ಕಾಫಿ ಗಿಡದ ನಡುವೆ ಗಾಂಜಾ ಬೆಳೆದಿದ್ದವನಿಗೆ ಸಿಕ್ತು ಜಾಮೀನು!
ಬೆಂಗಳೂರು, ಮೇ 23: ಕಾಫಿ ತೋಟದ ಮಧ್ಯೆ 8 ಗಾಂಜಾ ಗಿಡ ಬೆಳೆದಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಚಿಕ್ಕಮಗಳೂರಿನ ವ್ಯಕ್ತಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹಾಗಾಗಿ, ಆತ ಜೈಲಿನಿಂದ ಹೊರಗೆ ಬರುವಂತಾಗಿದೆ.
55 ವರ್ಷದ ಪ್ರಕರಣದ ಆರೋಪಿ ಕೆ. ಎಂ. ರಾಜೇಂದ್ರ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ಜಿ. ಉಮಾ ಅವರಿದ್ದ ರಜಾಕಾಲದ ಪೀಠ ಈ ಆದೇಶ ಮಾಡಿದೆ. ಆರೋಪಿಯು 2 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ (ಶ್ಯೂರಿಟಿ) ನೀಡಬೇಕು. ಇದೇ ಮಾದರಿಯ ಅಪರಾಧ ಕೃತ್ಯದಲ್ಲಿ ಭಾಗಿಯಾಗಬಾರದು ಎಂದು ಹೈಕೋರ್ಟ್ ಷರತ್ತು ವಿಧಿಸಿದೆ.

ಅರ್ಜಿದಾರನ ವಿರುದ್ಧದ ಆರೋಪ ಗಂಭೀರ ಸ್ವರೂಪದಿಂದ ಕೂಡಿದೆ. ತೋಟದಲ್ಲಿ 8 ಗಾಂಜಾಗಿಡ ಬೆಳೆದಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡು ಸ್ಥಳವನ್ನು ಮಹಜರು ಮಾಡಿದ್ದಾರೆ. ಆದಾಗ್ಯೂ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಮುಂದಿನ ವಿಚಾರಣೆಗೆ ಅರ್ಜಿದಾರ ಅಗತ್ಯವಿಲ್ಲವಾಗಿದೆ. ಹಾಗಾಗಿ, ಆತನಿಗೆ ಜಾಮೀನು ನೀಡಲಾಗುತ್ತಿದೆ ಎಂದು ಆದೇಶದಲ್ಲಿ ನ್ಯಾಯಪೀಠ ಹೇಳಿದೆ.
ಅಲ್ಲದೆ, ಆರೋಪಿ ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದತಿಗೆ ತನಿಖಾಧಿಕಾರಿಗಳು ವಿಚಾರಣಾ ನ್ಯಾಯಾಲಯವನ್ನು ಕೋರಬಹುದು. ಇನ್ನೂ ಆರೋಪಿ ಒದಗಿಸುವ ಶ್ಯೂರಿಟಿಗಳ ವಿಳಾಸ ಮತ್ತು ದಾಖಲೆಗಳ ನೈಜತೆಯನ್ನು ಪರಿಶೀಲಿಸಲು ವಿಚಾರಣಾ ನ್ಯಾಯಾಲಯ ತನಿಖಾಧಿಕಾರಿಗೆ ನಿರ್ದೇಶಿಸಬಹುದು.
ಒಂದೊಮ್ಮೆ ಅಂತಹ ಸೂಚನೆಯನ್ನು ವಿಚಾರಣಾ ನ್ಯಾಯಾಲಯ ನೀಡಿದರೆ, ತನಿಖಾಧಿಕಾರಿಯು 5 ದಿನದಲ್ಲಿ ವರದಿ ಸಲ್ಲಿಸಬೇಕು. ಆ ವರದಿ ವಿಚಾರಣಾ ನ್ಯಾಯಾಲಯಕ್ಕೆ ತೃಪ್ತಿದಾಯಕವಾದಲ್ಲಿ ಅರ್ಜಿದಾರನನ್ನು ಜಾಮೀನು ಮೇಲೆ ಬಿಡುಗಡೆ ಮಾಡಬಹುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಪ್ರಕರಣದ ಹಿನ್ನೆಲೆ: ಖಚಿತ ಮಾಹಿತಿ ಮೇರೆಗೆ ಚಿಕ್ಕಮಗಳೂರು ಸಿಇಎನ್ ಠಾಣಾ ಪೊಲೀಸರು, 2024ರ ಮಾ.6ರಂದು ಬೆಳಗ್ಗೆ 8 ಗಂಟೆಗೆ ಆವತಿ ಹೋಬಳಿಯ ಕೆಳಹೋಲಗದ್ದೆ ಗ್ರಾಮದ ನಿವಾಸಿ ರಾಜೇಂದ್ರ ಎಂಬಾತನ ಕಾಫಿ ತೋಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಕಾಫಿ ಗಿಡಗಳ ಮಧ್ಯೆ ಮಾರಾಟ ಮಾಡುವ ಉದ್ದೇಶದಿಂದ 8 ಗಾಂಜಾ ಗಿಡ ಬೆಳೆದಿರುವುದು ಕಂಡುಬಂದಿತ್ತು. ಅದರಂತೆ 1 ಸಾವಿರ ರೂ. ಬೆಲೆಬಾಳುವ 100 ಗ್ರಾಂ ನಷ್ಟು ಗಾಂಜಾ ಗಿಡ, ಅದರ ಹಸಿ ಬೇರು, ಕಾಂಡಾ, ಕಡ್ಡಿ ಮತ್ತು ಸೊಪ್ಪು, ಹೂವು ಮೊಗ್ಗು ಅನ್ನು ವಶಪಡಿಸಿಕೊಂಡಿದ್ದರು.
ಬಳಿಕ ಪೊಲೀಸರು ರಾಜೇಂದ್ರ ಅವರನ್ನು ಬಂಧಿಸಿದ್ದರು. ಗಾಂಜಾ ಗಿಡ ಬೆಳೆಸಿಕೊಡುವಂತೆ ಹೇಳಿದ್ದ ಅದೇ ಗ್ರಾಮದ ಲಕ್ಷ್ಮಣ್ ಎಂಬಾತನನ್ನು ಎರಡನೇ ಆರೋಪಿಯನ್ನಾಗಿಸಿದ್ದರು. ಜಾಮೀನು ಕೋರಿ ರಾಜೇಂದ್ರ ಹೈಕೋರ್ಟ್ ಮೊರೆ ಹೋಗಿದ್ದರು.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications