ಕಾಫಿ ಗಿಡದ ನಡುವೆ ಗಾಂಜಾ ಬೆಳೆದಿದ್ದವನಿಗೆ ಸಿಕ್ತು ಜಾಮೀನು!
ಬೆಂಗಳೂರು, ಮೇ 23: ಕಾಫಿ ತೋಟದ ಮಧ್ಯೆ 8 ಗಾಂಜಾ ಗಿಡ ಬೆಳೆದಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಚಿಕ್ಕಮಗಳೂರಿನ ವ್ಯಕ್ತಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹಾಗಾಗಿ, ಆತ ಜೈಲಿನಿಂದ ಹೊರಗೆ ಬರುವಂತಾಗಿದೆ.
55 ವರ್ಷದ ಪ್ರಕರಣದ ಆರೋಪಿ ಕೆ. ಎಂ. ರಾಜೇಂದ್ರ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ಜಿ. ಉಮಾ ಅವರಿದ್ದ ರಜಾಕಾಲದ ಪೀಠ ಈ ಆದೇಶ ಮಾಡಿದೆ. ಆರೋಪಿಯು 2 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ (ಶ್ಯೂರಿಟಿ) ನೀಡಬೇಕು. ಇದೇ ಮಾದರಿಯ ಅಪರಾಧ ಕೃತ್ಯದಲ್ಲಿ ಭಾಗಿಯಾಗಬಾರದು ಎಂದು ಹೈಕೋರ್ಟ್ ಷರತ್ತು ವಿಧಿಸಿದೆ.

ಅರ್ಜಿದಾರನ ವಿರುದ್ಧದ ಆರೋಪ ಗಂಭೀರ ಸ್ವರೂಪದಿಂದ ಕೂಡಿದೆ. ತೋಟದಲ್ಲಿ 8 ಗಾಂಜಾಗಿಡ ಬೆಳೆದಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡು ಸ್ಥಳವನ್ನು ಮಹಜರು ಮಾಡಿದ್ದಾರೆ. ಆದಾಗ್ಯೂ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಮುಂದಿನ ವಿಚಾರಣೆಗೆ ಅರ್ಜಿದಾರ ಅಗತ್ಯವಿಲ್ಲವಾಗಿದೆ. ಹಾಗಾಗಿ, ಆತನಿಗೆ ಜಾಮೀನು ನೀಡಲಾಗುತ್ತಿದೆ ಎಂದು ಆದೇಶದಲ್ಲಿ ನ್ಯಾಯಪೀಠ ಹೇಳಿದೆ.
ಅಲ್ಲದೆ, ಆರೋಪಿ ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದತಿಗೆ ತನಿಖಾಧಿಕಾರಿಗಳು ವಿಚಾರಣಾ ನ್ಯಾಯಾಲಯವನ್ನು ಕೋರಬಹುದು. ಇನ್ನೂ ಆರೋಪಿ ಒದಗಿಸುವ ಶ್ಯೂರಿಟಿಗಳ ವಿಳಾಸ ಮತ್ತು ದಾಖಲೆಗಳ ನೈಜತೆಯನ್ನು ಪರಿಶೀಲಿಸಲು ವಿಚಾರಣಾ ನ್ಯಾಯಾಲಯ ತನಿಖಾಧಿಕಾರಿಗೆ ನಿರ್ದೇಶಿಸಬಹುದು.
ಒಂದೊಮ್ಮೆ ಅಂತಹ ಸೂಚನೆಯನ್ನು ವಿಚಾರಣಾ ನ್ಯಾಯಾಲಯ ನೀಡಿದರೆ, ತನಿಖಾಧಿಕಾರಿಯು 5 ದಿನದಲ್ಲಿ ವರದಿ ಸಲ್ಲಿಸಬೇಕು. ಆ ವರದಿ ವಿಚಾರಣಾ ನ್ಯಾಯಾಲಯಕ್ಕೆ ತೃಪ್ತಿದಾಯಕವಾದಲ್ಲಿ ಅರ್ಜಿದಾರನನ್ನು ಜಾಮೀನು ಮೇಲೆ ಬಿಡುಗಡೆ ಮಾಡಬಹುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಪ್ರಕರಣದ ಹಿನ್ನೆಲೆ: ಖಚಿತ ಮಾಹಿತಿ ಮೇರೆಗೆ ಚಿಕ್ಕಮಗಳೂರು ಸಿಇಎನ್ ಠಾಣಾ ಪೊಲೀಸರು, 2024ರ ಮಾ.6ರಂದು ಬೆಳಗ್ಗೆ 8 ಗಂಟೆಗೆ ಆವತಿ ಹೋಬಳಿಯ ಕೆಳಹೋಲಗದ್ದೆ ಗ್ರಾಮದ ನಿವಾಸಿ ರಾಜೇಂದ್ರ ಎಂಬಾತನ ಕಾಫಿ ತೋಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಕಾಫಿ ಗಿಡಗಳ ಮಧ್ಯೆ ಮಾರಾಟ ಮಾಡುವ ಉದ್ದೇಶದಿಂದ 8 ಗಾಂಜಾ ಗಿಡ ಬೆಳೆದಿರುವುದು ಕಂಡುಬಂದಿತ್ತು. ಅದರಂತೆ 1 ಸಾವಿರ ರೂ. ಬೆಲೆಬಾಳುವ 100 ಗ್ರಾಂ ನಷ್ಟು ಗಾಂಜಾ ಗಿಡ, ಅದರ ಹಸಿ ಬೇರು, ಕಾಂಡಾ, ಕಡ್ಡಿ ಮತ್ತು ಸೊಪ್ಪು, ಹೂವು ಮೊಗ್ಗು ಅನ್ನು ವಶಪಡಿಸಿಕೊಂಡಿದ್ದರು.
ಬಳಿಕ ಪೊಲೀಸರು ರಾಜೇಂದ್ರ ಅವರನ್ನು ಬಂಧಿಸಿದ್ದರು. ಗಾಂಜಾ ಗಿಡ ಬೆಳೆಸಿಕೊಡುವಂತೆ ಹೇಳಿದ್ದ ಅದೇ ಗ್ರಾಮದ ಲಕ್ಷ್ಮಣ್ ಎಂಬಾತನನ್ನು ಎರಡನೇ ಆರೋಪಿಯನ್ನಾಗಿಸಿದ್ದರು. ಜಾಮೀನು ಕೋರಿ ರಾಜೇಂದ್ರ ಹೈಕೋರ್ಟ್ ಮೊರೆ ಹೋಗಿದ್ದರು.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications