ಕಾರ್ತಿಕ್ ಗೌಡ ಪ್ರಕರಣ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು, ಜ.8 : ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ಅವರು ನಟಿ ಮೈತ್ರಿಯಾ ಗೌಡ ತಮ್ಮ ವಿರುದ್ಧ ನೀಡಿರುವ ಅತ್ಯಾಚಾರದ ದೂರು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ.
ಬುಧವಾರ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ನ್ಯಾಯಪೀಠ ಕಾರ್ತಿಕ್ ಗೌಡ ಅವರು ಸಲ್ಲಿಸಿರುವ ಅರ್ಜಿಯ ಅಂತಿಮ ವಿಚಾರಣೆಯನ್ನು ನಡೆಸಿತು ಮತ್ತು ತೀರ್ಪನ್ನು ಕಾಯ್ದಿರಿಸಿತು. ಕಾರ್ತಿಕ್ ಗೌಡ ಪರವಾಗಿ ವಾದ ಮಂಡನೆ ಮಾಡಿದ ಕೆ.ಎಂ.ನಟರಾಜ್ ಅವರು ದೂರಿನಲ್ಲಿ ಯಾವುದೇ ಹುರುಳಿಲ್ಲ. ಅವರು ನೀಡಿರುವ ದೂರಿನಲ್ಲೇ ದ್ವಂದ್ವ ನಿಲುವಿದೆ. ಇದು ಸುಳ್ಳು ದೂರು ಆಗಿದ್ದು, ರದ್ದುಗೊಳಿಸಬೇಕೆಂದು ಮನವಿ ಮಾಡಿದರು.

ಕಾರ್ತಿಕ್ ಗೌಡ ಅವರ ತಂದೆ ಪ್ರಭಾವಿ ರಾಜಕಾರಣಿ ಹಾಗೂ ಕೇಂದ್ರ ಸಚಿವರಾಗಿರುವುದರಿಂದ ಅವರ ಹೆಸರಿಗೆ ಮಸಿ ಬಳಿಯುವ ಉದ್ದೇಶದಿಂದ ಈ ರೀತಿಯ ದೂರು ನೀಡಲಾಗಿದೆ. ದೂರಿನಲ್ಲಿ ಆರೋಪಿಸಿದಂತೆ ಅತ್ಯಾಚಾರ ನಡೆದಿಲ್ಲ ದೂರನ್ನು ರದ್ದುಗೊಳಿಸಿ ಎಂದು ವಾದ ಮಂಡಿಸಿದರು. [ಗೌಡರ ಪದಚ್ಯುತಿಗೊಳಿಸಲು ರಾಷ್ಟ್ರಪತಿಗೆ ಮೈತ್ರಿಯಾ ಪತ್ರ]
ನಟಿ ಮೈತ್ರಿಯಾ ಗೌಡ ಮತ್ತು ಅರ್ಜಿದಾರ ಕಾರ್ತಿಕ್ ಗೌಡ ಪರಸ್ಪರ ಪ್ರೀತಿಸುತ್ತಿದ್ದರು. ಅರ್ಜಿದಾರರು ತಮ್ಮ ಕಕ್ಷಿದಾರರನ್ನು ಪ್ರೀತಿಸುತ್ತಿದ್ದರು, ಅವರು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ವಾದ ಮಂಡಿಸಿದ ಮೈತ್ರಿಯಾ ಗೌಡ ಪರ ವಕೀಲರು, ಅರ್ಜಿದಾರರೊಂದಿಗೆ ಗಂಟೆಗಟ್ಟಲೆ ದೂರವಾಣಿಯಲ್ಲಿ ಮಾತನಾಡಿರುವುದಕ್ಕೆ ದಾಖಲೆ ಇದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. [ಮೈತ್ರಿಯಾ ಗೌಡ- ಕಾರ್ತಿಕ್ ಮದುವೆ ಆಗಿಲ್ಲ: ಕೋರ್ಟ್]
ಅಂದಹಾಗೆ ಕಾರ್ತಿಕ್ ಗೌಡ ಅವರಿಗೆ ಕೌಟುಂಬಿಕ ಕೋರ್ಟ್ನಿಂದ ಸಿಹಿ ಸುದ್ದಿ ಸಿಕ್ಕಿದ್ದು, ಕಾರ್ತಿಕ್ ಗೌಡ ನನ್ನ ಗಂಡ ಎಂದು ಹೇಳಿ ಮೈತ್ರಿಯಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಕೆಲವು ದಿನಗಳ ಹಿಂದೆ ಕೋರ್ಟ್ ತಿರಸ್ಕರಿಸಿತ್ತು. 'ಕಾರ್ತಿಕ್ ಕಾನೂನುಬದ್ಧವಾಗಿ ನನ್ನ ಪತಿಯಾಗಿದ್ದಾರೆ. ಹಿಂದೂ ಧರ್ಮದ ಪ್ರಕಾರ ನಮ್ಮಿಬ್ಬರ ಮದುವೆಯಾಗಿದೆ. ಕಾರ್ತಿಕ್ ಅವರು ಬೇರೆ ಯಾವುದೇ ಯುವತಿ ಜೊತೆ ಮದುವೆಯಾಗುವುದು ಕಾನೂನು ಉಲ್ಲಂಘನೆಯಾಗುತ್ತದೆ ಎಂದು ಮೈತ್ರಿಯಾ ಗೌಡ ಹಾಕಿದ್ದ ಅರ್ಜಿ ವಜಾಗೊಂಡಿದೆ.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ












Click it and Unblock the Notifications