ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಸಿಎಂ ಸಭೆಯಲ್ಲಾದ ಚರ್ಚೆಯ ಮುಖ್ಯಾಂಶಗಳು
ಬೆಂಗಳೂರು, ಜನವರಿ 21: ಕರ್ನಾಟಕದಲ್ಲಿ ವಾರಾಂತ್ಯ ಕರ್ಫ್ಯೂ ತೆರವುಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ನಡೆದ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಕಂದಾಯ ಸಚಿವ ಆರ್.ಅಶೋಕ್ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ತಾಂತ್ರಿಕ ಸಲಹಾ ಸಮಿತಿ ಹಲವು ಸಲಹೆಗಳನ್ನು ಸರ್ಕಾರದ ಮುಂದೆ ಇರಿಸಿತ್ತು. ಅದರಂತೆ ಸಭೆಯಲ್ಲಿ ಕೆಲವು ಸಡಿಲಿಕೆ ಮಾಡಲಾಗಿದೆ.
ಕೋವಿಡ್ ಪರಿಶೀಲನಾ ಸಭೆಯ ಮುಖ್ಯಾಂಶಗಳು:
1. ಜನವರಿ 20ರ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 2,93,231 ಸಕ್ರಿಯ ಪ್ರಕರಣಗಳು ಇವೆ. ಇದರಲ್ಲಿ 2.86 ಲಕ್ಷ ಮಂದಿ ಹೋಂ ಐಸೋಲೇಷನ್ನಲ್ಲಿ ಇದ್ದಾರೆ.

2. ಒಟ್ಟು 5344 ಸೊಂಕಿತರು ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ 340 ಜನ ಐಸಿಯುನಲ್ಲಿ ಇದ್ದಾರೆ. 127 ಮಂದಿ ವೆಂಟಿಲೇಟರ್ನಲ್ಲಿ ಇದ್ದಾರೆ.
3. ಬೆಂಗಳೂರನ್ನು ಹೊರತುಪಡಿಸಿ ಮೈಸೂರು, ತುಮಕೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಕೋವಿಡ್ ಪ್ರಕರಣಗಳು ವರದಿಯಾಗಿವೆ.
4. ಪಾಸಿಟಿವಿ ದರ ಶೇ. 19.94 ರಷ್ಟಿದೆ.
5. ಮಕ್ಕಳ ಪಾಸಿಟಿವಿಟಿ ದರ ಶೇ.8 ರಷ್ಟಿದ್ದು, ವಯಸ್ಕರ ಪಾಸಿಟಿವಿಟಿ ದರ ಶೇ.16.57 ರಷ್ಟಿದೆ.
6. ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳ ಪ್ರಮಾಣದ ಮೇಲೆ ನಿಗಾ ವಹಿಸಲಾಗುತ್ತಿದೆ.
7. ರಾಜ್ಯದಲ್ಲಿ ಮಂಜೂರಾಗಿರುವ 243 ಪಿಎಸ್ಎ ಪ್ಲಾಂಟ್ಗಳ ಪೈಕಿ 225 ಕಾರ್ಯಾರಂಭ ಮಾಡಿವೆ.
8. ಎಲ್ಲ ಜಿಲ್ಲಾ ಆಸ್ಪತ್ರೆಗಳು, 113 ತಾಲ್ಲೂಕು ಆಸ್ಪತ್ರೆಗಳಲ್ಲಿ ಪಿಎಸ್ಎ ಪ್ಲಾಂಟ್ಗಳು ಕಾರ್ಯಾರಂಭ ಮಾಡಿವೆ.
9. ಸರಾಸರಿ ಮೂರು ದಿನಕ್ಕೆ ಪ್ರಕರಣಗಳು ದ್ವಿಗುಣಗೊಳ್ಳುತ್ತಿದೆ. ಒಬ್ಬ ಸೋಂಕಿತನಿಂದ ಸರಾಸರಿ 2.6 ಜನರಿಗೆ ಹರಡುತ್ತಿದೆ.
10. ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ತಗಲುತ್ತಿದೆ.
11. ಬೆಂಗಳೂರಿನ ಜೊತೆಗೆ ಇತರ ಜಿಲ್ಲೆಗಳಲ್ಲಿಯೂ ಕೋವಿಡ್ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ.

12. ವಾರಾಂತ್ಯ ಕರ್ಫ್ಯೂ ವಿಧಿಸಿದರೂ ಕೂಡ ದೊಡ್ಡ ಪರಿಣಾಮ ಉಂಟಾಗಿಲ್ಲ. ಸೊಂಕಿತರ ಸಂಖ್ಯೆ ಮತ್ತು ಪಾಸಿಟಿವಿಟಿ ದರ ಹೆಚ್ಚಾದರೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಶೇ.5ರಿಂದ 6ರ ಮಧ್ಯದಲ್ಲಿದೆ. ಚೇತರಿಸಿಕೊಳ್ಳುತ್ತಿರುವ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ.
13. ಆದರೆ ಮುಂದಿನ ವಾರದಲ್ಲಿ ಪ್ರಕರಣಗಳ ಸಂಖ್ಯೆ ಉತ್ತುಂಗಕ್ಕೆ ತಲುಪುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
14. ಜೊತೆಗೆ ಕೋವಿಡ್-19 ನಿರ್ವಹಣೆಯ ಮುಂಚೂಣಿಯ ಕಾರ್ಯಕರ್ತರು ಹೆಚ್ಚಿನ ಪ್ರಮಾಣದಲ್ಲಿ ಸೋಂಕಿಗೆ ಒಳಗಾಗುತ್ತಿರುವುದನ್ನು ಗಮನಿಸಲಾಗಿದೆ.
15. ಜನರ ಜೀವ ಮತ್ತು ಜೀವನ ನಿರ್ವಹಣೆ ಎರಡೂ ಸರಿದೂಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
16. ಈ ಎಲ್ಲ ಅಂಶಗಳನ್ನು ಪರಿಶೀಲಿಸಿ ಈ ಕೆಳಕಂಡ ತೀರ್ಮಾನಗಳನ್ನು ಕೈಗೊಳ್ಳಲಾಯಿತು
17. ರಾತ್ರಿ ಕರ್ಫ್ಯೂ ಅವಧಿ ವಾರದ ಏಳೂ ದಿನಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಜಾರಿಯಲ್ಲಿರಲಿದೆ.
18. ಸಾರ್ವಜನಿಕರ ಬೇಡಿಕೆಯ ಮೇರೆಗೆ ಹಾಗೂ ತಜ್ಞರೊಂದಿಗೆ ಚರ್ಚಿಸಿದ ಅಂಶಗಳನ್ನು ಆಧರಿಸಿ, ಈ ವಾರಾಂತ್ಯದಲ್ಲಿ ವಾರಾಂತ್ಯ ಕರ್ಫ್ಯೂವನ್ನು ಸದ್ಯಕ್ಕೆ ಹಿಂಪಡೆಯಲು ನಿರ್ಧರಿಸಲಾಯಿತು. ಆದರೆ ಮುಂದಿನ ವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವನ್ನು ನೋಡಿಕೊಂಡು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು.
19. ಸಾರ್ವಜನಿಕಕರು ಜವಾಬ್ದಾರಿಯುತವಾಗಿ ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸುವುದು ಅತಿ ಅಗತ್ಯವಾಗಿದೆ.
20. ಮಾಲ್, ಹೋಟೆಲ್, ಬಾರ್, ಕ್ಲಬ್, ಪಬ್ಗಳು ಶೇ.50 ಆಸನ ಸಾಮರ್ಥ್ಯದೊಂದಿಗೆ ತೆರೆಯಲು ತೀರ್ಮಾನಿಸಲಾಯಿತು. ಎರಡೂ ಲಸಿಕೆ ಪಡೆಯುವುದು ಕಡ್ಡಾಯಗೊಳಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ












Click it and Unblock the Notifications