ಡೊನೇಷನ್ ಗೇಟ್: ಪತ್ರಕರ್ತ ಹಮೀದ್ ಪಾಳ್ಯ ಪಿಐಎಲ್ ತಿರಸ್ಕರಿಸಿದ ಹೈಕೋರ್ಟ್
ಹೈಕೋರ್ಟ್ ನಿರ್ದೇಶನದ ಮೇಲೆ ಎಸ್ಐಟಿ ರಚಿಸಿ ‘ಡೊನೇಷನ್ ಗೇಟ್’ ಹಗರಣದ ತನಿಖೆ ನಡೆಸುವಂತೆ ಕೋರಿ ಪತ್ರಕರ್ತ ಹಮೀದ್ ಪಾಳ್ಯ ಸಲ್ಲಿಸಿದ್ದ ಪಿಐಎಲ್ ಅನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ.
ಬೆಂಗಳೂರು, ಮಾರ್ಚ್ 6: ಹೈಕೋರ್ಟ್ ನಿರ್ದೇಶನದ ಮೇಲೆ ಎಸ್ಐಟಿ ರಚಿಸಿ 'ಡೊನೇಷನ್ ಗೇಟ್' ಹಗರಣದ ತನಿಖೆ ನಡೆಸುವಂತೆ ಕೋರಿ ಪತ್ರಕರ್ತ ಹಮೀದ್ ಪಾಳ್ಯ ಸಲ್ಲಿಸಿದ್ದ ಪಿಐಎಲ್ ಅನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ.
'ಕಾಂಗ್ರೆಸ್ ಹೈಕಮಾಂಡಿಗೆ ಕಪ್ಪ ನೀಡಿದ ವಿವರಗಳು ಶಾಸಕ ಗೋವಿಂದರಾಜು ಡೈರಿಯಲ್ಲಿ ಉಲ್ಲೇಖವಾಗಿವೆ,' ಎಂಬ ಪ್ರಕರಣದಲ್ಲಿ ವಿಶೇಷ ತನಿಖಾ ದಳದಿಂದ ತನಿಖೆ ನಡೆಸುವಂತೆ ಕೋರಿ ಹಮೀದ್ ಪಾಳ್ಯ ಹೈಕೋರ್ಟಿಗೆ ಪಿಐಎಲ್ ಸಲ್ಲಿಸಿದ್ದರು.[ಡೈರಿ 2, ಕೇಸು 7; ಇದು ಬಿಜೆಪಿ-ಕಾಂಗ್ರೆಸ್ 'ಡೊನೇಷನ್ ಗೇಟ್' ಹೈಡ್ರಾಮಾ]

"ಡೈರಿ ತನಿಖೆಯನ್ನು ಎಸಿಬಿ, ಲೋಕಾಯುಕ್ತ ಮೊದಲಾದ ಸಂಸ್ಥೆಗಳಿಂದ ಮಾಡಲು ಬಿಜೆಪಿ ಆಕ್ಷೇಪ ವ್ಯಕ್ತಪಡಿಸುತ್ತದೆ. ಇದೆಲ್ಲಾ ರಾಜ್ಯ ಸರಕಾರದ ಅಧೀನದಲ್ಲಿ ಬರುತ್ತದೆ ಎಂದು ಅದು ಹೇಳುತ್ತವೆ. ಇದೇ ವೇಳೆ ಇಡಿ, ಐಟಿ, ಸಿಬಿಐ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಇದೆಲ್ಲಾ ಕೇಂದ್ರ ಸರಕಾರದ ಅಧೀನದಲ್ಲಿ ಬರುತ್ತವೆ ಎಂದು ಕಾಂಗ್ರೆಸ್ ಹೇಳುತ್ತದೆ. ಅದಕ್ಕಾಗಿ ನಾನು ಹೈಕೋರ್ಟಿಗೆ 'ಎಸ್ಐಟಿ' ತನಿಖೆಗೆ ಕೋರಿ ಪಿಐಎಲ್ ಸಲ್ಲಿಸಿದ್ದೆ," ಎನ್ನುತ್ತಾರೆ ರಾಜ್ ನ್ಯೂಸ್ ಸಂಪಾದಕ ಹಮೀದ್ ಪಾಳ್ಯ.
"ನಾನೂ ಪತ್ರಕರ್ತನಾಗಿ, ನಾವೆಲ್ಲಾ ದಿನಾ ಸುದ್ದಿ ಮಾಡುತ್ತೇವೆ ಎಲ್ಲ ಸರಿ. ಆದರೆ ಅಷ್ಟು ಹಣ ಎಲ್ಲಿಂದ ಬಂತು ಎಂಬುದು ತನಿಖೆಯಾಗಬೇಕಾಗಲ್ವಾ?," ಎಂದು ಪ್ರಶ್ನಿಸುತ್ತಾರೆ ಅವರು.[ಡೊನೇಷನ್ ಗೇಟ್: ದಿನೇಶ್ ಗುಂಡೂರಾವ್ ವಿರುದ್ಧ ಎಫ್ಐಆರ್]
ಈ ದೇಶದಲ್ಲಿ ಕೋರ್ಟ್ ನಿರ್ದೇಶನದ ಮೇಲೆ ತನಿಖೆಯಾದ 2ಜಿ ಹಗರಣ, ಕಾಮನ್ ವೆಲ್ತ್ ಹಗರಣ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ನ್ಯಾಯ ಸಿಕ್ಕಿದೆ. ಈ ಕಾರಣಕ್ಕೆ ನಾನು ಕೋರ್ಟ್ ನಿರ್ದೇಶನದ ಮೇಲೆ ತನಿಖೆಗೆ ಕೇಳಿದ್ದೆ ಎನ್ನುತ್ತಾರೆ ಹಮೀದ್ ಪಾಳ್ಯ.
ಆದರೆ ಹಮೀದ್ ಪಾಳ್ಯ ಅರ್ಜಿಗೆ ಎಎಜಿ ಪೊನ್ನಣ್ಣ ಕೋರ್ಟಿನಲ್ಲಿ ಆಕ್ಷೇಪಿಸಿದ್ದರು. "ಸಹಾರಾ ಡೈರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರೇ ಇತ್ತು. ಹೀಗಿದ್ದೂ ತನಿಖೆಗೆ ಸುಪ್ರಿಂ ಕೋರ್ಟ್ ಒಪ್ಪಿಕೊಂಡಿಲ್ಲ. ಹಾಗಾಗಿ ಎಸ್ಐಟಿ ತನಿಖೆಗೆ ಆದೇಶ ನೀಡಬಾರದು," ಎಂದು ವಾದಿಸಿದರು.
ಸಹಾರಾ ಡೈರಿ ಪ್ರಕರಣವನ್ನು ಉಲ್ಲೇಖಿಸಿ ಪೊನ್ನಣ್ಣ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಪಿಐಎಲ್ ನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದೀಗ "ಈ ಬಗ್ಗೆ ಸುಪ್ರಿಂ ಕೋರ್ಟಿಗೆ ಹೋಗಬೇಕಾ, ಬೇಡ್ವಾ ಎಂದು ಚರ್ಚೆ ಮಾಡಿ ನಿರ್ಧರಿಸುತ್ತೇನೆ," ಎಂದು ಹಮೀದ್ ಪಾಳ್ಯ ಹೇಳಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications