ಶಿಕ್ಷಕರ ಪ್ರಶಸ್ತಿಗೂ ತಟ್ಟಿದ ಹಿಜಾಬ್ ವಿವಾದದ ಬಿಸಿ: ಘೋಷಿಸಿದ ಪ್ರಶಸ್ತಿ ತಡೆಹಿಡಿದ ಸರ್ಕಾರ
ಬೆಂಗಳೂರು, ಸೆಪ್ಟೆಂಬರ್ 06: ಶಿಕ್ಷಕರ ದಿನಾಚರಣೆ ಪ್ರಯುಕ್ತ ರಾಜ್ಯ ಸರ್ಕಾರ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ರಾಜ್ಯದ ವಿವಿಧ ಜಿಲ್ಲೆಯ ಶಿಕ್ಷಕರಿಗೆ ಪ್ರದಾನ ಮಾಡಿ ಗೌರವ ನೀಡಿದೆ. ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರಾಂಶುಪಾಲರಾದ ರಾಮಕೃಷ್ಣ ಜಿಬಿ ಅವರಿಗೂ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು ಆದರೆ ಕೆಲವು ಕಾರಣಾಂತರಗಳಿಂದ ನಿನ್ನೆ ಘೋಷಣೆ ಮಾಡಿದ್ದ ಪ್ರಶಸ್ತಿಯನ್ನು ಸರ್ಕಾರ ತಡೆಹಿಡಿದಿದೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ರಾಜ್ಯಾದಂತ್ಯ ಭಾರೀ ಸಂಚಲನ ಮೂಡಿಸಿದ್ದ ಕಾಲೇಜುಗಳಲ್ಲಿ ಹಿಜಾಬ್ ವಿವಾದದಲ್ಲಿ ರಾಮಕೃಷ್ಣ ಜಿಬಿ ಅವರ ಹೆಸರು ಕೇಳಿ ಬಂದಿತ್ತು. ಹಿಜಾಬ್ ವಿವಾದದ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಗೇಟ್ನಲ್ಲಿಯೇ ತಡೆದಿದ್ದು ಇವರೇ ಎನ್ನುವುದು ಗೊತ್ತಾಗುತ್ತಿದ್ದಂತೆ ರಾಜ್ಯ ಸರ್ಕಾರ ಇವರಿಗೆ ಘೋಷಣೆ ಮಾಡಿದ್ದ ಪ್ರಶಸ್ತಿಯನ್ನು ತಡೆಹಿಡಿದಿದೆ ಎನ್ನುವುದು ಕರಾವಳಿ ಭಾಗದ ನಾಯಕರ ಆರೋಪವಾಗಿದೆ.

ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದು, 'ಈ ಹಿಂದಿನ ಸರ್ಕಾರ ಆದೇಶ ಮಾಡಿದಾಗ ಪ್ರಾಂಶುಪಾಲ ವರ್ತನೆ ಸರಿಯಿರಲಿಲ್ಲ. ಹೀಗಾಗಿ ಪ್ರಶಸ್ತಿ ತಡೆಹಿಡಿಯಲಾಗಿದೆ. ಪ್ರಶಸ್ತಿಯನ್ನು ರದ್ದು ಮಾಡಿಲ್ಲ. ವಿದ್ಯಾರ್ಥಿಗಳ ಜೊತೆ ಪ್ರಿನ್ಸಿಪಾಲ್ ರಾಮಕೃಷ್ಣ ವರ್ತನೆ ಸರಿಯಿರಲಿಲ್ಲ. ಈ ಆರೋಪದ ಮೇಲೆ ಪ್ರಶಸ್ತಿ ತಡೆ ಹಿಡಿಯಲಾಗಿದ್ದು, ಈ ಬಗ್ಗೆ ಮತ್ತೆ ಪರಿಶೀಲನೆ ಮಾಡಿ ವರದಿ ನೀಡುತ್ತಾರೆ. ಆ ಭಾಗದಲ್ಲಿ ರಾಜಕಾರಣ ಮಾಡುತ್ತಾರೆ. ಅದು ಮಾಡೋದು ಬೇಡ' ಎಂದಿದ್ದರು.
ಪ್ರಾಂಶುಪಾಲರಾದ ರಾಮಕೃಷ್ಣ ಜಿಬಿ ಅವರಿಗೆ ಸಲ್ಲಬೇಕಾದ ಪ್ರಶಸ್ತಿಯನ್ನು ಸರ್ಕಾರ ತಡೆಹಿಡಿದಿರುವ ಬಗ್ಗೆ ಬಿಜೆಪಿ ನಾಯಕರು ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಸ್ಲಿಂ ಸಮುದಾಯವನ್ನು ಓಲೈಕೆ ಮಾಡಲು ಸರ್ಕಾರ ಮುಂದಾಗಿದೆ. ಉಡುಪಿ ಜಿಲ್ಲೆಯ ಜನರ ತಾಳ್ಮೆಯನ್ನು ಸಿದ್ದರಾಮಯ್ಯ ಸರ್ಕಾರ ಪರೀಕ್ಷೆ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.
ಈ ಬಗ್ಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿದ್ದು, 'ರಾಮಕೃಷ್ಣ ಅವರು ಆ ಭಾಗದ ವಿದ್ಯಾರ್ಥಿಗಳ ಮನಸ್ಸು ಗೆದ್ದವರು. ಯಾವುದೇ ರಾಜಕೀಯ ಮಾಡದೆ ಪ್ರಾಮಾಣಿಕ ಕರ್ತವ್ಯ ಮಾಡಿದವರು. ಹಿಜಾಬ್ ಸಂದರ್ಭದಲ್ಲಿ ಅವರ ಕರ್ತವ್ಯ ಮಾಡಿದ್ದಾರಷ್ಟೇ. ಸರ್ಕಾರ ಸೂಚಿಸಿದ ನಿಯಮಾವಳಿ ಪಾಲಿಸಿದ್ದಾರೆ. ವಿದ್ಯಾರ್ಥಿನಿಯರಲ್ಲಿ ತಾರತಮ್ಯ ಮಾಡಬಾರದು ಎಂಬ ಕಾರಣಕ್ಕೆ ಕ್ರಮ ಕೈಗೊಂಡಿದ್ದರು. ಶಾಲೆಯ ಶಿಸ್ತನ್ನು ಕಾಪಾಡಿದ್ದಕ್ಕೆ ಅವಮಾನ ಮಾಡುವುದು ಸರಿಯಲ್ಲ' ಎಂದಿದ್ದಾರೆ.
'ಪ್ರಾಂಶುಪಾಲರ ಸಾಧನೆಗಾಗಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಯಾರ ಮೂಲಕ ಒತ್ತಡ ತಂದು ಪ್ರಶಸ್ತಿ ಪಡೆದಿರಲಿಲ್ಲ. ಮನೆ ಬಾಗಿಲಿಗೆ ಹೋಗಿ ಭಿಕ್ಷೆ ಬೇಡದೇ ಪ್ರಶಸ್ತಿ ಪಡೆದಿದ್ದರು. ಅನುಭವದ ಆಧಾರದಲ್ಲಿ ಆಯ್ಕೆ ಸಮಿತಿ ಆಯ್ಕೆ ಮಾಡಿತ್ತು. ಸರ್ಕಾರ ಅಗೌರವ ಮೊಂಡುತನ ತೋರಿಸಿದೆ. ಇದು ಶಿಕ್ಷಕ ವೃತ್ತಿಗೆ ಮಾಡಿದ ಅವಮಾನ, ಅನ್ಯಾಯ' ಎಂದು ತೀವ್ರವಾಗಿ ಖಂಡಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications