Government employee: ಪಿಂಚಣಿದಾರರ ಬಗ್ಗೆ ಸರ್ಕಾರಕ್ಕೆ ಸಲಹೆ
ಬೆಂಗಳೂರು, ಫೆಬ್ರವರಿ 15: ಹಲವು ವರ್ಷಗಳ ಕಾಲ ಸರ್ಕಾರದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರನ್ನು ಸರ್ಕಾರ ಸಹಾನುಭೂತಿಯಿಂದ ನಡೆಸಿಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಕಿವಿ ಮಾತು ಹೇಳಿದೆ.
ಅಲ್ಲದೆ, ಕನ್ನಡ ಮಾಧ್ಯಮದಲ್ಲಿ ಎಸ್ಎಸ್ಎಲ್ಸಿವರೆಗೂ ಅಧ್ಯಯನ ಮಾಡಿದ ಸರ್ಕಾರಿ ನೌಕರರಿಗೆ ನೀಡಬೇಕಾದ ಒಂದು ಅವಧಿಯ ವೇತನ ಹೆಚ್ಚಳ (ಇಂಕ್ರಿಮೆಂಟ್)ಅನ್ನು ನಿರಾಕರಿಸಿದ್ದ ಸರ್ಕಾರದ ಕ್ರಮಕ್ಕೆ ನ್ಯಾಯಾಲಯ ತೀವ್ರ ಬೇಸರ ಹೊರಹಾಕಿದೆ. ಜತೆಗೆ ಪಿಂಚಣಿದಾರರನ್ನು ರಾಜ್ಯ ಸರ್ಕಾರ ಸಹಾನುಭೂತಿ ಮತ್ತು ನೋವಿಲ್ಲದಂತೆ ನಡೆಸಿಕೊಳ್ಳಬೇಕಾಗುತ್ತದೆ ಎಂದು ತಾಕೀತು ಮಾಡಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಿವೃತ್ತ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿರುವ ಸೀತಾಲಕ್ಷ್ಮಿ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜಿ. ಬಸವರಾಜ ಅವರಿದ್ದ ವಿಭಾಗೀಯ ಪೀಠ, 2018ರ ಫೆಬ್ರವರಿಯಿಂದ ಜಾರಿಗೆ ಬರುವಂತೆ ಅರ್ಜಿದಾರರಿಗೆ ಮುಂದಿನ ಮೂರು ತಿಂಗಳ ಒಳಗಾಗಿ ಒಂದು ಬಾರಿ ವೇತನ ಹೆಚ್ಚಳ (ಇಕ್ರಿಮೆಂಟ್) ಮಂಜೂರು ಮಾಡುವಂತೆ ಮತ್ತು ಹೆಚ್ಚಳದ ಬಾಕಿ ಮೊತ್ತವನ್ನು ಪಾವತಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.

ಈ ಆದೇಶ ಜಾರಿಯಲ್ಲಿ ವಿಫಲವಾದಲ್ಲಿ, ವಿಳಂಬವಾದ ಪ್ರತಿ ತಿಂಗಳಿಗೆ ಶೇ.2 ದರದಲ್ಲಿ ಬಡ್ಡಿ ಸೇರಿಸಿ ಪಾವತಿಸಬೇಕು. ಆ ಬಡ್ಡಿ ಮೊತ್ತವನ್ನು ತಕ್ಷಣಕ್ಕೆ ಸರ್ಕಾರ ಪಾವತಿ ಮಾಡಬೇಕು. ಬಳಿಕ ಇದಕ್ಕೆ ಕಾರಣವಾದ ಅಧಿಕಾರಿಯಿಂದ ಸರ್ಕಾರ ವಸೂಲಿ ಮಾಡಿಕೊಳ್ಳಬೇಕು ಎಂದು ನ್ಯಾಯಪೀಠ ಹೇಳಿದೆ.
ಅರ್ಜಿದಾರರು 2008ರ ಸೆಪ್ಟೆಂಬರ್ 24 ರಿಂದ 2019ರ ಅಕ್ಟೋಬರ್ 31 ರವರೆಗೆ ಕಳಂಕ ರಹಿತ ಸೇವಾ ಉದ್ಯೋಗಿಯಾಗಿ ಕೆಲಸ ಮಾಡಿದ್ದಾರೆ. ಅವರು ಅದನ್ನು ಪ್ರಾಥಮಿಕ ಶಾಲಾ ಶಿಕ್ಷಕಿ ಎಂಬ ಅತ್ಯಂತ ವಿನಮ್ರ ಹುದ್ದೆಯಲ್ಲಿ ಸೇವೆ ಮಾಡಿದ್ದಾರೆ. ಬಹುಶಃ ಅವರು ಸರ್ಕಾರಿ ಶಾಲೆಯಲ್ಲಿ ತಾಯಿಯಾಗಿ ಅನೇಕ ಮಕ್ಕಳ ಭವಿಷ್ಯ ರೂಪಿಸಿದ್ದಾರೆ. ಅಲ್ಲದೆ, ಜೀವನದ ಇಳಿ ಸಂಜೆ ವಯಸ್ಸಿನಲ್ಲಿ ಹಲವು ತೊಂದರೆಗಳನ್ನು ಉಂಟುಮಾಡುತ್ತದೆ, ಇದನ್ನು ಹಣದ ಸಹಾಯದಿಂದ ತಗ್ಗಿಸಬಹುದು. ಯಾವುದೇ ಪರಿಹಾರವನ್ನು ಸಂಪೂರ್ಣವಾಗಿ ನಿರಾಕರಿಸುವುದು ಪಿಂಚಣಿದಾರರಿಗೆ ದೊಡ್ಡ ಅನ್ಯಾಯವಾಗಲಿದೆ ಎಂದು ಪೀಠ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸೀತಾಲಕ್ಷ್ಮಿ ಎಂಬುವರು ಎಸ್ಎಸ್ಎಲ್ಸಿ ತನಕ ಕನ್ನಡ ಮಾಧ್ಯಮದಲ್ಲಿ ಕನ್ನಡ ಪಠ್ಯಕ್ರಮದಲ್ಲಿ ಒಂದು ವಿಷಯವಾಗಿ ಅಧ್ಯಯನ ಮಾಡಿದ್ದರು. ಸುಮಾರು ಮೂರು ದಶಕಗಳ ಸೇವೆಯ ನಂತರ ಅವರು 2019ರ ಅಕ್ಟೋಬರ್ 31 ರಂದು ಸೇವೆಯಿಂದ ನಿವೃತ್ತರಾಗಿದ್ದರು.
ಅವರಿಗೆ ಕನ್ನಡ ಭಾಷೆಯಲ್ಲಿ ಅಧ್ಯಯನ ಮಾಡಿದ್ದ ಆದಾರದಲ್ಲಿ ವೇತನದ ಹೆಚ್ಚಳ (ಇಕ್ರಿಮೆಂಟ್) ಅನ್ನು ಶಿಕ್ಷಣ ಇಲಾಖೆ ನೀಡಬೇಕು ಎಂಬ ನಿಯಮವಿತ್ತು. ಆದರೆ, ಇಲಾಖೆ ಅರ್ಜಿದಾರರ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿತ್ತು. ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮಂಡಳಿ ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications