Ramesh Jarakiholi: ರಮೇಶ್ ಜಾರಕಿಹೊಳಿಯನ್ನು ಅರೆಸ್ಟ್ ಮಾಡದಂತೆ ಹೈಕೋರ್ಟ್ ಸೂಚನೆ
ಬೆಂಗಳೂರು, ಮಾರ್ಚ್ 15: ಅಪೆಕ್ಸ್ ಬ್ಯಾಂಕ್ಗೆ ಸಾಲ ಪಾವತಿಸದೆ ಸಹಕಾರಿ ಬ್ಯಾಂಕ್ ಗೆ ವಂಚನೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ಸೂಚಿಸಿದೆ.
ಲೋಕಸಭಾ ಚುನಾವಣೆಯ ತಯಾರಿ ಒಂದು ಕಡೆಯಾದ್ರೆ, ಇತ್ತ ತಮ್ಮ ತಮ್ಮ ವಿರುದ್ಧ ದಾಖಲಾಗಿರುವ ಸಹಕಾರಿ ಬ್ಯಾಂಕ್ಗೆ ವಂಚನೆ ಪ್ರಕರಣವನ್ನು ರದ್ದುಕೋರಿ ಮಾಜಿ ಸಚಿವ ಹಾಗೂ ಗೋಕಾಕ್ ಸಾಹುಕಾರ್ ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಈ ವೇಳೆ ಸರ್ಕಾರದ ಪರ ಎಸ್ಪಿಪಿ ಬ್ಯಾತ ಎನ್ ಜಗದೀಶ್ ವಾದ ಮಾಡಿ ಸಿಐಡಿ ನೋಟಿಸ್ ನೀಡಿದರೂ ತನಿಖೆಗೆ ಹಾಜರಾಗಿಲ್ಲ ಎಂದು ಹೈಕೋರ್ಟ್ಗೆ ತಿಳಿಸಿದರು.

ಸಿಐಡಿ ನೋಟಿಸ್ ನೀಡಿದರೂ ರಮೇಶ್ ಜಾರಕಿಹೊಳಿ ತನಿಖೆಗೆ ಹಾಜರಾಗಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದರು. ಈ ವೇಳೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಇನ್ನು ವಿಚಾರಣೆಗೆ ಹಾಜರಾದರೆ ರಮೇಶ್ ಜಾರಕಿಹೊಳಿಯನ್ನು ಬಂಧಿಸದಂತೆ ಸಿಐಡಿಗೆ ಸೂಚಿಸಿದೆ. ಇದರಿಂದ ರಮೇಶ್ ಜಾರಕಿಹೊಳಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ ಅಪೆಕ್ಸ್ ಬ್ಯಾಂಕ್ನಿಂದ 232 ಕೋಟಿ 88 ಲಕ್ಷರೂಪಾಯಿ ಸಾಲ ಪಡೆದಿದ್ದರು. ಇದು ರಮೇಶ್ ಜಾರಕಿಹೊಳಿ ಒಡೆತನದ್ದು, ಆದರೆ, ಸಾಲವನ್ನು ವಾಪಸ್ ಕಟ್ಟಿಲ್ಲ. ಹೀಗಾಗಿ ಸಾಲ ಮರುಪಾವತಿಸದೇ ಬ್ಯಾಂಕ್ಗೆ ವಂಚನೆ ಮಾಡಿದ್ದಾರೆ ಎಂದು ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರು.
ಈ ದೂರು ರದ್ದುಗೊಳಿಸುವಂತೆ ರಮೇಶ್ ಜಾರಕಿಹೊಳಿ ಹೈಕೋರ್ಟ್ ಮೆಟ್ಟಿಲೇರಿದ್ದು, ಕಂಪನಿಯ ಹುದ್ದೆಗಳಿಗೆ ರಾಜಿನಾಮೆ ನೀಡಿ ಹೊಸಬರ ನೇಮಕವಾಗಿದೆ. ಎನ್ಸಿಎಲ್ಟಿಯಲ್ಲಿ ವಿಚಾರಣೆ ಇರುವಾಗ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರ್ಟ್ಗೆ ಮನವಿ ಮಾಡಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications