Get Updates
Get notified of breaking news, exclusive insights, and must-see stories!

Karnataka Syllabus: ‘ಯುವಕರ ಬ್ರೈನ್‌ ವಾಶ್‌ ಮಾಡುವ ಪ್ರಯತ್ನ..’

ಬಿಜೆಪಿ, ಕಾಂಗ್ರೆಸ್ ಮಧ್ಯೆ ಕರ್ನಾಟಕ ಶಿಕ್ಷಣ ನೀತಿ ವಿಚಾರಕ್ಕೆ ತಿಕ್ಕಾಟ ಬಲು ಜೋರಾಗಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಬಿಜೆಪಿ ಸರ್ಕಾರದ ಶಿಕ್ಷಣ ನೀತಿಗೆ ತಿಲಾಂಜಲಿ ಇಡುವ ಬಗ್ಗೆ ಸಿದ್ದರಾಮಯ್ಯ ಅವರು ಆಶ್ವಾಸನೆ ನೀಡಿದ್ದರು. ಈಗ ನೂತನ ಶಿಕ್ಷಣ ನೀತಿ ಜಾರಿಗಾಗಿ ಹೊಸ ಸಮಿತಿಯನ್ನು ಸಿದ್ದರಾಮಯ್ಯ ಅವರ ಸರ್ಕಾರ ರಚನೆ ಮಾಡಿದ್ದು, ಈ ಸಮಯದಲ್ಲೇ ಕಮಲ ಪಾಳಯ ರೊಚ್ಚಿಗೆದ್ದಿದೆ.

ರಾಜ್ಯದಲ್ಲಿ ಶಿಕ್ಷಣ ನೀತಿ ಬದಲಾವಣೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, 'ಭಾರತದಲ್ಲಿ ರಾಷ್ಟ್ರೀಯತೆ ಜಾಗೃತಗೊಂಡರೆ, ತನ್ನ ಅಸ್ತಿತ್ವ ಕಮರಿ ಹೋಗುತ್ತದೆ ಎಂಬುದು ಬ್ರಿಟಿಷರ ಸಂಜಾತರಾಗಿರುವ @INCIndia ದ ಮನಸ್ಥಿತಿ. ಹೀಗಾಗಿ ಅಧಿಕಾರ ದೊರೆತಾಗ ಮತ್ತು ಅವಕಾಶ ಸಿಕ್ಕಾಗ ರಾಷ್ಟ್ರೀಯತೆ ಹಾಗೂ ರಾಷ್ಟ್ರೀಯತೆಯ ಅಂಶಗಳನ್ನೊಳಗೊಂಡ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಹತ್ತಿಕ್ಕುತ್ತಲೇ ಬಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಿದ್ದು, ರಾಷ್ಟ್ರೀಯತೆಯನ್ನು ಒಳಗೊಂಡ ಪಠ್ಯಪುಸ್ತಕವನ್ನು ಹಿಂಪಡೆದಿದ್ದು, ಇದೆಲ್ಲಾ @INCKarnataka ದ ರಾಷ್ಟ್ರ ವಿರೋಧಿ ಧೋರಣೆಯ ಪ್ರತೀಕ.' ಎಂದು ಆರೋಪ ಮಾಡಿದೆ.

congress-and-bjp-over-karnataka-syllabus

'ರಾಷ್ಟ್ರೀಯ ಶಿಕ್ಷಣ ನೀತಿ ಅತ್ಯಗತ್ಯ'

ಹಾಗೇ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಬಿಜೆಪಿ, 'ಅತ್ಯಂತ ವೇಗವಾಗಿ ಸಾಗುತ್ತಿರುವ ಜಗತ್ತಿನಲ್ಲಿ, ಭಾರತೀಯರನ್ನು ಸ್ಪರ್ಧಾತ್ಮಕ ಜಗತ್ತಿಗೆ ಅನುವುಗೊಳಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಅತ್ಯಗತ್ಯ. ಇದನ್ನು ಮನಗಂಡಿದ್ದ ಬಿಜೆಪಿ ಸರ್ಕಾರ ಪಠ್ಯಪುಸ್ತಕ ಪರಿಷ್ಕರಣೆ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಸೇರಿದಂತೆ ಶಿಕ್ಷಣ ವಲಯವನ್ನು ಸುಧಾರಿಸುವ ಅನೇಕ ಸುಧಾರಣಾ ಕ್ರಮಗಳನ್ನು ಕರ್ನಾಟಕದಲ್ಲಿ ಜಾರಿಗೆ ತಂದಿತ್ತು. ನೂತನ ಪಠ್ಯಕ್ರಮ, ವಿಭಿನ್ನ ಬೋಧನಾ ಶೈಲಿ, ಮಾತೃಭಾಷೆ ಹಾಗೂ ಸ್ಥಳೀಯ ಭಾಷೆಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವಿಕೆ, ವಿಜ್ಞಾನ ಮತ್ತು ಕಲೆಯ ವಿಷಯಗಳು ಹಾಗೂ ವೃತ್ತಿಪರ ಮತ್ತು ಶೈಕ್ಷಣಿಕ ಕೋರ್ಸ್‌ಗಳ ಮೂಲಕ ಉದ್ಯೋಗಾಧಾರಿತ ಕೌಶಲ್ಯಗಳ ಜೊತೆಜೊತೆಗೆ ರಾಷ್ಟೀಯತೆಯ ಚಿಂತನೆಯನ್ನು ರಾಷ್ಟ್ರೀಯ ಶಿಕ್ಷಣ ನೀತಿ ಒಳಗೊಂಡಿದೆ.' ಎಂದಿದೆ.

ಯುವಕರ ಬ್ರೈನ್‌ ವಾಶ್‌ ಮಾಡುವ ಪ್ರಯತ್ನ?

ಹಾಗೇ, 'ಇದಕ್ಕೆ ವ್ಯತಿರಿಕ್ತವಾಗಿ ಕಾಂಗ್ರೆಸ್ ಭಾರತದ ಶಿಕ್ಷಣ ಜಗತ್ತಿಗೆ ಯಾವುದೇ ಕೊಡುಗೆಯನ್ನು ನೀಡದೆ, ಮೆಕಾಲೆ ಶಿಕ್ಷಣ ಪದ್ದತಿಯನ್ನೇ ಯಥಾವತ್ತಾಗಿ ಮುಂದುವರಿಸಿದೆ. ಶಿಕ್ಷಣವನ್ನು ರಾಷ್ಟ್ರ ನಿರ್ಮಾಣಕ್ಕೆ, ಯುವಜನತೆಗೆ ಸ್ವಾವಲಂಬನೆಯ ಸ್ವಾಭಿಮಾನದ ಬದುಕನ್ನು ಕಟ್ಟಿಕೊಡಲು, ಆತ್ಮವಿಶ್ವಾಸವನ್ನು ವೃದ್ಧಿಸಲು ಬಿಜೆಪಿ ಬಳಸಿದರೆ, ಅದೇ ಕಾಂಗ್ರೆಸ್ ಶಿಕ್ಷಣವನ್ನು ತನ್ನ ಪೊಳ್ಳು ಸಿದ್ದಾಂತ ಹಾಗೂ ತನ್ನ ದೇಶ ವಿರೋಧಿ ಮನಸ್ಥಿತಿಯನ್ನು ತುಂಬುವ ಟೂಲ್‌ ಕಿಟ್ ಆಗಿ ಬಳಸಿಕೊಳ್ಳುತ್ತದೆ. ಕಾಂಗ್ರೆಸ್‌ ತನ್ನ ತಿರುಚಿದ ಇತಿಹಾಸವನ್ನು ಪಠ್ಯಪುಸ್ತಕದಲ್ಲಿ ತೂರಿಸಿ, ಮಕ್ಕಳ ಹಾಗೂ ಯುವಕರ ಬ್ರೈನ್‌ ವಾಶ್‌ ಮಾಡುವ ಪ್ರಯತ್ನವನ್ನು ಮಾಡುತ್ತಲೇ ಬಂದಿದೆ. ಇದಕ್ಕಾಗಿ ತನ್ನ ವಂಧಿಮಾಗದರನ್ನು, ಆಸ್ಥಾನ ಕಲಾವಿದರನ್ನೆಲ್ಲಾ ಗುಡ್ಡೆ ಹಾಕಿ, ತನ್ನ ಸಿದ್ದಾಂತಕ್ಕೆ ಅನುಕೂಲವಾಗುವ ರೀತಿಯಲ್ಲಿ ಪಠ್ಯ ಪರಿಷ್ಕರಣೆ ಮಾಡಿತ್ತು.' ಎಂದು ಬಿಜೆಪಿ ಆರೋಪ ಮಾಡಿದೆ.

ಶೈಕ್ಷಣಿಕ ಕ್ಷೇತ್ರಕ್ಕಾದ ಪ್ರಯೋಜನ ಶೂನ್ಯ?

ತನ್ನ ಸರಣಿ ಟ್ವೀಟ್‌ನಲ್ಲಿ ಬಿಜೆಪಿ, 'ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದರೆ, ತಾನು ಮಾಡುವ ಕಿತಾಪತಿಗಳಿಗೆ ಜಾಗ ಇರುವುದಿಲ್ಲವೆಂಬುದೇ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ಗಿದ್ದ ಪ್ರಮುಖ ಅಸಮಾಧಾನ. ಭಾರತದ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಲು ಕಾಂಗ್ರೆಸ್‌ ಯಾವುದೇ ಪ್ರಮುಖ ನೀತಿಯನ್ನು ಇದುವರೆಗೆ ಜಾರಿಗೆ ತಂದಿಲ್ಲ. ಈ ಹಿಂದೆ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಶಿಕ್ಷಣ ಹಕ್ಕು (ಆರ್‌ಟಿಇ) ಕಾಯಿದೆಯಿಂದ ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಉಂಟಾಯಿತೇ ವಿನಹ ಶೈಕ್ಷಣಿಕ ಕ್ಷೇತ್ರಕ್ಕಾದ ಪ್ರಯೋಜನ ಶೂನ್ಯ.' ಎಂದು ಆರೋಪ ಮಾಡಿದೆ.

ಯಾವ ಪುರುಷಾರ್ಥದ ಸಾಧನೆಗೆ...

ಅಂತಿಮವಾಗಿ, 'ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳನ್ನು ರದ್ದುಪಡಿಸಬೇಕು ಹಾಗೂ ದ್ವೇಷ ರಾಜಕಾರಣ ಮಾಡಬೇಕು ಎಂಬ ಟೂಲ್‌ ಕಿಟ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ @INCKarnataka ಸರ್ಕಾರ, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸುತ್ತಿರುವುದು ಸಹ ದ್ವೇಷದ ರಾಜಕಾರಣಕ್ಕಾಗಿ. ಕರ್ನಾಟಕದ ಎಲ್ಲಾ 30 ವಿಶ್ವವಿದ್ಯಾಲಯದ ಕುಲಪತಿಗಳು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸದೆ ಮುಂದುವರೆಸಿ ಎಂದು ಆಗ್ರಹಿಸಿದರೂ, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಯಾವ ಪುರುಷಾರ್ಥದ ಸಾಧನೆಗೆ ಕಾಂಗ್ರೆಸ್ ರದ್ದುಗೊಳಿಸಿದೆ ಎಂಬ ಪ್ರಶ್ನೆಗೆ ಇದುವರೆಗೂ ಸ್ಪಷ್ಟ ಉತ್ತರ ನೀಡಿಲ್ಲ.' ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ ಕರ್ನಾಟಕ ಬಿಜೆಪಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+