ಗಣೇಶ ಪ್ರತಿಷ್ಠಾಪಿಸಿದವರೇ A1,A1ನಿಂದ A23 ವರೆಗೆ ಎಲ್ಲಾ ಹಿಂದೂಗಳೇ: ಯತ್ನಾಳ ಕಿಡಿ
ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಯತ್ನಾಳ ಮತ್ತೊಮ್ಮೆ ಗುಡುಗಿದ್ದಾರೆ. ನಾಗಮಂಗಲ ಗಲಭೆಯನ್ನು ರಾಜ್ಯ ಸರ್ಕಾರ ಹಗುರವಾಗಿ ಪರಿಗಣಿಸುತ್ತಿದೆ. ಗೃಹ ಸಚಿವರು ಇದು ಆಕಸ್ಮಿಕ ಘಟನೆ ಎಂದಿದ್ದಾರೆ. ಇದು ಆಕಸ್ಮಿಕವೇ ಎಂದು ಬಿಜೆಪಿ ಗುರುವಾರದಿಂದ ಗುಡುಗಿದೆ. ಇದೀಗ ತನಿಖೆ ನಡೆಯುತ್ತಿರುವ ವಿಧಾನಕ್ಕೆ ಬಸನಗೌಡ ಯತ್ನಾಳ ಸೇರಿದಂತೆ ಬಿಜೆಪಿಯ ಕೆಲವು ಮುಖಂಡರು ಈಗಾಗಲೇ ವಿರೋಧಿಸಿದ್ದಾರೆ. ಇದೀಗ ಸೆಕ್ಷನ್ ವಿಧಿಸಿರುವುದಕ್ಕೆ ಸಂಬಂಧಿಸಿದಂತೆ ಯತ್ನಾಳ ಮತ್ತೊಮ್ಮೆ ಗರಂ ಆಗಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಯತ್ನಾಳ್ ಅವರು ಮತ್ತೊಮ್ಮೆ ಗುಡುಗಿದ್ದಾರೆ. ಪೊಲೀಸರ ತನಿಖೆಯ ತರ್ಕಾನುಸಾರ ಗಣೇಶನನ್ನು ಕೂರಿಸಿದ ಆಯೋಜಕರೇ ದೋಷಿಗಳು, ಅವರೇ ಗಲಭೆ ಸೃಷ್ಟಿಸಿದ್ದು, ಸಾರ್ವಜನಿಕ/ಖಾಸಗಿ ಆಸ್ತಿ ಪಾಸ್ತಿಗಳಿಗೆ ಬೆಂಕಿ ಹಚ್ಚಿದ್ದು ಗಣಪನನ್ನು ಕೂರಿಸಿದ ಹಿಂದೂಗಳೇ ಎಂದು ಪ್ರಶ್ನೆ ಮಾಡಿದ್ದಾರೆ.

ಮುಂದುವರಿದು ಪೊಲೀಸರು ಯಾರ ಒತ್ತಡ ಮೇಲೆ ಹಿಂದೂಗಳ ಮೇಲೆ ಕೇಸು ಮಾಡುತ್ತಿದ್ದಾರೆ ಎಂದು ಹೇಳಬೇಕು. ಮೆರವಣಿಗೆ ಹೋಗುತ್ತಿದ್ದಾಗ ಚಪ್ಪಲಿ, ಕಲ್ಲೆಸೆತ ಮಾಡಿದ್ದು ಯಾರೆಂದು ಪೊಲೀಸರಿಗೆ ಗೊತ್ತಿಲ್ಲವೇ ? A1 ನಿಂದ A23 ನ ಎಲ್ಲ ಆರೋಪಿಗಳು ಹಿಂದೂಗಳೇ ಆಗಿದ್ದಾರೆ. ಮಂಡ್ಯದ ಪೊಲೀಸ್ ವರಿಷ್ಠಾಧಿಕಾರಿಗಳೇ ನಿಮ್ಮ ಇಲಾಖೆ ಮಾಡುತ್ತಿರುವ ತನಿಖೆ ರಾಜಕೀಯ ಪ್ರೇರಿತವಾಗಿದೆ. ನೀವು ನಿಜವಾದ ಅಪರಾಧಿಗಳನ್ನು ಹಿಡಿಯಬೇಕು, ಅಮಾಯಕರನ್ನಲ್ಲ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಕೂಡಲೇ, ತಪ್ಪುಗಳನ್ನು ಸರಿಪಡಿಸಿ ಎಂದು ಆಗ್ರಹಿಸಿದ್ದಾರೆ.
ಗಣೇಶ ಮೂರ್ತಿ ಪ್ರತಿಷ್ಠಾಪಿಸಿದವರೇ ಎ1 ಆರೋಪಿ ?
ಇನ್ನು ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದವರನ್ನೇ ಎ1 ಆರೋಪಿ ಮಾಡಲಾಗಿದೆ ಎಂದು ವರದಿಯಾಗುತ್ತಿದ್ದು, ಇದಕ್ಕೆ ಆಕ್ಷೇಪಣೆ ವ್ಯಕ್ತವಾಗಿದೆ. ಅಲ್ಲದೇ ಇದರಲ್ಲಿ ಎ1ನಿಂದ ಎ23ರ ವರೆಗೆ ಇರುವ ಎಫ್ಐಆರ್ನಲ್ಲಿ ಹಿಂದೂಗಳ ಹೆಸರನ್ನೇ ದಾಖಲು ಮಾಡಲಾಗಿದೆ. ಎ 24ನಿಂದ ಪೆಟ್ರೋಲ್ ಬಾಂಬ್, ಕಲ್ಲು ತೂರಿದವರು ಹಾಗೂ ಅಂಗಡಿಗಳನ್ನು ಸುಟ್ಟವರ ಹೆಸರನ್ನು ಸೇರಿಸಲಾಗಿದೆ ಎಂದು ಹೇಳಲಾಗುತ್ತಿದೆ ಇದನ್ನು ಯತ್ನಾಳ ಅವರು ವಿರೋಧ ಮಾಡಿದ್ದಾರೆ.
ಯಾರನ್ನು ತುಷ್ಟೀಕರಣ ಮಾಡಬೇಕಿಲ್ಲ: ಪರಂ
ರಾಜ್ಯ ಕಾಂಗ್ರೆಸ್ ಸರ್ಕಾರವು ನಿರ್ದಿಷ್ಟ ಸಮುದಾಯವನ್ನು ತುಷ್ಟೀಕರಣ ಮಾಡುತ್ತಿದೆ. ಅದರ ಪರಿಣಾಮವೇ ಈ ಘಟನೆ ಎಂದು ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧಿಸಿವೆ. ಆದರೆ, ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಸಂಬಂಧ ಮಾನಾಡಿರುವ ಗೃಹ ಸಚಿವ ಜಿ. ಪರಮೇಶ್ವರ್ ಅವರು, ಯಾವ ಸಮುದಾಯವನ್ನು ತುಷ್ಟೀಕರಣ ಮಾಡುವ ಅವಶ್ಯಕತೆ ನಮಗಿಲ್ಲ. ಹೇಳಿಕೆಗಳನ್ನು ತಿರುಚಿ, ತಮಗೆ ಬೇಕಾದಂತೆ ವ್ಯಾಖ್ಯಾನ ಮಾಡಿಕೊಳ್ಳುವವರಿಗೆ ನಾವೇನು ಮಾಡಲು ಸಾಧ್ಯ ಎಂದು ಪರಮೇಶ್ವರ್ ಅವರು ಪ್ರಶ್ನೆ ಮಾಡಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications