ಹಿಂದುತ್ವ ಕೊಲೆ, ತಾರತಮ್ಯ, ಗಲಭೆಯನ್ನು ಪ್ರಚೋಧಿಸುತ್ತದೆ: ಸಿದ್ದರಾಮಯ್ಯ
ಯಾವುದೇ ಧರ್ಮವು ಕೊಲೆ ಮತ್ತು ಹಿಂಸೆಯನ್ನು ಬೆಂಬಲಿಸುವುದಿಲ್ಲ. ಆದರೆ ಹಿಂದುತ್ವ ಮತ್ತು ಮನುವಾದವು ಕೊಲೆ, ಹಿಂಸೆ ಮತ್ತು ತಾರತಮ್ಯವನ್ನು ಬೆಂಬಲಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು, ಫೆಬ್ರವರಿ 7: ಹಿಂದುತ್ವ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಹಿಂದುತ್ವ ಮತ್ತು ಹಿಂದೂ ಧರ್ಮ ಬೇರೆ ಬೇರೆ. ನಾನು ಹಿಂದೂ ಧರ್ಮದ ವಿರೋಧಿಯಲ್ಲ, ನಾನೂ ಕೂಡ ಹಿಂದೂ. ಆದರೆ ಮನುವಾದ ಮತ್ತು ಹಿಂದುತ್ವವನ್ನು ವಿರೋಧಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಮಾಜಿ ಶಾಸಕ ಬಿ.ಆರ್.ಪಾಟೀಲ್ ಅವರ ಜೀವನಾಧಾರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಯಾವುದೇ ಧರ್ಮವು ಕೊಲೆ ಮತ್ತು ಹಿಂಸೆಯನ್ನು ಬೆಂಬಲಿಸುವುದಿಲ್ಲ. ಆದರೆ ಹಿಂದುತ್ವ ಮತ್ತು ಮನುವಾದವು ಕೊಲೆ, ಹಿಂಸೆ ಮತ್ತು ತಾರತಮ್ಯವನ್ನು ಬೆಂಬಲಿಸುತ್ತದೆ ಎಂದು ಅವರು ಹೇಳಿದರು.
ಸಿದ್ದರಾಮಯ್ಯನವರು ಹಿಂದುತ್ವದ ಬಗ್ಗೆ ಹೇಳಿಕೆ ನೀಡಿ ವಿವಾದ ಹುಟ್ಟು ಹಾಕುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು ಜನವರಿ 8 ರಂದು ಅವರು ಹಿಂದೂ ಎಂದು ಪ್ರತಿಪಾದಿಸಿದ್ದರು. ಆದರೆ ಹಿಂದುತ್ವವನ್ನು ವಿರೋಧಿಸಿದ್ದರು. ಅದೇ ಸಮಾರಂಭದಲ್ಲಿ ಅವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಎಂದಿಗೂ ವಿರೋಧಿಸಲಿಲ್ಲ. ಆದರೆ ಅದನ್ನು ರಾಜಕೀಯ ಲಾಭಕ್ಕಾಗಿ ಬಳಸುವುದನ್ನು ವಿರೋಧಿಸಿದ್ದರು.

ಶನಿವಾರದಂದು ಕರ್ನಾಟಕ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ ಅವರು, ಮೇಕೆ, ಹಸು ಎಂದು ಹೇಳಲಾಗದ ಮೂರ್ಖ ಎಂದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಹರಿಹಾಯ್ದಿದ್ದ ಸಿದ್ದರಾಮಯ್ಯ ಅವರು ಪಶುಸಂಗೋಪನೆ ಸಚಿವರ ವಿರುದ್ಧ ಹಾಗೂ ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡು ಸರಣಿ ಟ್ವೀಟ್ ಮಾಡಿದ್ದಾರೆ. ಪಶುಸಂಗೋಪನಾ ಸಚಿವರಿಗೆ ಕನ್ನಡ ಸೇರಿದಂತೆ ಯಾವ ಭಾಷೆಯೂ ಬರುವುದಿಲ್ಲ, ಅಂತಹವರು ಶಾಸಕರಾಗಲು ಅನರ್ಹರು ಎಂದು ಬರೆದ್ದಿದ್ದರು.
ಮುಂದುವರಿದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು, ಬಿಜೆಪಿ ಮುಖಂಡರು ಪ್ರತಿ ಶಾಸಕರಿಗೆ ₹ 15ರಿಂದ 20 ಕೋಟಿ ಹಣ ನೀಡಿ ಆಪರೇಷನ್ ಕಮಲದ ಮೂಲಕ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚಿಸಿದ್ದರು. 2013ರಲ್ಲಿ ನಾವು 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಅಲ್ಲದೆ 30 ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸಿದ್ದೇವೆ. ಬಿಜೆಪಿ 2018ರಲ್ಲಿ 600 ಭರವಸೆಗಳನ್ನು ನೀಡಿತು. ಅದರಲ್ಲಿ 50 ರಿಂದ 60 ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು.
ಪೆನ್ನು, ಪೆನ್ಸಿಲ್, ಪುಸ್ತಕ, ಮೊಸರಿನ ಮೇಲೆ ಶೇ.18ರಷ್ಟು ತೆರಿಗೆ ವಿಧಿಸುವ ಮೂಲಕ ಜನಸಾಮಾನ್ಯರ ಮೇಲೆ ಸರ್ಕಾರ ಹೆಚ್ಚಿನ ಹೊರೆ ಹೇರಿದೆ. ಆದರೆ, ಪ್ರತಿ ಮನೆ ಮಾಲೀಕರಿಗೆ ತಿಂಗಳಿಗೆ ₹ 20,00 ಮತ್ತು ತಿಂಗಳಿಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಅವರು ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications