಿಕೆ ಮೇಲೆ ಕೂರಲು 22 ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.