ಕೋರ್ಟ್ನಲ್ಲಿ ಗದ್ದಲ: ವಕೀಲ ಜಗದೀಶ್ಗೆ 2 ಲಕ್ಷ ರೂ. ದಂಡ
ಬೆಂಗಳೂರು, ನವೆಂಬರ್ 30; ಬೆಂಗಳೂರು ನಗರದ ಸಿಟಿ ಸಿವಿಲ್ ಕೋರ್ಟ್ನಲ್ಲಿ ಗದ್ದಲ ಉಂಟು ಮಾಡಿದ ಮತ್ತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಹೇಳಿಕೆ ನೀಡಿದ್ದ ವಕೀಲ ಕೆ. ಎನ್. ಜಗದೀಶ್ಗೆ ಹೈಕೋರ್ಟ್ ದಂಡ ವಿಧಿಸಿದೆ. ಅಲ್ಲದೇ, ಬೇಷರತ್ ಕ್ಷಮೆಯಾಚಿಸಿದ ಹಿನ್ನೆಲೆಯಲ್ಲಿ ಅವರ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಟ್ಟಿದೆ.
ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಳೆ ಅವರ ನೇತೃತ್ವದ ವಿಭಾಗೀಯಪೀಠ ಮಂಗಳವಾರ ಈ ಆದೇಶ ಮಾಡಿದೆ.
ಹೆಲ್ಮೆಟ್ ವಿರುದ್ಧ ಹೋರಾಡಿದ ವಕೀಲ ಅದೇ ಹೆಲ್ಮೆಟ್ ಇಲ್ಲದ್ದಕ್ಕೆ ಸಾವು!
ಆರೋಪಿ ವಕೀಲ ಜಗದೀಶ್ಗೆ ವಿಧಿಸಿದ 2 ಲಕ್ಷ ರೂ. ದಂಡದ ಪೈಕಿ 1 ಲಕ್ಷ ಹಣವನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ, ಬೆಂಗಳೂರು ವಕೀಲರ ಸಂಘದ ಗ್ರಂಥಾಲಯ ಅಭಿವೃದ್ಧಿಗೆ ಮತ್ತು ಹೈಕೋರ್ಟ್ ಗುಮಾಸ್ಥರ ಕ್ಷೇಮಾಭಿವೃದ್ಧಿ ಸಂಘಕ್ಕೆ ತಲಾ 50 ಸಾವಿರ ರೂ. ಪಾವತಿಸಬೇಕಿದೆ.
Breaking; ಎಎಪಿ ಸೇರಿದ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪ
ಈ ಆದೇಶದ ಅನುಪಾಲನಾ ವರದಿಯನ್ನು ಎರಡು ವಾರಗಳಲ್ಲಿ ಸಲ್ಲಿಸಬೇಕು ಎಂದು ಹೈಕೋರ್ಟ್ ಆದೇಶದಲ್ಲಿ ನಿರ್ದೇಶಿಸಿ ವಿಚಾರಣೆಯನ್ನು ಮುಂದೂಡಿತು.
ನಕಲಿ ಅಂಕಪಟ್ಟಿ ಪಡೆದ ಅರೋಪ: ವಕೀಲ ಜಗದೀಶ್ ವಿರುದ್ಧ FIR ದಾಖಲು!
ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿದ ಆರೋಪಿ ವಕೀಲ ಕೆ. ಎನ್. ಜಗದೀಶ್, 'ಫೆ. 10, 11 ಮತ್ತು 12ರಂದು ನಾನು ತೋರಿದ ಅನುಚಿತ ವರ್ತನೆಗೆ ನ್ಯಾಯಾಲಯಕ್ಕೆ ಬೇಷರತ್ ಕ್ಷಮೆಯಾಚಿಸುತ್ತೇನೆ. ಮುಂದೆ ನ್ಯಾಯಾಲಯದ ಒಳಗೆ ಹಾಗೂ ಹೊರಗೆ ಸಭ್ಯವಾಗಿ ವರ್ತಿಸುತ್ತೇನೆ. ಆದ್ದರಿಂದ ನನ್ನ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಡಬೇಕು' ಎಂದು ಕೋರಿದ್ದರು. ಈ ಪ್ರಮಾಣಪತ್ರ ದಾಖಲಿಸಿಕೊಂಡ ಹೈಕೋರ್ಟ್, ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಟ್ಟು ಎಚ್ಚರಿಕೆ ನೀಡಿದೆ.
ಪ್ರಕರಣದ ವಿವರ: 2022 ರ ಫೆ. 11ರಂದು ಪ್ರಕರಣವೊಂದರ ಸಂಬಂಧ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ಗೆ ವಕೀಲ ಜಗದೀಶ್ ಹಾಜರಾಗಿದ್ದರು. ಈ ವೇಳೆ ಕೆಲ ವಕೀಲರೊಂದಿಗೆ ಮಾತಿನ ಚಕಮಕಿ ನಡೆದಿತ್ತು.
ಈ ವೇಳೆ ಕೋರ್ಟ್ ಆವರಣದಲ್ಲಿ ಗದ್ದಲ ಉಂಟಾಗಿತ್ತು ಎಂದು ತಿಳಿಸಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ರಿಜಿಸ್ಟ್ರಾರ್ ಮತ್ತು ಪ್ರಧಾನ ನ್ಯಾಯಧೀಶರು ಕ್ರಮವಾಗಿ ಫೆ. 10 ಮತ್ತು 11ರಂದು ಹೈಕೋರ್ಟ್ಗೆ ವರದಿ ಸಲ್ಲಿಸಿದ್ದರು.
ನಂತರ 2022 ರ ಫೆ. 12 ರಂದು ಫೇಸ್ಬುಕ್/ ಯೂಟ್ಯೂಬ್ ಲೈವ್ಗೆ ಬಂದ ವಕೀಲ ಕೆ. ಎನ್. ಜಗದೀಶ್, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಹೇಳಿಕೆ ನೀಡಿದ್ದರು. ಈ ಸಂಬಂಧ ಅವರ ವಿರುದ್ಧ ಸುಪ್ರೀಂ ಕೊರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ರಾಷ್ಟ್ರಪತಿಗೆ ದೂರು ಬರೆಯುತ್ತೇನೆ ಎಂದು ತಿಳಿಸಿದ್ದರು.
ಇದನ್ನು ಆಧರಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್, ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಅರ್ಜಿ ದಾಖಲು ಮಾಡಿದ್ದರು.