ಕೊಲ್ಲೂರು ದೇವಾಲಯದ ಪಕ್ಕ ಹೆದ್ದಾರಿ; ಕೋರ್ಟ್ ಆದೇಶವೇನು?
ಬೆಂಗಳೂರು, ಫೆಬ್ರವರಿ 22: ಉಡುಪಿ ಜಿಲ್ಲೆಯ ಹೆಸರಾಂತ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಗೊಳ್ಳುತ್ತಿರುವುದು ಭಕ್ತರಲ್ಲಿ ಆತಂಕ ಮೂಡಿಸಿದೆ.
ಅದರ ಬೆನ್ನಲ್ಲೇ ಭೂ ಸ್ವಾಧೀನ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಸೂಚಿಸಿ ಮಧ್ಯಂತರ ಆದೇಶ ಮಾಡಿದೆ. ಹಾಗಾಗಿ ಸದ್ಯಕ್ಕೆ ಭಕ್ತರು ನಿರಾಳರಾಗುವಂತಾಗಿದೆ. ಆದರೂ ಇನ್ನೂ ಅಪಾಯ ಸಂಪೂರ್ಣ ದೂರವಾಗಿಲ್ಲ.

ಸ್ಥಳೀಯರಾದ ಗುರು ಪ್ರಸಾದ್ ದೇವಾಲಯ ಸುತ್ತಲಿನ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊರಡಿಸಿರುವ ಅಧಿಸೂಚನೆ ರದ್ದು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ. ಎಸ್. ದಿನೇಶ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಅಲ್ಲದೆ, ಅರ್ಜಿ ಸಂಬಂಧ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.
ದೇಗುಲಕ್ಕೆ ಅಪಾಯ: ಅರ್ಜಿದಾರರ ಪರ ವಕೀಲರು, ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ದೇವಾಲಯ ಸುತ್ತಲಿನ ಸರ್ವೇ ನಂಬರ್ 12ರಲ್ಲಿ ಭೂಮಿ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ.
ಈ ಯೋಜನೆ ಪ್ರಕಾರ ಕಾಮಗಾರಿ ನಡೆದರೆ, ದೇವಾಲಯದ ಗೋಡೆಯ ಮೂರು ಅಡಿ ಪಕ್ಕದಲ್ಲೇ ಹೆದ್ದಾರಿ ನಿರ್ಮಾಣವಾಗಲಿದೆ. ಹೆದ್ದಾರಿಯಲ್ಲಿ ಪ್ರತಿದಿನ ಅಂದಾಜು 15 ಸಾವಿರ ವಾಹನಗಳು ಹಾದುಹೋಗಲಿವೆ. ಇದರಿಂದ ಸಾವಿರಾರು ವರ್ಷಗಳ ಹಳೆಯ ದೇಗುಲದ ಕಟ್ಟಡಕ್ಕೆ ಅಪಾಯ ಒದಗಲಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಪ್ರಕರಣದ ಹಿನ್ನಲೆ: ಬೈಂದೂರು ತಾಲೂಕಿನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ದೇವಾಲಯ ಸುತ್ತಲಿನ ಸರ್ವೇ ನಂ 12ರಲ್ಲಿನ ಜಮೀನು ಸ್ವಾಧೀನಪಡಿಸಿಕೊಳ್ಳಲು ಸಚಿವಾಲಯವು 2023ರ ಅ.10 ರಂದು ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಗೆ ಆಕ್ಷೇಪಿಸಿ ತಾವು 2023ರ ಅ.26ರಂದು ಸಲ್ಲಿಸಿರುವ ಮನವಿ ಪತ್ರವನ್ನು ಸಚಿವಾಲಯ ಪರಿಗಣಿಸಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.
ಅಲ್ಲದೆ, ಅಧಿಸೂಚನೆ ಪ್ರಕಾರ ದೇವಸ್ಥಾನದ ಪಕ್ಕದ ಮೂಡಿ ಅಡಿ ಸಮೀಪದಲ್ಲೇ ಹೆದ್ದಾರಿ ನಿರ್ಮಾಣವಾಗಲಿದೆ. ಈ ಮಾರ್ಗದಲ್ಲಿ ನಿತ್ಯ 15 ಸಾವಿರಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತದೆ. ಇದರಿಂದ ದೇವಸ್ಥಾನದ ಕಟ್ಟಡಕ್ಕೆ ಅಪಾಯ ಒದಗಲಿದೆ ಎಂದು ಹೇಳಲಾಗಿದೆ.
ಜೊತೆಗೆ ಅರ್ಜಿದಾರರು ಗರ್ಭಗುಡಿ ಕಂಪಿಸಲಿದೆ. ಹಾಗೆಯೇ, ದೇವಸ್ಥಾನದ ಧಾರ್ಮಿಕ ರಥ್ಯೋತ್ಸವ ನೇರವೇರಿಸಲು ಅಡ್ಡಿ ಸೇರಿದಂತೆ ಅನೇಕ ಸಮಸ್ಯೆ ಉಂಟಾಗಲಿವೆ. ಹಾಗಾಗಿ, ಸಚಿವಾಲಯದ ಅಧಿಸೂಚನೆ ರದ್ದುಪಡಿಸಬೇಕು.
ದೇವಾಲಯದ ಪಕ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ನಿರ್ಬಂಧ ಹೇರಬೇಕು. ರಾಷ್ಟ್ರೀಯ ಹೆದ್ದಾರಿಗೆ ನಿರ್ಮಾಣಕ್ಕೆ ಪಯಾರ್ಯ ಮಾರ್ಗ ಕಂಡುಕೊಳ್ಳುವಂತೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications