ದೇವ್ರು ಪ್ರತ್ಯಕ್ಷನಾದ್ರೆ ಅವನನ್ನು ಸಾಯಿಸಿ ಬಿಜೆಪಿಯವರು ಗುಡಿ ಕಟ್ತಾರೆ, ದ್ವಾರಕನಾಥ್
ಚಾಮರಾಜನಗರ, ಡಿ 31: ಶಿವ,ರಾಮ, ಕೃಷ್ಣನ ಹೆಸರನ್ನು ಇಟ್ಟುಕೊಂಡು ಅದರಿಂದ ರಾಜಕೀಯ ಬೇಳೆ ಹೇಗೆ ಬೇಯಿಸಿಕೊಳ್ಳಬಹುದು ಎನ್ನುವುದು ಬಿಜೆಪಿಯವರಿಗೆ ಇರುವ ಚಿಂತೆಯೇ ಹೊರತು ದೇವರ ಮೇಲಿನ ಭಕ್ತಿಯಿಂದಲ್ಲ ಎಂದು ಖ್ಯಾತ ವಕೀಲ ಮತ್ತು ರಾಜ್ಯ ಹಿಂದುಳಿದ ವರ್ಗ ಆಯೋಗದ ಮಾಜಿ ಅಧ್ಯಕ್ಷ ಡಾ. ಸಿ ಎಸ್ ದ್ವಾರಕನಾಥ್ ಮತ್ತೊಂದು ವಿವಾದಕಾರಿ ಹೇಳಿಕೆ ನೀಡಿದ್ದಾರೆ.
ನಗರದದ ಜೆ ಎಚ್ ಪಟೇಲ್ ಸಭಾಂಗಣದಲ್ಲಿ ಶನಿವಾರ (ಡಿ 30) ಆಯೋಜಿಸಲಾಗಿದ್ದ ಸಂಕೀರ್ಣದಲ್ಲಿ ಮಾತನಾಡುತ್ತಿದ್ದ ದ್ವಾರಕನಾಥ್, ಒಂದು ವೇಳೆ ದೇವರು ಪ್ರತ್ಯಕ್ಷನಾದರೆ, ಅವನನ್ನು ಸಾಯಿಸಿ ದೇವಸ್ಥಾನ ಕಟ್ಟಲೂ ಬಿಜೆಪಿಯವರು ಹಿಂದೆಮುಂದೆ ನೋಡುವವರಲ್ಲ ಎಂದು ದ್ವಾರಕನಾಥ್ ಕಿಡಿಕಾರಿದ್ದಾರೆ. (ಶ್ರೀರಾಮನ ಅಸ್ತಿತ್ವದ ಬಗ್ಗೆ ಪುರಾವೆ ಇಲ್ಲ: ದ್ವಾರಕನಾಥ್)

ಇತ್ತೀಚೆಗೆ ಮಂಗಳೂರಿನಲ್ಲಿ, ದೇಶದ ಇತಿಹಾಸದಲ್ಲಿ ಶ್ರೀರಾಮಚಂದ್ರ ಹುಟ್ಟಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ, ಬುದ್ಧ, ಕ್ರಿಸ್ತ, ಪೈಗಂಬರ್ ಇರುವಿಕೆಗೆ ಸಾಕಷ್ಟು ಪುರಾವೆಗಳಿವೆ ಎನ್ನುವ ಹೇಳಿಕೆ ಮೂಲಕ ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ದ್ವಾರಕನಾಥ್ ಗುರಿಯಾಗಿದ್ದರು.
ವಾಲ್ಮೀಕಿ, ಕುವೆಂಪು ಅವರು ಹೇಳುವ ರಾಮಾಯಣ ಬೇರೆ, ಬಿಜೆಪಿಯವರ ರಾಮಾಯಣ ಬೇರೆ. ಬಿಜೆಪಿಯವರ ರಾಮ, ನನ್ನ ರಾಮನಲ್ಲ.ನನಗೆ ರಾವಣನೇ ಹೀರೊ. ಬಿಜೆಪಿ ಮತ್ತು ಕಾಂಗ್ರೆಸ್ ನವರಿಗೆ ಅಂತಹ ವ್ಯತ್ಯಾಸವೇನೂ ಇಲ್ಲ ಎಂದು ದ್ವಾರಕನಾಥ್ ಹೇಳಿದ್ದಾರೆ.
ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಒಬ್ಬ ವಿಷಪೂರಿತ ಮನುಷ್ಯ. ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತನಾಡುತ್ತಾನೆ. ಜಾತ್ಯಾತೀತರಂತೆ ಕರೆದುಕೊಳ್ಳುವವರು ಅಪ್ಪ- ಅಮ್ಮನ ರಕ್ತದ ಗುರುತು ಇಲ್ಲದವರು. ಜಾತ್ಯಾತೀತರು ಇತಿಹಾಸ ಗೊತ್ತಿಲ್ಲದ ಮೂರ್ಖರು ಎಂದು ಹೇಳುವ ಅನಂತ್ ಕುಮಾರ್ ಹೆಗಡೆ 'ಹೆಗ್ಗಣ'ಕ್ಕೆ ಸಮಾನ ಎಂದು ದ್ವಾರಕನಾಥ್, ಏಕವಚನದಲ್ಲಿ ಹೆಗಡೆ ವಿರುದ್ದ ಕಿಡಿಕಾರಿದ್ದಾರೆ.
ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅವರ ಜಂಡಾ (ಬಾವುಟ) ಬೇರೆಬೇರೆ.. ಆದರೆ ಅಜೆಂಡಾ ಎಲ್ಲಾ ಒಂದೇ, ಹಾಗಾಗಿ ಮೂರೂ ಪಕ್ಷವನ್ನು ಜನ ತಿರಸ್ಕರಿಸಬೇಕೆಂದು ದ್ವಾರಕನಾಥ್ ಮನವಿ ಮಾಡಿದ್ದಾರೆ. ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ದ್ವಾರಕನಾಥ್ ವಿರುದ್ಧ ದೂರು ದಾಖಲಾಗಿತ್ತು.
ಕೊನೇ ಮಾತು: ಶ್ರೀರಾಮ ಹುಟ್ಟಿದ್ದಕ್ಕೆ ಪುರಾವೆಯಿಲ್ಲ, ರಾಮಾಯಣ ಇಲ್ಲ ಎನ್ನುವ ನಿಮಗೆ ರಾವಣ ಅದು ಹೇಗೆ 'ಹೀರೋ' ಆಗ್ಬಿಡ್ತಾನೆ ಎನ್ನುವುದನ್ನೊಮ್ಮೆ ವಿವರಿಸಿಬಿಡಿ. ಜೊತೆಗೆ, ಮೂರೂ ಪಕ್ಷವನ್ನು ತಿರಸ್ಕರಿಸಿ ಬಿಟ್ರೆ, ಇನ್ಯಾವ ಪಕ್ಷಕ್ಕೆ ವೋಟ್ ಹಾಕಬೇಕು ಎನ್ನುವ ಫರ್ಮಾನನ್ನೂ ಹೊರಡಿಸ್ಬಿಡಿ ಅತ್ಲಾಗೆ...
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications