ಬೆಳಗಾವಿ ಜಿಲ್ಲೆ ವಿಭಜನೆ: ಗುಡ್ ನ್ಯೂಸ್ ಕೊಟ್ಟ ಹೆಚ್ ಕೆ ಪಾಟೀಲ್
ಬೆಳಗಾವಿ: ರಾಜ್ಯದಲ್ಲಿ ಆಡಳಿತ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವುದು ಗುಡ್ ನ್ಯೂಸ್ ಆಗಿದೆ. ಬೆಳಗಾವಿ ವಿಭಜನೆ ಕುರಿತು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ ಸ್ಥಳೀಯ ಶಾಸಕರು ಒಗ್ಗಟ್ಟಿನಿಂದ ನಿರ್ಧಾರ ಕೈಗೊಳ್ಳಬೇಕಿದೆ. ಬೆಳಗಾವಿ ಜಿಲ್ಲೆಯಲ್ಲಿ ಮತ್ತೆರಡು ತಾಲೂಕುಗಳನ್ನ ಜಿಲ್ಲೆಗಳನ್ನಾಗಿ ವಿಭಜಿಸುವ ಕುರಿತು ಸ್ಥಳೀಯ ಜನಪ್ರತಿನಿಧಿಗಳಿಂದ ಒತ್ತಡ ಕೇಳಿ ಬಂದಿದ್ದು, ಇದೀಗ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಮಹತ್ವದ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಚಿಕ್ಕೋಡಿ ನ್ಯಾಯಾಲಯದ ನೂತನ ಕಟ್ಟಡ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮಗಳೊಂದಿಗೆ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಅವರು ಮಾತನಾಡಿ, ಚಿಕ್ಕೋಡಿ ಜಿಲ್ಲಾ ರಚನೆಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿಗಳೊಂದಿಗೆ ಸಭೆ ಮಾಡಿದ್ದಾರೆ. ಚಿಕ್ಕೋಡಿ ಜಿಲ್ಲೆಯಾಗಲು ಬಹಳ ದಿನವಿಲ್ಲ. ಮುಂದಿನ ಹೆಜ್ಜೆಗಳನ್ನಿಡಲು ಬೇಗ ಪ್ರಕ್ರಿಯೆ ಆರಂಭವಾಗಬಹುದು ಎಂದು ಹೇಳಿದರು. ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಭೆ ಮಾಡಿದ್ದಾರೆ. ಸಚಿವರೂ ಕೂಡ ಚಿಕ್ಕೋಡಿ, ಬೆಳಗಾವಿ, ಗೋಕಾಕ್ ಜನರೊಂದಿಗೆ ಸಭೆ ನಡೆಸಿದ್ದಾರೆ. ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಹೊರಬರಲಿದೆ ಎಂದು ತಿಳಿಸಿದರು.

ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ ಅವರು ಬೆಳಗಾವಿ ಡಿಸಿ ವಿರುದ್ಧ ಲೋಕಸಭಾ ಸ್ಪೀಕರ್ಗೆ ದೂರು ನೀಡಿರುವ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು. ಎಲ್ಲೂ ಇಲ್ಲದ ಗೊಂದಲವನ್ನು ಸೃಷ್ಟಿ ಮಾಡಲು ಏಕೆ ಹೊರಟಿದ್ದೀರಿ?. ಕನ್ನಡಿಗರು ಮರಾಠಿಗರು ಸಹೋದರರಂತೆ ಸಹಬಾಳ್ವೆಯಿಂದ ಇದ್ದೇವೆ. ಯಾಕೆ ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ?. ರಾಜಕೀಯ ಉದ್ದೇಶದಿಂದ ಗೊಂದಲ ಸೃಷ್ಟಿ ಮಾಡೋದು ಸೂಕ್ತವಲ್ಲ ಎಂದು ಹೇಳಿದರು.
800 ವರ್ಷಗಳ ಇತಿಹಾಸ ಇರುವ ಚಿಕ್ಕೋಡಿ ನ್ಯಾಯಾಲಯದ ಹೊಸ ಕಟ್ಟಡ ಉದ್ಘಾಟನೆ ಬಹಳ ಸಂತೋಷ ತಂದಿದೆ. ಈ ನ್ಯಾಯಾಲಯಕ್ಕೆ ಅಂಬೇಡ್ಕರ್ ಕೂಡ ಬಂದಿದ್ದರು. ಅವರು ನ್ಯಾಯಕ್ಕಾಗಿ ಹೋರಾಟ ಮಾಡಿರುವ ಇತಿಹಾಸ ಕೇಳಿದ್ದೇವೆ. ಈ ನ್ಯಾಯಾಲಯದ ಬಾರ್ ರಾಜ್ಯಕ್ಕೆ ಬಹು ದೊಡ್ಡ ಕೊಡುಗೆ ಕೊಟ್ಟಿದೆ. ವಿಧಾನಸಭೆ ಸ್ಪೀಕರ್ ಕಟಾವಳಿ ಹೆಸರು ನೆನಪಿಗೆ ಬರುತ್ತದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications