ಯಡಿಯೂರಪ್ಪ ಬಗ್ಗೆ ಹೇಳಿಕೆ, ಸಿಎಂ ಸೇರಿ ಹಲವರಿಗೆ ಹೈಕೋರ್ಟ್ ನೊಟೀಸ್
ಬೆಂಗಳೂರು, ಮಾರ್ಚ್ 15: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ವಿರುದ್ಧ ಸತ್ಯವಲ್ಲದ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡಿರುವುದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೆಲವು ಕಾಂಗ್ರೆಸ್ ಮುಖಂಡಿಗೆ ನೊಟೀಸ್ ಜಾರಿ ಮಾಡಿದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
'ಸಿದ್ದರಾಮಯ್ಯ ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರು ತಮ್ಮ ಸಾರ್ವಜನಿಕವಾಗಿ ನಾನು ಈಗಾಗಲೇ ಖುಲಾಸೆಗೊಂಡಿರುವ ಕೇಸುಗಳೂ ಸೇರಿದಂತೆ ತಮ್ಮನ್ನು ಅಪರಾಧಿ ಎಂಬಂತೆ ಮಾತನಾಡುತ್ತಿದ್ದು ಮಾನಹಾನಿ ಮಾಡುತ್ತಿದ್ದಾರೆ' ಎಂದು ಯಡಿಯೂರಪ್ಪ ಅವರು ಹೈಕೋರ್ಟ್ನಲ್ಲಿ ದೂರು ಸಲ್ಲಿಸಿದ್ದರು.
ಯಡಿಯೂರಪ್ಪ ಅವರ ದೂರನ್ನು ಮನ್ನಿಸಿರುವ ಹೈಕೋರ್ಟ್ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ವಿಎಸ್ ಉಗ್ರಪ್ಪ, ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರಿಗೆ ನೊಟೀಸ್ ಜಾರಿ ಮಾಡಿದೆ.

ತಮ್ಮ ಬಹುತೇಕ ರಾಜಕೀಯ ಭಾಷಣಗಳಲ್ಲಿ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರನ್ನು 'ಜೈಲಿಗೆ ಹೋಗಿ ಬಂದವರು' ಎಂದು ಹಾಗೂ 'ಚೆಕ್ನಲ್ಲಿ ಲಂಚ ಪಡೆದವರು' ಎಂದು ಮೂದಲಿಸುತ್ತಿದ್ದರು, ಈಗ ಇದೇ ವಿಷಯವನ್ನು ಮುಂದೆ ಮಾಡಿ ಯಡಿಯೂರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
'ಸಿದ್ದರಾಮಯ್ಯ ಅವರು ನಾನು ಖುಲಾಸೆಯಾಗಿರುವ ಕೇಸುಗಳ ಬಗ್ಗೆಯೂ ಮಾತನಾಡುತ್ತಿದ್ದು, ಇದು ನ್ಯಾಯಾಲಯದ ತೀರ್ಪಿಗೆ ಅಪಮಾನವಾಗಿದೆ' ಎಂದು ಯಡಿಯೂರಪ್ಪ ಅವರು ಹೈಕೋರ್ಟ್ಗೆ ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಹೈಕೋರ್ಟ್ ನೀಡಿರುವ ನೊಟೀಸ್ಗೆ ಸಿದ್ದರಾಮಯ್ಯ ಮತ್ತು ಇತರರು ಉತ್ತರಿಸಬೇಕಾಗಿದೆ.












Click it and Unblock the Notifications