ಕೊವಿಡ್ 19 ಭೀತಿ ಹೆಚ್ಚಳ: 9 ಜಿಲ್ಲೆಗಳ ಕೋರ್ಟ್ ಪ್ರವೇಶ ನಿರ್ಬಂಧ
ಬೆಂಗಳೂರು, ಏಪ್ರಿಲ್ 16: ಕರ್ನಾಟಕದಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 9 ಜಿಲ್ಲೆಗಳ ನ್ಯಾಯಾಲಯಗಳಲ್ಲಿ ತುರ್ತು ಕ್ರಮ ಕೈಗೊಳ್ಳಲು ಹೈಕೋರ್ಟ್ ಸೂಚಿಸಿದೆ.
ಖುದ್ದು ಹಾಜರಾತಿಗೆ ಇಂದಿನಿಂದ ಅನಿರ್ದಿಷ್ಟಾವಧಿಗೆ ನಿಷೇಧ ವಿಧಿಸಲಾಗಿದೆ. ಹೈಕೋರ್ಟ್ನ ಬೆಂಗಳೂರಿನ ಪ್ರಧಾನ ಪೀಠ ಮತ್ತು ಕಲಬುರ್ಗಿ ಹಾಗೂ ಧಾರವಾಡದ ಪೀಠಗಳಿಗೆ ದಾವೆದಾರರು ಮತ್ತು ಪಕ್ಷಕಾರರ ಭೇಟಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಜೊತೆಗೆ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆಗಳಲ್ಲಿನ ಸಾಕ್ಷ್ಯ ದಾಖಲೀಕರಣವನ್ನು ನಿರ್ಬಂಧಿಸಲಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮೀಣ, ಮೈಸೂರು, ಹಾಸನ, ತುಮಕೂರು, ಬಳ್ಳಾರಿ, ಕಲಬುರ್ಗಿ, ಬೀದರ್ ಮತ್ತು ದಕ್ಷಿಣ ಕನ್ನಡ ಸೇರಿದಂತೆ ಒಂಭತ್ತು ಜಿಲ್ಲೆಗಳಲ್ಲಿ ದಾವೆದಾರರು ನ್ಯಾಯಾಲಯಕ್ಕೆ ಬರುವುದಕ್ಕೂ ಶುಕ್ರವಾರ(ಏಪ್ರಿಲ್ 16)ದಿಂದ ನಿಷೇಧ ಹೇರಲಾಗಿದೆ.

ನ್ಯಾಯಾಲಯದಿಂದ ವಿಶೇಷ ಆದೇಶಗಳು ಇದ್ದರೆ ಮಾತ್ರ ದಾವೆದಾರರು ನ್ಯಾಯಾಲಯಕ್ಕೆ ಆಗಮಿಸಬಹುದಾಗಿದೆ. ಇಲ್ಲವಾದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತ್ರ ಕಲಾಪದಲ್ಲಿ ಭಾಗವಹಿಸಬೇಕಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಆದೇಶಿಸಿದ್ದಾರೆ.
ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ಕಾಲಮಿತಿ ನಿಗದಿಗೊಳಿಸಿದ ಪ್ರಕರಣಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಕ್ಷ್ಯ ದಾಖಲೆಗೆ ನಿಷೇಧ ವಿಧಿಸಲಾಗಿದೆ. ಕಾಲಮಿತಿ ನಿಗದಿಗೊಳಿಸಿದ ಪ್ರಕರಣಗಳು ಮತ್ತು ಕ್ರಿಮಿನಲ್ ಪ್ರಕರಣಗಳಲ್ಲಿ ಬಹುತೇಕ ಸಾಕ್ಷ್ಯ ದಾಖಲೆ ಪೂರ್ಣಗೊಂಡಿದ್ದರೆ ಅವುಗಳನ್ನು ಮಾತ್ರ ಮುಂದುವರೆಸಬಹುದಾಗಿದೆ.
Recommended Video
ಪೊಲೀಸ್ ಅಧಿಕಾರಿಗಳು ಮತ್ತು ಕಸ್ಟಡಿಯಲ್ಲಿರುವ ಆರೋಪಿಗಳನ್ನು ಹೊರತುಪಡಿಸಿ ಉಳಿದ ಯಾರೂ ನ್ಯಾಯಾಲಯದ ಆವರಣ ಪ್ರವೇಶಿಸುವಂತಿಲ್ಲ. ಪಕ್ಷಕಾರರು ಮತ್ತು ದೂರುದಾರರು ನ್ಯಾಯಾಲಯದ ಕೊಠಡಿಗೆ ಬರಬೇಕಿದ್ದರೆ ಆ ಸಂಬಂಧ ನಿಗದಿತ ನ್ಯಾಯಾಲಯಗಳು ವಿಶೇಷ ಆದೇಶ ಹೊರಡಿಸಬೇಕು ಎಂದು ಸೂಚಿಸಿದ್ದಾರೆ. (ಮಾಹಿತಿ ಕೃಪೆ: ಬಾರ್ ಅಂಡ್ ಬೆಂಚ್)
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications