Goravanahalli: ಗೊರವನಹಳ್ಳಿ ಮಹಾಲಕ್ಷ್ಮಿ ದೇವಿ ದರ್ಶನ ಪಡೆಯಲು ಹರಿದು ಬಂದ ಭಕ್ತಸಾಗರ!
ಕೊರಟಗೆರೆ: ಅದ್ಧೂರಿಯಾಗಿ ರಾಜ್ಯದೆಲ್ಲೆಡೆ ಇಂದು ವರಮಹಾಲಕ್ಷ್ಮಿ ದೇವಿಗೆ ಪೂಜೆಯನ್ನ ಭಕ್ತರು ನೆರವೇರಿಸಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ದೇವಿಗೆ ಭಕ್ತರು ವಿವಿಧ ವರ ಕೇಳಿದ್ದಾರೆ. ಹೀಗೆ ವಿಶೇಷ ದಿನದಂದು ಗೊರವನಹಳ್ಳಿಯ ಮಹಾಲಕ್ಷ್ಮಿ ದೇವಿ ದರ್ಶನ ಪಡೆಯಲು ಜನಸಾಗರವೇ ಹರಿದು ಬಂದಿತ್ತು.
ಹೌದು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಗ್ರಾಮದ ಮಹಾಲಕ್ಷ್ಮಿ ದೇವಿ ದೇಗುಲದಲ್ಲಿ ಇಂದು ವಿಶೇಷ ಪೂಜೆ ನೆರವೇರಿತು. ಮುಂಜಾನೆಯೇ ಶುರುವಾಗಿದ್ದ ಭಕ್ತರ ಆಗಮನ ಸಂಜೆಯ ತನಕ ಮುಂದುವರಿದಿತ್ತು. ತಮ್ಮ ಮನೆಗಳಲ್ಲಿ ಮಹಾಲಕ್ಷ್ಮಿಗೆ ಪೂಜೆ ಸಲ್ಲಿಸಿದ ಮಹಿಳೆಯರು ಹಾಗೂ ಭಕ್ತ ವೃಂದ ದೇಗುಲಕ್ಕೂ ಆಗಮಿಸಿ ವಿಶೇಷವಾದ ಪೂಜೆ ಸಲ್ಲಿಸಿ ದೇವಿಗೆ ನಮಿಸಿದ್ದಾರೆ. ಶ್ರಾವಣ ಮಾಸದ 2ನೇ ಶುಕ್ರವಾರ ಪೌರ್ಣಿಮೆ ಮೊದಲು ಬರುವ ವರ ಮಹಾಲಕ್ಷ್ಮಿ ಹಬ್ಬ ಭಕ್ತರಿಗೆ ಸಕಲ ಸಂಪತ್ತು ತಂದುಕೊಡುತ್ತದೆ ಎಂಬ ವಾಡಿಕೆ ಇದೆ. ಹೀಗಾಗಿ ಭಕ್ತರು ಮಹಾಲಕ್ಷ್ಮಿ ದೇವಿಗೆ ಭಕ್ತಿಯಿಂದ ನಮಿಸಿದ್ದಾರೆ.

ರಾಜ್ಯದ ಮೂಲೆ ಮೂಲೆಯಿಂದ ಬಂದ ಭಕ್ತರು
ಹಾಗೇ ಗೊರವನಹಳ್ಳಿಯ ಮಹಾಲಕ್ಷ್ಮಿ ದೇವಿ ದರ್ಶನ ಪಡೆಯಲು ಸಾಮಾನ್ಯ ದಿನಗಳಲ್ಲೇ ಸಾವಿರಾರು ಭಕ್ತರು ಆಗಮಿಸುತ್ತಾರೆ. ಇಂದು ವಿಶೇಷ ದಿನವಾದ ಹಿನ್ನೆಲೆಯಲ್ಲಿ ಈ ಸಂಖ್ಯೆ ಲಕ್ಷ ದಾಟಿದೆ ಎನ್ನಲಾಗಿದೆ. ಹೀಗೆ ದೂರದ ಊರುಗಳಿಂದ ಗೊರವನಹಳ್ಳಿಯ ಮಹಾಲಕ್ಷ್ಮಿ ದೇವಿ ದರ್ಶನ ಪಡೆಯಲು ಬಂದಿದ್ದ ಭಕ್ತರಿಗೆ ದಾಸೋಹ ಕಾರ್ಯಕ್ರಮ ಏರ್ಪಡಿಸಿದ್ದರು. ಜೊತೆಗೆ ಭಕ್ತರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲಾಗಿತ್ತು. ಹೀಗೆ ರಾಜ್ಯದ ಮೂಲೆ ಮೂಲೆಯಿಂದ ಬಂದಿದ್ದ ಭಕ್ತರು ಗೊರವನಹಳ್ಳಿಯ ಮಹಾಲಕ್ಷ್ಮಿ ದೇವಿ ದರ್ಶನ ಪಡೆದು ಭಕ್ತಿಯಿಂದ ನಮಿಸಿದರು.
ಭಕ್ತರಿಗಾಗಿ ಭದ್ರತೆಯೂ ಹೆಚ್ಚಳ
ರಾಜ್ಯ ಸೇರಿ ಹೊರ ರಾಜ್ಯದಿಂದಲೂ ಭಕ್ತಾಧಿಗಳು ಈ ಕ್ಷೇತ್ರಕ್ಕೆ ಆಗಮಿಸಿ ದೇವಿಯ ಆಶೀರ್ವಾದ ಪಡೆಯುತ್ತಾರೆ. ಪ್ರತಿವರ್ಷ ಕೂಡ ಅದ್ಧೂರಿಯಾಗಿ ಮಹಾಲಕ್ಷ್ಮಿ ಹಬ್ಬ ಆಚರಿಸಲಾಗುತ್ತದೆ. ಈ ವರ್ಷ ಮತ್ತೊಂದು ವಿಶೇಷ ಕೂಡ ಸೇರಿತ್ತು. ಅದೇನೆಂದ್ರೆ ಶಕ್ತಿ ಯೋಜನೆಯ ಹಿನ್ನೆಲೆ ಮಹಿಳಾ ಭಕ್ತರಿಗೆ ಸಾಕಷ್ಟು ಅನುಕೂಲ ಆಗಿತ್ತು. ಹೀಗಾಗಿ ಈ ಬಾರಿ ಮಹಾಲಕ್ಷ್ಮಿ ಹಬ್ಬಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿಯೇ ಇತ್ತು. ಇದರ ಬಗ್ಗೆ ಅಧಿಕಾರಿಗಳು ಕೂಡ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಹಾಗೇ ಭಕ್ತರಿಗೆ ಯಾವುದೇ ರೀತಿ ಸಮಸ್ಯೆ ಎದುರಾಗದಂತೆ ಭದ್ರತೆಯನ್ನ ಕೂಡ ಹೆಚ್ಚಿಸಲಾಗಿತ್ತು.

ಶಕ್ತಿ ಯೋಜನೆಯಿಂದ ಭಾರಿ ಅನುಕೂಲ
ತುಮಕೂರು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಗೊರವನಹಳ್ಳಿ ಕ್ಷೇತ್ರಕ್ಕೆ ಹೆಚ್ಚಿನ ಮಹಿಳಾ ಭಕ್ತರು ಆಗಮಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆ ಸದುಪಯೋಗ ಪಡೆದು ಕ್ಷೇತ್ರಕ್ಕೆ ಬಂದು ಮಹಾಲಕ್ಷ್ಮಿ ದೇವಿ ದರ್ಶನ ಪಡೆಯುತ್ತಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಭಕ್ತಾಧಿಗಳು ಬರುತ್ತಿದ್ದಾರೆ. ಭದ್ರತೆಗೆ ಸಂಬಂಧಿಸಿದ ಹೆಚ್ಚಿನ ಕೆಲಸವನ್ನ ತಾಲೂಕು ಆಡಳಿತ ನಿರ್ವಸಿದೆ, ದೇವಾಲಯದ ಟ್ರಸ್ಟ್ ಸಹ ಅನುಕೂಲ ಕಲ್ಪಿಸಿದೆ ಎಂದಿದ್ದಾರೆ.
ಒಟ್ನಲ್ಲಿ ರಾಜ್ಯದ ಶಕ್ತಿ ಯೋಜನೆ ಸದುಪಯೋಗ ಮಾಡಿಕೊಂಡು ಮಹಿಳಾ ಭಕ್ತರು ಪುಣ್ಯ ಕ್ಷೇತ್ರಗಳಿಗೆ ತೆರಳುತ್ತಿದ್ದಾರೆ. ಈ ಪ್ರಮಾಣ ಉಚಿತ ಬಸ್ ಪ್ರಯಾಣ ಆರಂಭವಾದ ನಂತರ ಹೆಚ್ಚಾಗಿದೆ. ರಾಜ್ಯದ ವಿವಿಧ ಕ್ಷೇತ್ರಕ್ಕೆ ಭೇಟಿ ನೀಡಿ, ತಮ್ಮಿಷ್ಟದ ದೇವರಿಗೆ ನಮಿಸುತ್ತಿರುವ ಭಕ್ತರು ಪುನೀತರಾಗುತ್ತಿದ್ದಾರೆ. ಹೀಗಾಗಿಯೇ ರಾಜ್ಯ ಸರ್ಕಾರ ಹಾಗೂ ಸಾರಿಗೆ ಇಲಾಖೆಯು ಕೂಡ ದೊಡ್ಡ ದೊಡ್ಡ ದೇಗುಲ ಇರುವ ಪ್ರದೇಶಕ್ಕೆ ಸೂಕ್ತ ಬಸ್ ವ್ಯವಸ್ತೆಯನ್ನ ಕಲ್ಪಸಿದೆ. ಹಾಗೇ ಭಕ್ತರಿಗೆ ಅನುಕೂಲ ಆಗುವ ರೀತಿ ಶ್ರೀಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications