ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಬೆದರಿಕೆ: ತಮಿಳುನಾಡು ಮೂಲದ ವ್ಯಕ್ತಿ ಬಂಧನ

ಬೆಂಗಳೂರು, ಮಾ.22: ಹಿಜಾಬ್ ಕುರಿತು ತೀರ್ಪು ನೀಡಿದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ತಮಿಳುನಾಡು ಮೂಲದ ವ್ಯಕ್ತಿಯನ್ನು ಕರ್ನಾಟಕ ಪೊಲೀಸರು ಬಂಧಿಸಿ ಕರೆತಂದಿದ್ದಾರೆ.

ಹಿಜಾಬ್ ತೀರ್ಪು ಬಳಿಕ ತೀರ್ಪು ನೀಡಿದಂತಹ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದಂತಹ ವ್ಯಕ್ತಿಯನ್ನು ಕರ್ನಾಟಕ ಪೊಲೀಸರು ಬಾಡಿ ವಾರಂಟ್ ಸಮೇತ ತಮಿಳುನಾಡಿಗೆ ಹೋಗಿ ಬಂಧಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ ರಾತ್ರಿ ತಿಳಿಸಿದರು.

ಬಂಧಿತ ವ್ಯಕ್ತಿಯನ್ನು ರಹಮತುಲ್ಲಾ ಎಂದು ಗುರುತಿಸಲಾಗಿದೆ. ಮಧುರೈನಲ್ಲಿ ಈತ ಪತ್ತೆಯಾಗಿದ್ದಾನೆ. ಆರೋಪಿತನನ್ನು ಬಂಧಿಸುವಲ್ಲಿ ತಮಿಳುನಾಡಿನ ಪೊಲೀಸರು ಸಹ ರಾಜ್ಯದ ಪೊಲೀಸರಿಗೆ ಸಹಕಾರ ನೀಡಿದ್ದಾರೆ ಎಂದಿದ್ದಾರೆ.

Hijab Case Judges Threatened : Tamil Nadu-Based Man Arrested

ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ವಿಷಯವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ವ್ಯವಸ್ಥೆಗೆ ಹಾಕಿದಂತಹ ಸವಾಲು ಇದಾಗಿತ್ತು. ಇಂತಹ ಪ್ರವೃತ್ತಿಯನ್ನು ಬಗ್ಗುಬಡಿಯಬೇಕು. ಸಮಾಜದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನವಿದು ಎಂದು ಹೇಳಿದರು.

ಆರೋಪಿತನನ್ನು ರಾಜ್ಯದ ಪೊಲೀಸರು ತಮ್ಮ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ಮಾಡುತ್ತಿದ್ದಾರೆ. ಇಂತಹದ್ದು ಇಲ್ಲಿಗೆ ಕೊನೆಯಾಗಬೇಕು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+