ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ದೇವೇಗೌಡ ಆಪ್ತ ಎಚ್‌.ಕೆ.ಕುಮಾರಸ್ವಾಮಿ ನೇಮಕ

|
Google Oneindia Kannada News

Recommended Video

JDS ನೂತನ ಅಧ್ಯಕ್ಷ H K ಕುಮಾರಸ್ವಾಮಿ..! | HD Kumaraswamy | Oneindia Kannada

ಬೆಂಗಳೂರು, ಜುಲೈ 04: ಜೆಡಿಎಸ್‌ ಪಕ್ಷದ ರಾಜ್ಯಾಧ್ಯಕ್ಷರಾಗಿ ಸಕಲೇಶಪುರ ಶಾಸಕ ಎಚ್‌.ಕೆ.ಕುಮಾರಸ್ವಾಮಿ ಅವರು ನೇಮಕಗೊಂಡಿದ್ದಾರೆ.

ಕಾರ್ಯಾಧ್ಯಕ್ಷ ಸ್ಥಾನಕ್ಕೆ ಮಧು ಬಂಗಾರಪ್ಪ ನೇಮಕಗೊಂಡಿದ್ದಾರೆ. ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ನೇಮಿಸಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಆದೇಶ ಹೊರಡಿಸಿದ್ದಾರೆ.

ಮೈತ್ರಿ ಸರ್ಕಾರ ಬೀಳಲಿದೆ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್‌ಮೈತ್ರಿ ಸರ್ಕಾರ ಬೀಳಲಿದೆ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್‌

ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಎಚ್.ವಿಶ್ವನಾಥ್ ಅವರ ರಾಜೀನಾಮೆ ಇಂದ ಸ್ಥಾನ ತೆರವಾಗಿತ್ತು. ಬಹು ದಿನಗಳ ನಂತರ ಇಂದು ದೇವೇಗೌಡ ಅವರು ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ.

ಮಾಜಿ ಸಚಿವರಾದ ಎನ್.ಎಂ.ನಬಿ ಹಾಗೂ ಶಾಸಕ ಗೋಪಾಲಯ್ಯ ಅವರನ್ನು ಜೆಡಿಎಸ್‌ನ ಹಿರಿಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಹನೂರು ಆರ್.ಮಂಜುನಾಥ್ ಅವರನ್ನು ಜೆಡಿಎಸ್‌ನ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ನೂರ್ ಅಹ್ಮದ್ ಯುವ ಘಟಕದ ಕಾರ್ಯಾಧ್ಯಕ್ಷ

ನೂರ್ ಅಹ್ಮದ್ ಯುವ ಘಟಕದ ಕಾರ್ಯಾಧ್ಯಕ್ಷ

ಜೆಡಿಎಸ್ ಯುವ ಘಟಕದ ಕಾರ್ಯಾಧ್ಯಕ್ಷರಾಗಿ ನೂರ್ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ. ಯುವ ಘಟಕದ ಮಹಾಪ್ರಧಾನ ಕಾರ್ಯದರ್ಶಿಯಾಗಿ ಶರಣ್ ಗೌಡ ಕುಂದನೂರ್, ಹಿರಿಯ ಉಪಾಧ್ಯಕ್ಷರಾಗಿ ನರಸಿಂಹಮೂರ್ತಿ ಅವರನ್ನು ನೇಮಿಸಲಾಗಿದೆ.

ರಾಜ್ಯ ಬೂತ್ ಸಮಿತಿ ಅಧ್ಯಕ್ಷ ಸಿ.ಬಿ.ಸುರೇಶ್ ಬಾಬು

ರಾಜ್ಯ ಬೂತ್ ಸಮಿತಿ ಅಧ್ಯಕ್ಷ ಸಿ.ಬಿ.ಸುರೇಶ್ ಬಾಬು

ರಾಜ್ಯ ಬೂತ್ ಸಮಿತಿ ಅಧ್ಯಕ್ಷರಾಗಿ ಸಿ.ಬಿ.ಸುರೇಶ್ ಬಾಬು ಅವರನ್ನು, ಜೆಡಿಎಸ್ ರಾಜ್ಯ ಅಲ್ಪ ಸಂಖ್ಯಾತರ ವಿಭಾಗದ ಅಧ್ಯಕ್ಷರನ್ನಾಗಿ ನಾಸೀರ್ ಭಗವಾನ್ ಅವರನ್ನು ನೇಮಕ ಮಾಡಿ ದೇವೇಗೌಡ ಅವರು ಆದೇಶ ಹೊರಡಿಸಿದ್ದಾರೆ.

ತವರು ಜಿಲ್ಲೆಯಲ್ಲೇ ಸಿಎಂ ಕುಮಾರಸ್ವಾಮಿಗೆ ಮತ್ತೊಂದು ಶಾಕ್ ತವರು ಜಿಲ್ಲೆಯಲ್ಲೇ ಸಿಎಂ ಕುಮಾರಸ್ವಾಮಿಗೆ ಮತ್ತೊಂದು ಶಾಕ್

ಹಲವು ಹೆಸರುಗಳು ಕೇಳಿ ಬಂದಿದ್ದವು

ಹಲವು ಹೆಸರುಗಳು ಕೇಳಿ ಬಂದಿದ್ದವು

ರಾಜ್ಯಾಧ್ಯಕ್ಷ ಸ್ಥಾನಕ್ಕೆ ವೈಎಸ್‌ವಿ.ದತ್ತ, ನಿಖಿಲ್ ಕುಮಾರಸ್ವಾಮಿ, ಬಸರವಾಜ ಹೊರಟ್ಟಿ, ಮಧು ಬಂಗಾರಪ್ಪ ಅವರ ಹೆಸರುಗಳು ಕೇಳಿಬಂದಿತ್ತು. ದೇವೇಗೌಡ ಅವರು ಎಸ್‌ಸಿ ಸಮುದಾಯಕ್ಕೆ ಸೇರಿದ ಎಚ್‌.ಕೆ.ಕುಮಾರಸ್ವಾಮಿ ಅವರ ಹೆಸರನ್ನು ಅಂತಿಮಗೊಳಿಸಿದ್ದಾರೆ.

ದೇವೇಗೌಡರ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ

ದೇವೇಗೌಡರ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ

ಇಂದು ನಡೆದ ಕಾರ್ಯಕ್ರಮದಲ್ಲಿ ವಿಶ್ವನಾಥ್ ಅವರು ಎಚ್‌.ಕೆ.ಕುಮಾರಸ್ವಾಮಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ದೇವೇಗೌಡ ಅವರು ಶಾಲು ಹೊದಿಸಿ, ಹಾರ ಹಾಕಿ ಕುಮಾರಸ್ವಾಮಿ ಅವರಿಗೆ ಅಭಿನಂದಿಸಿದರು. ಯುವ ಘಟಕದ ಅಧ್ಯಕ್ಷರಾಗಿ ಆಯ್ಕೆ ಆಗಿರುವ ನಿಖಿಲ್ ಕುಮಾರಸ್ವಾಮಿ ಅವರು, ತಾತ ದೇವೇಗೌಡ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

ಸಂಕಷ್ಟದ ಸ್ಥಿತಿಯಲ್ಲಿ ಜೆಡಿಎಸ್‌

ಸಂಕಷ್ಟದ ಸ್ಥಿತಿಯಲ್ಲಿ ಜೆಡಿಎಸ್‌

ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ಹೀನಾಯವಾಗಿ ನೆಲಕಚ್ಚಿರುವ ಜೆಡಿಎಸ್ ಪಕ್ಷವು ಬಹುತೇಕ ನೆಲಕಚ್ಚಿದ ಪರಿಸ್ಥಿತಿಯಲ್ಲಿದೆ, ಇಂತಹಾ ಸಂಕಷ್ಟದ ಪರಿಸ್ಥಿತಿಯಲ್ಲಿ ಎಚ್‌.ಕೆ.ಕುಮಾರಸ್ವಾಮಿ ಅವರು ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಅವರ ಹೆಗಲ ಮೇಲೆ ಬಹುದೊಡ್ಡ ಜವಾಬ್ದಾರಿ ಇದೆ.

English summary
Sakaleshpura MLA HK Kumaraswamy appointed as new state president of JDS. Nikhil Kumaraswamy appointed as Youth JDS state president.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X