ಬೆಂಗಳೂರಲ್ಲಿ ಕದ್ದುಮುಚ್ಚಿ ಹಿಂದಿ ದಿವಸ: ಕರವೇ ವಿರೋಧ ಇಲ್ಲಿದೆ ವೈರಲ್ ವಿಡಿಯೋ!
ದೇಶದಾದ್ಯಂತ ಮತ್ತೆ ಹಿಂದಿ ದಿವಸ್ ಅಥವಾ ಹಿಂದಿ ದಿನ ನಡೆಯುತ್ತಿದ್ದು, ಇದಕ್ಕೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ಸಂಬಂಧ ಮಾತನಾಡಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ್ರು.ಟಿ.ಎ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಹದಿನೈದು ವರ್ಷಗಳಿಂದಲೂ ಹಿಂದಿ ದಿವಸ ಕಾರ್ಯಕ್ರಮಗಳನ್ನು ವಿರೋಧಿಸುತ್ತಲೇ ಬಂದಿದೆ.
ಕರವೇ ಹೋರಾಟದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಪ್ರತಿ ಸೆಪ್ಟೆಂಬರ್ 14ರಂದು ಒಕ್ಕೂಟ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳಲ್ಲಿ ಹಿಂದಿ ದಿವಸ ಆಚರಣೆಗೆ ಕಡಿವಾಣ ಬಿದ್ದಿತ್ತು. ಆದರೆ, ಸೋಮವಾರ ರೈಲ್ವೆ ಇಲಾಖೆ ಬೆಂಗಳೂರಿನ ಗಾಂಧಿನಗರದ ಖಾಸಗಿ ಹೋಟೆಲ್ ಒಂದರಲ್ಲಿ ಕದ್ದುಮುಚ್ಚಿ ಹಿಂದಿದಿವಸ ಆಚರಣೆಗೆ ಮುಂದಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ನಮ್ಮ ಕರವೇ ಮಹಿಳಾ ಘಟಕದ ಮುಖಂಡರು, ಕಾರ್ಯಕರ್ತೆಯರು ಅಲ್ಲಿಗೆ ಧಾವಿಸಿ ಪೋಸ್ಟರ್ ಗಳನ್ನು ಹರಿದೆಸೆದು ಕಾರ್ಯಕ್ರಮವನ್ನು ನಿಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

ದುರಂತೆವೆಂದರೆ ಈ ಅನ್ಯಾಯದ, ಕನ್ನಡಿಗರ ಮೇಲಿನ ಆಕ್ರಮಣದ ಕಾರ್ಯಕ್ರಮವನ್ನು ನಿಲ್ಲಿಸಿದಕ್ಕಾಗಿ ನಮ್ಮ ಕರವೇ ಕಾರ್ಯಕರ್ತೆಯರ ಮೇಲೆ ಉಪ್ಪಾರಪೇಟೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂದು ಪ್ರತಿಪಾದಿಸಿದರೆ ನಮ್ಮ ಮೇಲೆ ಎಫ್ಐಆರ್ಗಳು ದಾಖಲಾಗುತ್ತವೆ. ನಮ್ಮ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ತಮ್ಮನ್ನು ತಾವು ಕನ್ನಡಪ್ರೇಮಿಗಳು ಎಂದು ಹೇಳಿಕೊಳ್ಳುತ್ತಾರೆ. ಆದರೆ ಕನ್ನಡ ಕಾರ್ಯಕರ್ತರ ಮೇಲೆ ಮನಸಿಗೆ ಬಂದಂತೆ ಮೊಕದ್ದಮೆಗಳನ್ನು ದಾಖಲಿಸಲಾಗುತ್ತದೆ. ಇದಕ್ಕೆ ನಾವು ಅಂಜುವುದಿಲ್ಲ. ಇಂಥ ಸಾವಿರ ಎಫ್ಐಆರ್ ಹಾಕಿದರೂ ಬೆದರುವ ಪ್ರಶ್ನೆಯೇ ಇಲ್ಲ. ಹಿಂದಿ ಹೇರಿಕೆ ವಿರುದ್ಧ ನಮ್ಮ ಹೋರಾಟವನ್ನು ನಾವು ನಿರಂತರವಾಗಿ ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.
ಒಂದು ಭಾಷೆಯಾಗಿ ಹಿಂದಿಯ ಕುರಿತು ನಮ್ಮ ದ್ವೇಷ, ಅಸಹನೆ, ಕೋಪ ಯಾವುದೂ ಇಲ್ಲ. ಅದೂ ಕೂಡ ಕನ್ನಡ, ತಮಿಳು, ತೆಲುಗು, ಬಂಗಾಳಿಯಂತೆ ಒಂದು ಭಾರತೀಯ ಭಾಷೆ. ಆದರೆ ಅದನ್ನು ದೇಶದ ಎಲ್ಲ ಭಾಷಿಕರ ಮೇಲೆ ಹೇರುವುದು ಅನ್ಯಾಯ, ದೌರ್ಜನ್ಯ, ದಬ್ಬಾಳಿಕೆಯ ಪ್ರತೀಕ. ಇದನ್ನು ನಾವು ಯಾವತ್ತೂ ಸಹಿಸಿಕೊಂಡಿಲ್ಲ, ಮುಂದೆಯೂ ಸಹಿಸಿಕೊಳ್ಳುವುದಿಲ್ಲ. ಹಿಂದಿ ಹೇರಿಕೆಯಿಂದಾಗಿ ದೇಶದ ಬಹುತ್ವಕ್ಕೆ ಧಕ್ಕೆಯಾಗುತ್ತಿದೆ, ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುತ್ತಿದೆ. ಒಂದು ಭಾಷೆಯನ್ನು ಹೇರುವ ಮೂಲಕ ದೇಶವನ್ನು ಒಡೆಯುವ ಸಂಚನ್ನು ನಾವು ಸಹಿಸುವುದಿಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
"Hindi Diwas" celebration by railway department in Bengaluru was stopped by KaRaVe.
— Ethnic Kannadiga (@Ellarakannada) September 15, 2025
Hindi imposition is nothing but Hindi Racism.
Kannadigas are fighting Hindi Racism.pic.twitter.com/eNXG3UB8jk
ಬೆಂಗಳೂರಲ್ಲಿ ಹಿಂದಿ ದಿವಸ ವಿಡಿಯೋ ವೈರಲ್: ಇನ್ನು ಬೆಂಗಳೂರಿನಲ್ಲಿ ಸೋಮವಾರ ಸೆಪ್ಟೆಂಬರ್ 15ರಂದು ಕದ್ದುಮುಚ್ಚಿ ಹಿಂದಿ ದಿವಸ ಆಚರಣೆ ಮಾಡಿರುವುದನ್ನು ವಿರೋಧಿಸಿದ ಕರವೇ ಕಾರ್ಯಕರ್ತೆಯರು ಪ್ರತಿಭಟನೆ ಮಾಡಿದ್ದಾರೆ. ಹಿಂದಿ ದಿವಸ ಆಚರಣೆಯನ್ನು ವಿರೋಧಿಸಿ ಪ್ರತಿಭಟನೆ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಹಿಂದಿ ದಿವಸ ಆಚರಣೆಯನ್ನು ಕನ್ನಡಿಗರ ವಿರೋಧಕ್ಕೆ ಮಣಿದು ನಿಲ್ಲಿಸಲಾಗಿತ್ತು. ಆದರೆ ಇದೀಗ ಮತ್ತೆ ಬೆಂಗಳೂರಿನಲ್ಲಿ ಹಾಗೂ ಕರ್ನಾಟಕದಲ್ಲಿ ಹಿಂದಿ ದಿವಸ ಆಚರಣೆ ನಡೆಯುತ್ತಿದೆ ಎಂದು ಕರವೇ ದೂರಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications