Get Updates
Get notified of breaking news, exclusive insights, and must-see stories!

ಹಿಜಾಬ್ ವಿವಾದ: ಮಂಗಳೂರು ವಿವಿ, ಭಂಡಾರ್ಕಾರ್ಸ್‌ ಕಾಲೇಜು ಪ್ರಾಂಶುಪಾಲರಿಗೆ ನೋಟಿಸ್‌

ಬೆಂಗಳೂರು, ಫೆಬ್ರವರಿ 09: ಹಿಜಾಬ್‌ ವಿಚಾರವು ಈಗ ಕರ್ನಾಟಕದಲ್ಲಿ ಭಾರೀ ವಿವಾದವನ್ನು ಸೃಷ್ಟಿ ಮಾಡಿದೆ. ಸದ್ಯ ಈ ವಿಚಾರ ಹೈಕೋರ್ಟ್‌ನಲ್ಲಿ ಇದೆ. ಈ ನಡುವೆ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಿಗೆ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ಗೆ ಕರ್ನಾಟಕ ಹೈಕೋರ್ಟ್ ನೋಟಿಸ್‌ ಜಾರಿ ಮಾಡಿದೆ.

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ನಿರ್ದೇಶನದ ಮೇರೆಗೆ ತಮಗೆ ಕಾಲೇಜಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಆರೋಪ ಮಾಡಿ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ತಮ್ಮ ತಾಯಂದಿರ ಮೂಲಕ ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ಮನವಿ ಸಲ್ಲಿಕೆ ಮಾಡಿದ್ದಾರೆ.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ನೇತೃತ್ವದ ಏಕಸದಸ್ಯ ಪೀಠವು ಕರ್ನಾಟಕ ಹೈಕೋರ್ಟ್ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಿಗೆ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ಗೆ ತುರ್ತು ನೋಟಿಸ್‌ ಅನ್ನು ನೀಡಿದೆ. ಹಾಗೆಯೇ ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿದ್ದಾರೆ.

Hijab Row: HC Issues Notice to Mangalore University Registrar, Bhandarkars College Principal

ತೃತೀಯ ಬಿಬಿಎ ವಿದ್ಯಾರ್ಥಿ ಸುಹಾ ಮೌಲಾನಾ ಅವರು ತಮ್ಮ ತಾಯಿ ಬೀಬಿ ಸಾರಾ ಮತ್ತು ಪ್ರಥಮ ಬಿಬಿಎ ವಿದ್ಯಾರ್ಥಿನಿ ಐಶಾ ಅಲೀಫಾ ಕೌಸರ್‌ ಅವರು ತಮ್ಮ ತಾಯಿ ರಹಮತ್‌ ಅವರ ಮೂಲಕ ಹೈಕೋರ್ಟ್‌ಗೆ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಮನವಿ ಸಲ್ಲಿಕೆ ಮಾಡಿದ್ದಾರೆ. ಹಾಗೆಯೇ ಮಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌, ಭಂಡಾರ್ಕಾರ್ಸ್‌ ಕಲಾ ಮತ್ತು ವಿಜ್ಞಾನ ಕಾಲೇಜಿನ ಪರವಾಗಿ ಪ್ರಾಂಶುಪಾಲರುಗಳ ವಿರುದ್ಧವೂ ಅರ್ಜಿ ಸಲ್ಲಿಸಲಾಗಿದೆ.

ಅರ್ಜಿಯಲ್ಲಿ ವಿದ್ಯಾರ್ಥಿಗಳು ಹೇಳಿರುವುದು ಏನು?

ತಮಗೆ ಯಾವುದೇ ನಿರ್ಬಂಧ ಹಾಗೂ ಷರತ್ತು ಹೇರದ ಕಾಲೇಜಿಗೆ ಪ್ರವೇಶ ಮಾಡಲು ಭಂಡಾರ್ಕಾರ್ಸ್‌ ಕಲಾ ಮತ್ತು ವಿಜ್ಞಾನ ಕಾಲೇಜಿಗೆ ಆದೇಶ ನೀಡಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ಗೆ ಸೂಚನೆ ನೀಡಲು ವಿದ್ಯಾರ್ಥಿನಿಯರು ಹೈಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ ಹೇಳಿದ್ದಾರೆ. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾಲೇಜಿನಲ್ಲಿ ತಮ್ಮ ರಾಜಕೀಯ ಅಜೆಂಡಾವನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪ ಮಾಡಲಾಗಿದೆ. ಹಾಗೆಯೇ ಕಾನೂನಿನ ಯಾವ ನಿಬಂಧನೆಯಡಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾಲೇಜಿನ ಆಡಳಿತದಲ್ಲಿ ಮಧ್ಯಪ್ರದೇಶ ಮಾಡಿದ್ದಾರೆ ಎಂದು ಪ್ರಶ್ನಿಸಿ ಆದೇಶ ಮಾಡಬೇಕು ಎಂದು ತಿಳಿಸಿದ್ದಾರೆ. ಹಾಗೆಯೇ ಈ ವಿಚಾರದಲ್ಲಿ ನ್ಯಾಯ ದೊರಕಿಸುವಂತೆ ಕೋರಲಾಗಿದೆ.

ಮಧ್ಯಂತರ ಪರಿಹಾರವಾಗಿ, ಅರ್ಜಿದಾರರಿಗೆ ಯಾವುದೇ ಪಕ್ಷಪಾತ, ತಾರತಮ್ಯ ತೋರದೆ ಶಿರವಸ್ತ್ರ ಧರಿಸಿ ತರಗತಿಗಳಿಗೆ ಪ್ರವೇಶಿಸಲು ಭಂಡಾರ್ಕಾರ್ಸ್‌ ಕಾಲೇಜಿಗೆ ಮಂಗಳೂರು ವಿವಿಯ ರಿಜಿಸ್ಟ್ರಾರ್‌ ಅವರು ಸೂಚಿಸುವಂತೆ ನ್ಯಾಯಾಲಯವು ನಿರ್ದೇಶನ ನೀಡಬೇಕು. ಹಾಗೆಯೇ ಶೈಕ್ಷಣಿಕ ಸಿಬ್ಬಂದಿಯ ತಾರತಮ್ಯದಿಂದಾಗಿ ಈ ಶೈಕ್ಷಣಿಕ ವರ್ಷದಲ್ಲಿ ತರಗತಿಯಿಂದ ಹೊರಗುಳಿದಿರುವ ದಿನಗಳಿಗೆ ಅಥವಾ ಮನವಿ ಇತ್ಯರ್ಥವಾಗುವವರೆಗೆ ಹಾಜರಾತಿ ನೀಡಬೇಕು ಎಂದು ಕೂಡಾ ಅರ್ಜಿದಾರರು ಮನವಿ ಮಾಡಿದ್ದಾರೆ.

ಕಾಲೇಜು ಆರಂಭ ಮಾಡಿದಾಗಿನಿಂದ ನಮಗೆ ಯಾವುದೇ ನಿರ್ಬಂಧ ಇರಲಿಲ್ಲ. ಆದರೆ ಫೆಬ್ರವರಿ 3ರಂದು ಏಕಾಏಕಿ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಹಿಜಾಬ್‌ ಧರಿಸಿ ಕಾಲೇಜಿಗೆ ಬರಬಾರದು ಎಂದು ಹೇಳಿದ್ದಾರೆ. ಈಗ ಸರ್ಕಾರದ ಆದೇಶವಿದೆ ಎಂದು ನಿರ್ಬಂಧ ವಿಧಿಸಲಾಗುತ್ತಿದೆ. ಪ್ರಾಂಶುಪಾಲರು ಮತ್ತು ಸಿಬ್ಬಂದಿಯನ್ನು ವಿದ್ಯಾರ್ಥಿಗಳ ಪೋಷಕರು ಭೇಟಿ ಮಾಡಿ ಪ್ರಶ್ನಿಸಿದಾಗ ಶಾಸಕ ಶ್ರೀನಿವಾಸ ಶೆಟ್ಟಿ ನಿರ್ದೇಶನದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾಂಶುಪಾಲರು ಹೇಳಿದ್ದಾರೆ ಎಂದು ಮನವಿಯಲ್ಲಿ ವಿದ್ಯಾರ್ಥಿಗಳು ಉಲ್ಲೇಖ ಮಾಡಿದ್ದಾರೆ. (ಒನ್‌ಇಂಡಿಯಾ ಸುದ್ದಿ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+