ಮೈಸೂರು ವಿವಿ ಕುಲಪತಿ ನೇಮಕಕ್ಕೆ ಹೈಕೋರ್ಟ್ ತಡೆ!
ಬೆಂಗಳೂರು, ಡಿಸೆಂಬರ್ 23; ಮೈಸೂರು ವಿಶ್ವವಿದ್ಯಾಲಯ ಕುಲಪತಿ ನೇಮಕಾತಿ ಪ್ರಕ್ರಿಯೆಗೆ ತಡೆ ಬಿದ್ದಿದೆ. ಹಾಗಾಗಿ ಸದ್ಯಕ್ಕೆ ಹೊಸ ಕುಲಪತಿ ನೇಮಕವಾಗುವ ಸಾಧ್ಯತೆ ಇಲ್ಲ. ವಿವಾದ ಇತ್ಯರ್ಥವಾಗುವವರೆಗೆ ಹೊಸ ಕುಲಪತಿ ನೇಮಕ ಮಾಡಲಾಗದು.
ಏಕೆಂದರೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಸದ್ಯಕ್ಕೆ ಅದು ತೆರವಾಗುವವರೆಗೆ ಸರ್ಕಾರ ನೇಮಕ ಪ್ರಕ್ರಿಯೆ ನಡೆಸಲಾಗುವುದಿಲ್ಲ.
ಮೈಸೂರು ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿ ಪ್ರೊ. ಎಚ್. ರಾಜಶೇಖರ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಎಸ್. ಹೇಮಲೇಖ ಅವರಿದ್ದ ನ್ಯಾಯಪೀಠ, ತಡೆ ನೀಡಿ, ರಾಜ್ಯ ಸರ್ಕಾರ, ಉನ್ನತ ಶಿಕ್ಷಣ ಇಲಾಖೆಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ನಮ್ಮ ಕಕ್ಷಿದಾರರಾದ ಪ್ರೊ. ಎಚ್. ರಾಜಶೇಖರ್ ಅವರು ಪ್ರಸ್ತುತ ಪ್ರಭಾರಿ ಕುಲಪತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜತೆಗೆ, ಕುಲಪತಿಯಾಗುವುದಕ್ಕೆ ಅಗತ್ಯವಿರುವ ಎಲ್ಲ ಅರ್ಹತೆಗಳನ್ನು ಹೊಂದಿದ್ದಾರೆ.
ಆದರೆ, ವಿಶ್ವವಿದ್ಯಾಯಕ್ಕೆ ಕುಲಪತಿ ನೇಮಕ್ಕೆ ರಚನೆಯಾಗಿರುವ ಶೋಧನಾ ಸಮಿತಿಗೆ ಅರ್ಜಿ ಸಲ್ಲಿಸಿದ್ದರೂ, ಅವರನ್ನು ಹೊರತು ಪಡಿಸಿ ಇತರೆ ಮೂವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಜತೆಗೆ, ಅರ್ಜಿದಾರರ ವಿರುದ್ಧ ಯಾವುದೇ ಪ್ರಕರಣ ವಿಚಾರಣೆಗೆ ಸೂಚನೆ ನೀಡಿಲ್ಲ. ಯಾವುದೇ ಪ್ರಕರಣ ಬಾಕಿಯಿಲ್ಲ. ಹೀಗಾಗಿ ನೇಮಕ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದರು.
ಪ್ರಕರಣದ ಹಿನ್ನೆಲೆ: ತೆರವಾಗಿದ್ದ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ನೇಮಕ್ಕಾಗಿ ಬೆಂಗಳೂರಿನ ಸಿಎಂಆರ್ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಎಂ. ಎಸ್. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಶೋಧನಾ ಸಮಿತಿ ರಚನೆ ಮಾಡಲಾಗಿತ್ತು ಈ ಸಮಿತಿ ವಿವಿ ಕುಲಪತಿ ನೇಮಕ್ಕೆ ಅರ್ಜಿಗಳನ್ನು ಅಹ್ವಾನಿಸಿದ್ದು ಒಟ್ಟು 71 ಅರ್ಜಿಗಳು ಸಲ್ಲಿಕೆಯಾಗಿದ್ದವು.
ಇದಕ್ಕೆ ಮೈಸೂರು ವಿವಿ ಪ್ರಭಾರಿ ಕುಲಪತಿ ಪ್ರೊ. ಎಚ್. ರಾಜಶೇಖರ್(ಅರ್ಜಿದಾರರು) ಅವರೂ ಅರ್ಜಿ ಸಲ್ಲಿಸಿದ್ದರು. ಮಂಗಳವಾರ ಸಭೆ ನಡೆಸಿದ್ದ ಶೋಧನಾ ಸಮಿತಿ ಸಭೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಡಿ. ಎಸ್. ಗುರು, ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಜಿ. ವೆಂಕಟೇಶ್ ಕುಮಾರ್, ಬೆಂಗಳೂರು ವಿಶ್ವವಿದ್ಯಾನಿಲಯದ ಡಾ. ಶರತ್ ಅನಂತಮೂರ್ತಿ ಅವರ ಹೆಸರುಗಳನ್ನು ಶಿಪಾರಸು ಮಾಡಿತ್ತು. ಇನ್ನುಳಿದ ಅರ್ಜಿಗಳನ್ನು ತಿರಸ್ಕರಿಸಿತ್ತು.
ಜತೆಗೆ, ಅವರ ವಿರುದ್ಧ ಕೆಲ ವಿಚಾರಣೆಗಳು ಬಾಕಿ ಇವೆ. ಹೀಗಾಗಿ ಯೂಜಿಸಿ ನಿಯಮಗಳ ಪ್ರಕಾರ ಅವನ್ನು ಕುಲಪತಿಯನ್ನಾಗಿ ನೇಮಕ ಮಾಡುವುದಕ್ಕೆ ಅರ್ಹರಲ್ಲ ಎಂದು ತಿಳಿಸಿ ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ. ರಾಜಶೇಖರ್ ಅವರ ಅರ್ಜಿಯನ್ನೂ ತಿರಸ್ಕರಿಸಲಾಗಿತ್ತು.
ಕುಲಪತಿಯಾಗುವುದಕ್ಕೆ ಶಿಫಾರಸು ಮಾಡಿರುವ ಎಲ್ಲರಂತೆ ತಾನೂ ಅರ್ಹನಾಗಿದ್ದು, ತಮ್ಮ ಹೆಸರನ್ನು ತಿರಸ್ಕರಿಸಲಾಗಿದೆ ಎಂದು ಆರೋಪಿಸಿ ಹೈಕೋರ್ಟ್ನಲ್ಲಿ ಅವರು ಅರ್ಜಿ ಸಲ್ಲಿಸಿದ್ದರು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications